Homeಕರ್ನಾಟಕಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

ಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

- Advertisement -
- Advertisement -

ಮಡಿಕೇರಿ: ಶಾಲಾ ಕಾಲೇಜುಗಳ ಮಕ್ಕಳಿಗೆ ಕೇಸರಿ ಶಲ್ಯ ವಿತರಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಕೋಮು ಪ್ರಚೋದನೆಯನ್ನು ಮಾಡಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲದಲ್ಲಿ ಬಜರಂಗದಳ ಮತ್ತು ದುರ್ಗಾವಾಹಿನಿಯ ಮುಖಂಡರು ಸೇರಿ ಕೇಸರಿ ಶಲ್ಯ ವಿತರಿಸಿದ್ದಾರೆ ಎಂದು ತಿಳಿದುಬಂದಿದೆ.

“ಸದ್ಯಕ್ಕೆ ಯೂನಿಫಾರ್ಮ್ ಫೋಲೋ ಮಾಡಿ, ಏನೂ ಮಾಡಬೇಡಿ… ಮಧ್ಯಂತರ ಆದೇಶ ಇದೆ. ಶಲ್ಯವನ್ನು ಬ್ಯಾಗೊಳಗೆ ಇಡ್ಕೊಳಿ… ಬ್ಯಾಗೊಳಗೂ ಬೇಡ… ಮನೆಯಲ್ಲಿ ಇಡ್ಕೊಳಿ” ಎಂದು ದುರ್ಗಾವಾಹಿನಿಯ ಮಹಿಳಾ ಪ್ರತಿನಿಧಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ಪುಟ್ಟ ಮಕ್ಕಳು ಸೇರಿದಂತೆ ವಿದ್ಯಾರ್ಥಿ ಸಮುದಾಯದಲ್ಲಿ ಕೋಮು ವೈರತ್ವವನ್ನು ಪ್ರಚೋದಿಸಿರುವ ಬಜರಂಗದಳ ಹಾಗೂ ದುರ್ಗಾವಾಹಿನಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಿಜಾಬ್‌ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸಿದ ಬಳಿಕ ವಿವಾದ ಮುನ್ನೆಲೆಗೆ ಬಂದಿತ್ತು. ಹಿಜಾಬ್‌ ಮೊದಲಿನಿಂದಲೂ ಧರಿಸಲಾಗುತ್ತಿತ್ತು. ಆದರೆ ಕೇಸರಿ ಶಾಲನ್ನು ಹಿಜಾಬ್‌ ವಿರೋಧಿಯಾಗಿ ಬಳಸಿ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳು ಆರಂಭಿಸಿದರು. ಇದರ ಹಿಂದೆ ಕೇಸರಿ ಸಂಘಟನೆಗಳ ಪ್ರಚೋದನೆ ಇತ್ತೆಂಬುದಕ್ಕೆ ಈಗಾಗಲೇ ಹಲವು ವರದಿಗಳು ಸಾಕ್ಷಿಯಾಗಿವೆ.

ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲು ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಪ್ರಚೋದಿಸಿದ್ದವು. ಕೇಸರಿ ಶಾಲು ಹಾಗೂ ಕೇಸರಿ ಪೇಟವನ್ನು ಹಿಂಜಾವೇ ವಿತರಿಸಿತ್ತು ಎಂಬುದನ್ನು ‘ದಿ ನ್ಯೂಸ್ ಮಿನಿಟ್‌’ ಜಾಲತಾಣ ವರದಿ ಮಾಡಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)

ಮಡಿಕೇರಿಯ ಫೀಲ್ಡ್‌ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವಂತೆ ಬಿಜೆಪಿ ಬೆಂಬಲಿತ ಹಿಂದುತ್ವ ಮುಖಂಡರು ಪ್ರಚೋದನೆ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶವನ್ನು ಹರಾಜಿಗೆ ಚಾಲನೆ ನೀಡಿ ಯುವ ಶಕ್ತಿಯ ಬಿಸಿ ಆಲೋಚನೆಗಳನ್ನು ದಿಕ್ಕ ತಪಸುತ್ತಿರುವ ಸನಾತನಿಗಳ ಮರ್ಮ ಅರ್ಥವಾಗುತ್ತದೆ.

    ಜನ ಜಾಗೃತಿ ಅಗತ್ಯ

  2. ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ಯಾವ ರೀತಿಯ ಶಿಕ್ಷಣ ನೀಡಬೇಕೆಂಬ ಉದ್ದೇಶ ಈ ನೋ ಸರ್ಕಾರಕ್ಕೆ ಇಲ್ಲ.. ಆದರೆ ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡೊಂದು ಎಷ್ಟು ಮಟ್ಟಿಗೆ ಸರಿ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳ ಭವಿಷ್ಯದ ಜೊತೆ ಗೆ ಆಟ ಆಡೊಂದು ಸರಿ ಅಲ್ಲ . ಕೋಮುಗಲಭೆ ಧರ್ಮಾಧಾರಿತದೂರಣೆಗಳಿಗೆ ಈ ಶಿಕ್ಷಣ ಕ್ಷೇತ್ರದಲ್ಲಿ ಅವಕಾಶ ಇಲ್ಲ. ಏನು ಗೊತ್ತಿಲ್ಲದ ಈ ಮಕ್ಕಳಿಗೆ ನೀವು ದ್ವೇಷ ಭಾವನೆ ಬಿತ್ತುವುದು ಎಷ್ಟರ ಮಟ್ಟಿಗೆ ಸರಿ…
    ಶಾಲಾ ಕಾಲೇಜುಗಳಿಗೆ ಹೋಗಿ ಕೇಸರಿ ಶಲ್ಯ ವಿತರಣೆ ಮಾಡೂ ನೀವು ನೀವೇ ಜನ್ಮಕೊಂತಹ ಮಕ್ಕಳಿಗೆ ಈ ತರ ಶಲ್ಯ ಹಾಕಿ ಬಿದಿ ಬಿದಿಗೆ ಬಿಡಿ ನೋಡೋಣ ಆ ನಿಮ್ಮ ರಕ್ತದ ತಾಕತ್ತು ಗೊತ್ತಾಗಲಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...