Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...