Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...