Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...