Homeಕರ್ನಾಟಕಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಅಂಬೇಡ್ಕರ್‌ರವರ ಜನ್ಮದಿನದಂದು ಮಾತನಾಡಿದ್ದ ವಿದ್ಯಾರ್ಥಿಗೆ ಶಿಕ್ಷಕ ಧರ್ಮರಾಜ್‌ ಕೊಲೆ ಬೆದರಿಕೆ ಹಾಕಿದ್ದ ಆಡಿಯೊ ವೈರಲ್ ಆಗಿದೆ.

- Advertisement -
- Advertisement -

ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿ ಅಂಬೇಡ್ಕರ್‌ರವರ ವಿಚಾರಗಳಿಗೆ ಅವಮಾನ ಮಾಡಿದ್ದ ಶಿಕ್ಷಕನನ್ನು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತು ಮಾಡಿದೆ.

ಕುಶಾಲನಗರದ ಅಂತಿಮ ವರ್ಷದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ವಿದ್ಯಾರ್ಥಿ ಅಭಿಲಾಷ್ ಅವರು ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ನಡೆದ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕು ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಧರ್ಮರಾಜ್‌ ಕೊಲೆ ಬೆದರಿಕೆ ಹಾಕಿದ್ದು, ವೈರಲ್ ಆಗಿದೆ. ಬಳಿಕ ಶಿಕ್ಷಣ ಇಲಾಖೆ ಕ್ರಮ ಜರುಗಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಲಾಷ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆಡಿಯೊ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಜೀವ ಭಯದಲ್ಲಿ ಇರುವಂತಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿಸಿ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಸಂದರ್ಭದಲ್ಲಿ ವಿದ್ಯಾರ್ಥಿಯು ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಧರ್ಮರಾಜ್‌ ಸರ್ಕಾರಿ ನೌಕರರಾಗಿದ್ದು ಅನುಚಿತ ವರ್ತನೆ ತೋರಿರುವುದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಧರ್ಮರಾಜ್‌ ಮಾತನಾಡಿರುವುದೇನು?

ಸುಮಾರು ಇಪ್ಪತ್ತು ನಿಮಿಷಗಳ ಕಾಲ ವಿದ್ಯಾರ್ಥಿ ಅಭಿಲಾಷ್‌ ಜೊತೆ ಮಾತನಾಡಿದ್ದ ಧರ್ಮರಾಜ್‌, ಗೌರಿ ಲಂಕೇಶ್‌, ನರೇಂದ್ರ ದಾಬೋಲ್ಕರ್‌, ಎಂ.ಎಂ.ಕಲ್ಬುರ್ಗಿ ಹಾಗೂ ಗೋವಿಂದ ಪಾನ್ಸರೆಯವರು ಹತ್ಯೆಯಾದಂತೆ ನಿನ್ನನ್ನೂ ಹತ್ಯೆ ಮಾಡಲಾಗುತ್ತದೆ ಎಂದು ಹೆದರಿಸಿದ್ದರು.

ಅನಾಮಧೇಯನಾಗಿ ಧಾರವಾಡದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದ ಧರ್ಮರಾಜ್‌, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಚಾರಗಳನ್ನು ಮಾತನಾಡಬೇಡ ಎಂದು ವಿದ್ಯಾರ್ಥಿಗೆ ತಾಕೀತು ಮಾಡಿದ್ದರು. ಜೊತೆಗೆ ‘ನಾನೊಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ’ ಎಂದು ಒಪ್ಪಿಕೊಂಡಿದ್ದರು.

ಇದನ್ನೂ ಓದಿರಿ: 2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

ಅಂಬೇಡ್ಕರ್‌ ಬೌದ್ಧಕ್ಕೆ ಹೋದರು. ಹಿಂದೂ ಧರ್ಮವನ್ನು ತ್ಯಜಿಸಿದರು. ಅವರ ಬಗ್ಗೆ ಮಾತನಾಡಬಾರದು. ಮುಸ್ಲಿಮರು ಮತ್ತು ದಲಿತರು ದೇಶಕ್ಕೆ ಅಪಾಯಕಾರಿ ಎಂದು ಬೆದರಿಸಿದ್ದರು. ವಿದ್ಯಾರ್ಥಿಯ ವೈಯಕ್ತಿಕ ವಿವರಗಳನ್ನು ಕಲೆಹಾಕಿಕೊಳ್ಳುವಂತೆ ಮಾತನಾಡಿ, ‘ತಾಕತ್ತಿದ್ದರೆ ನೀನು ಇರುವಲ್ಲಿ ನಾಲ್ಕು ಜನ ನಿನ್ನಂಥವರನ್ನು ಹುಟ್ಟಿ ಹಾಕು ನೋಡೋಣ, ಜೈ ಭೀಮ್ ಎಂದು ಕೂಗು ನೋಡೋಣ’ ಎಂದೆಲ್ಲ ಬೆದರಿಸಿದ್ದರು. ಅಭಿಲಾಷ್ ಧೈರ್ಯದಿಂದಲೇ ಮಾತನಾಡಿ, ಅಂಬೇಡ್ಕರ್‌ ಕುರಿತು ನಿಮಗೇಕೆ ಬೇಸರ ಎಂದು ಪ್ರಶ್ನಿಸಿದ್ದರು. ಆಡಿಯೊ ವೈರಲ್ ಆದ ಬಳಿಕ ಧರ್ಮರಾಜ್ ಸಿಕ್ಕಿ ಬಿದ್ದಿದ್ದಾರೆ.

ಎಸ್‌ಸಿ ಸಮುದಾಯಕ್ಕೆ ಸೇರಿದ ಧರ್ಮರಾಜ್‌

ದಲಿತ ಮುಖಂಡರು ಧರ್ಮರಾಜ್ ಅವರಿಂದ ಕ್ಷಮೆ ಯಾಚಿಸಿದ್ದಾರೆ. “ನನ್ನಿಂದ ತಪ್ಪಾಗಿದೆ. ಮತ್ತೆಂದೂ ಈ ರೀತಿಯ ತಪ್ಪು ಮಾಡುವುದಿಲ್ಲ. ನಾನು ಕೂಡ ಪರಿಶಿಷ್ಟ ಜಾತಿಗೆ ಸೇರಿದವನು. ವಿದ್ಯಾರ್ಥಿ ಅಭಿಲಾಷ್ ಅವರಲ್ಲೂ ಕ್ಷಮೆ ಕೋರುತ್ತೇನೆ” ಎಂದು ಧರ್ಮರಾಜ್ ಹೇಳಿದ್ದಾರೆ.

ದಲಿತ ಮುಖಂಡರು ಧರ್ಮರಾಜ್‌ಗೆ ಬುದ್ಧಿ ಹೇಳಿ ಕಳಿಸಿದ್ದಾರೆ. ಶಿಕ್ಷಕನಾಗಿ ಮಾಡಿದ ಅತಾರ್ಚುಕ್ಕೆ ಶಿಕ್ಷಣ ಇಲಾಖೆ ಈಗ ಕ್ರಮ ಜರುಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...