Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...