Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...