Homeಕರ್ನಾಟಕಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

ಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

- Advertisement -
- Advertisement -

ಮಡಿಕೇರಿ: ಶಾಲಾ ಕಾಲೇಜುಗಳ ಮಕ್ಕಳಿಗೆ ಕೇಸರಿ ಶಲ್ಯ ವಿತರಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಕೋಮು ಪ್ರಚೋದನೆಯನ್ನು ಮಾಡಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲದಲ್ಲಿ ಬಜರಂಗದಳ ಮತ್ತು ದುರ್ಗಾವಾಹಿನಿಯ ಮುಖಂಡರು ಸೇರಿ ಕೇಸರಿ ಶಲ್ಯ ವಿತರಿಸಿದ್ದಾರೆ ಎಂದು ತಿಳಿದುಬಂದಿದೆ.

“ಸದ್ಯಕ್ಕೆ ಯೂನಿಫಾರ್ಮ್ ಫೋಲೋ ಮಾಡಿ, ಏನೂ ಮಾಡಬೇಡಿ… ಮಧ್ಯಂತರ ಆದೇಶ ಇದೆ. ಶಲ್ಯವನ್ನು ಬ್ಯಾಗೊಳಗೆ ಇಡ್ಕೊಳಿ… ಬ್ಯಾಗೊಳಗೂ ಬೇಡ… ಮನೆಯಲ್ಲಿ ಇಡ್ಕೊಳಿ” ಎಂದು ದುರ್ಗಾವಾಹಿನಿಯ ಮಹಿಳಾ ಪ್ರತಿನಿಧಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ಪುಟ್ಟ ಮಕ್ಕಳು ಸೇರಿದಂತೆ ವಿದ್ಯಾರ್ಥಿ ಸಮುದಾಯದಲ್ಲಿ ಕೋಮು ವೈರತ್ವವನ್ನು ಪ್ರಚೋದಿಸಿರುವ ಬಜರಂಗದಳ ಹಾಗೂ ದುರ್ಗಾವಾಹಿನಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಿಜಾಬ್‌ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸಿದ ಬಳಿಕ ವಿವಾದ ಮುನ್ನೆಲೆಗೆ ಬಂದಿತ್ತು. ಹಿಜಾಬ್‌ ಮೊದಲಿನಿಂದಲೂ ಧರಿಸಲಾಗುತ್ತಿತ್ತು. ಆದರೆ ಕೇಸರಿ ಶಾಲನ್ನು ಹಿಜಾಬ್‌ ವಿರೋಧಿಯಾಗಿ ಬಳಸಿ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳು ಆರಂಭಿಸಿದರು. ಇದರ ಹಿಂದೆ ಕೇಸರಿ ಸಂಘಟನೆಗಳ ಪ್ರಚೋದನೆ ಇತ್ತೆಂಬುದಕ್ಕೆ ಈಗಾಗಲೇ ಹಲವು ವರದಿಗಳು ಸಾಕ್ಷಿಯಾಗಿವೆ.

ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲು ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಪ್ರಚೋದಿಸಿದ್ದವು. ಕೇಸರಿ ಶಾಲು ಹಾಗೂ ಕೇಸರಿ ಪೇಟವನ್ನು ಹಿಂಜಾವೇ ವಿತರಿಸಿತ್ತು ಎಂಬುದನ್ನು ‘ದಿ ನ್ಯೂಸ್ ಮಿನಿಟ್‌’ ಜಾಲತಾಣ ವರದಿ ಮಾಡಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)

ಮಡಿಕೇರಿಯ ಫೀಲ್ಡ್‌ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವಂತೆ ಬಿಜೆಪಿ ಬೆಂಬಲಿತ ಹಿಂದುತ್ವ ಮುಖಂಡರು ಪ್ರಚೋದನೆ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶವನ್ನು ಹರಾಜಿಗೆ ಚಾಲನೆ ನೀಡಿ ಯುವ ಶಕ್ತಿಯ ಬಿಸಿ ಆಲೋಚನೆಗಳನ್ನು ದಿಕ್ಕ ತಪಸುತ್ತಿರುವ ಸನಾತನಿಗಳ ಮರ್ಮ ಅರ್ಥವಾಗುತ್ತದೆ.

    ಜನ ಜಾಗೃತಿ ಅಗತ್ಯ

  2. ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ಯಾವ ರೀತಿಯ ಶಿಕ್ಷಣ ನೀಡಬೇಕೆಂಬ ಉದ್ದೇಶ ಈ ನೋ ಸರ್ಕಾರಕ್ಕೆ ಇಲ್ಲ.. ಆದರೆ ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡೊಂದು ಎಷ್ಟು ಮಟ್ಟಿಗೆ ಸರಿ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳ ಭವಿಷ್ಯದ ಜೊತೆ ಗೆ ಆಟ ಆಡೊಂದು ಸರಿ ಅಲ್ಲ . ಕೋಮುಗಲಭೆ ಧರ್ಮಾಧಾರಿತದೂರಣೆಗಳಿಗೆ ಈ ಶಿಕ್ಷಣ ಕ್ಷೇತ್ರದಲ್ಲಿ ಅವಕಾಶ ಇಲ್ಲ. ಏನು ಗೊತ್ತಿಲ್ಲದ ಈ ಮಕ್ಕಳಿಗೆ ನೀವು ದ್ವೇಷ ಭಾವನೆ ಬಿತ್ತುವುದು ಎಷ್ಟರ ಮಟ್ಟಿಗೆ ಸರಿ…
    ಶಾಲಾ ಕಾಲೇಜುಗಳಿಗೆ ಹೋಗಿ ಕೇಸರಿ ಶಲ್ಯ ವಿತರಣೆ ಮಾಡೂ ನೀವು ನೀವೇ ಜನ್ಮಕೊಂತಹ ಮಕ್ಕಳಿಗೆ ಈ ತರ ಶಲ್ಯ ಹಾಕಿ ಬಿದಿ ಬಿದಿಗೆ ಬಿಡಿ ನೋಡೋಣ ಆ ನಿಮ್ಮ ರಕ್ತದ ತಾಕತ್ತು ಗೊತ್ತಾಗಲಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...