Homeಕರ್ನಾಟಕಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

ಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

- Advertisement -
- Advertisement -

ಮಡಿಕೇರಿ: ಶಾಲಾ ಕಾಲೇಜುಗಳ ಮಕ್ಕಳಿಗೆ ಕೇಸರಿ ಶಲ್ಯ ವಿತರಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಕೋಮು ಪ್ರಚೋದನೆಯನ್ನು ಮಾಡಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲದಲ್ಲಿ ಬಜರಂಗದಳ ಮತ್ತು ದುರ್ಗಾವಾಹಿನಿಯ ಮುಖಂಡರು ಸೇರಿ ಕೇಸರಿ ಶಲ್ಯ ವಿತರಿಸಿದ್ದಾರೆ ಎಂದು ತಿಳಿದುಬಂದಿದೆ.

“ಸದ್ಯಕ್ಕೆ ಯೂನಿಫಾರ್ಮ್ ಫೋಲೋ ಮಾಡಿ, ಏನೂ ಮಾಡಬೇಡಿ… ಮಧ್ಯಂತರ ಆದೇಶ ಇದೆ. ಶಲ್ಯವನ್ನು ಬ್ಯಾಗೊಳಗೆ ಇಡ್ಕೊಳಿ… ಬ್ಯಾಗೊಳಗೂ ಬೇಡ… ಮನೆಯಲ್ಲಿ ಇಡ್ಕೊಳಿ” ಎಂದು ದುರ್ಗಾವಾಹಿನಿಯ ಮಹಿಳಾ ಪ್ರತಿನಿಧಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ಪುಟ್ಟ ಮಕ್ಕಳು ಸೇರಿದಂತೆ ವಿದ್ಯಾರ್ಥಿ ಸಮುದಾಯದಲ್ಲಿ ಕೋಮು ವೈರತ್ವವನ್ನು ಪ್ರಚೋದಿಸಿರುವ ಬಜರಂಗದಳ ಹಾಗೂ ದುರ್ಗಾವಾಹಿನಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಿಜಾಬ್‌ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸಿದ ಬಳಿಕ ವಿವಾದ ಮುನ್ನೆಲೆಗೆ ಬಂದಿತ್ತು. ಹಿಜಾಬ್‌ ಮೊದಲಿನಿಂದಲೂ ಧರಿಸಲಾಗುತ್ತಿತ್ತು. ಆದರೆ ಕೇಸರಿ ಶಾಲನ್ನು ಹಿಜಾಬ್‌ ವಿರೋಧಿಯಾಗಿ ಬಳಸಿ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳು ಆರಂಭಿಸಿದರು. ಇದರ ಹಿಂದೆ ಕೇಸರಿ ಸಂಘಟನೆಗಳ ಪ್ರಚೋದನೆ ಇತ್ತೆಂಬುದಕ್ಕೆ ಈಗಾಗಲೇ ಹಲವು ವರದಿಗಳು ಸಾಕ್ಷಿಯಾಗಿವೆ.

ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲು ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಪ್ರಚೋದಿಸಿದ್ದವು. ಕೇಸರಿ ಶಾಲು ಹಾಗೂ ಕೇಸರಿ ಪೇಟವನ್ನು ಹಿಂಜಾವೇ ವಿತರಿಸಿತ್ತು ಎಂಬುದನ್ನು ‘ದಿ ನ್ಯೂಸ್ ಮಿನಿಟ್‌’ ಜಾಲತಾಣ ವರದಿ ಮಾಡಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)

ಮಡಿಕೇರಿಯ ಫೀಲ್ಡ್‌ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವಂತೆ ಬಿಜೆಪಿ ಬೆಂಬಲಿತ ಹಿಂದುತ್ವ ಮುಖಂಡರು ಪ್ರಚೋದನೆ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶವನ್ನು ಹರಾಜಿಗೆ ಚಾಲನೆ ನೀಡಿ ಯುವ ಶಕ್ತಿಯ ಬಿಸಿ ಆಲೋಚನೆಗಳನ್ನು ದಿಕ್ಕ ತಪಸುತ್ತಿರುವ ಸನಾತನಿಗಳ ಮರ್ಮ ಅರ್ಥವಾಗುತ್ತದೆ.

    ಜನ ಜಾಗೃತಿ ಅಗತ್ಯ

  2. ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ಯಾವ ರೀತಿಯ ಶಿಕ್ಷಣ ನೀಡಬೇಕೆಂಬ ಉದ್ದೇಶ ಈ ನೋ ಸರ್ಕಾರಕ್ಕೆ ಇಲ್ಲ.. ಆದರೆ ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡೊಂದು ಎಷ್ಟು ಮಟ್ಟಿಗೆ ಸರಿ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳ ಭವಿಷ್ಯದ ಜೊತೆ ಗೆ ಆಟ ಆಡೊಂದು ಸರಿ ಅಲ್ಲ . ಕೋಮುಗಲಭೆ ಧರ್ಮಾಧಾರಿತದೂರಣೆಗಳಿಗೆ ಈ ಶಿಕ್ಷಣ ಕ್ಷೇತ್ರದಲ್ಲಿ ಅವಕಾಶ ಇಲ್ಲ. ಏನು ಗೊತ್ತಿಲ್ಲದ ಈ ಮಕ್ಕಳಿಗೆ ನೀವು ದ್ವೇಷ ಭಾವನೆ ಬಿತ್ತುವುದು ಎಷ್ಟರ ಮಟ್ಟಿಗೆ ಸರಿ…
    ಶಾಲಾ ಕಾಲೇಜುಗಳಿಗೆ ಹೋಗಿ ಕೇಸರಿ ಶಲ್ಯ ವಿತರಣೆ ಮಾಡೂ ನೀವು ನೀವೇ ಜನ್ಮಕೊಂತಹ ಮಕ್ಕಳಿಗೆ ಈ ತರ ಶಲ್ಯ ಹಾಕಿ ಬಿದಿ ಬಿದಿಗೆ ಬಿಡಿ ನೋಡೋಣ ಆ ನಿಮ್ಮ ರಕ್ತದ ತಾಕತ್ತು ಗೊತ್ತಾಗಲಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...