Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...