Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....