Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...