Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...