Homeಮುಖಪುಟಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

- Advertisement -
- Advertisement -

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಕಲ್ಪಿಸಲಾಗಿದ್ದ ಪುನರ್‌ವಸತಿ ಕೇಂದ್ರವನ್ನು ತೊರೆದ ಆದಿವಾಸಿಗಳು ಮತ್ತೆ ಕೊಡಗು ಜಿಲ್ಲೆಯಲ್ಲಿನ ತಮ್ಮ ಮೂಲಸ್ಥಳಕ್ಕೆ ತೆರಳಿ ಪ್ರತಿಭಟಿಸಿದ್ದಾರೆ.

ಕಾಡಿನಲ್ಲಿ ನೆಮ್ಮದಿಯಾಗಿದ್ದ ನಮ್ಮನ್ನು ಪುನರ್‌ ವಸತಿ ಕೇಂದ್ರಕ್ಕೆ ಕರೆದೊಯ್ಯುವಾಗ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಆದಿವಾಸಿಗಳು ಮತ್ತೆ ತಮ್ಮ ತವರಿಗೆ ಮರಳಲು ಯತ್ನಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾಸ್ತಿಗುಡಿ ಪುನರ್‌ ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದ ನೂರಾರು ಜೇಬುಕುರುಬ ಹಾಗೂ ಯರವ ಸಮುದಾಯದ ಆದಿವಾಸಿ ಕುಟುಂಬಗಳು ಪುನರ್‌ ವಸತಿ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಡಗಿನ ಬಾಳಲೆಗೆ ಗ್ರಾಮ ಪಂಚಾಯಿತಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಗೇಟ್‌ ಬಳಿ  ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೊಡಗಿನ ಸ್ಥಳೀಯ ಪತ್ರಿಕೆ ‘ಶಕ್ತಿ’ ಮುಖಪುಟದಲ್ಲಿ ವರದಿ ಮಾಡಿದೆ.

ಅಡುಗುಂಡಿಯಲ್ಲಿ ವಾಸವಿದ್ದ ನೂರಾರು ಆದಿವಾಸಿ ಕುಟುಂಬಗಳನ್ನು ಮನವೊಲಿಸುವ ಮೂಲಕ ಇಲ್ಲಿನ ಅರಣ್ಯ ಪ್ರದೇಶದಿಂದ ಮೈಸೂರು ಜಿಲ್ಲೆಯ ಕಸಬಾ ಹೋಬಳಿಯ ರಾಜೇಗೌಡನ ಹುಂಡಿ ಗ್ರಾಮದ ಸರ್ವೇ ನಂ. 37ರ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಪ್ರತಿಕುಟುಂಬಕ್ಕೆ 15 ಲಕ್ಷ ರೂ. ಪ್ಯಾಕೇಜಿನಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಲಾಗಿತ್ತು. ಸರ್ಕಾರದ ಮಾತು ನಂಬಿದ ಆದಿವಾಸಿಗಳು ಕಾಡು ತೊರೆದು ಬಂದಿದ್ದರು.

ಇದನ್ನೂ ಓದಿರಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಕೇಂದ್ರ ಸರ್ಕಾರದ ಪುನರ್‌ ವಸತಿ ಯೋಜನೆಯಡಿಯಲ್ಲಿ ಅರಣ್ಯ ಮತ್ತು ಪರಿಸರ ಮಂತ್ರಾಲಯವು ಇವರಿಗೆ ಜಮೀನು ಹಾಗೂ ನಿವೇಶನದ ಸ್ವಾಧೀನ ಪತ್ರಗಳನ್ನು ನೀಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಈ ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ತರುವಾಗ ಗುಣಮಟ್ಟದ ಆರ್‌ಸಿಸಿ ಮನೆ, ಮೂರು ಎಕರೆ ಜಮೀನು, ಆರಂಭದಲ್ಲಿ 75 ಸಾವಿರ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿ 2.50 ಲಕ್ಷ ಹಣವನ್ನು ಪ್ಯಾಕೇಜಿನಡಿ ಘೋಷಿಸಿ ಇವುಗಳಿಗೆ ಒಪ್ಪಿಗೆ ಸೂಚಿಸಿದ ಕುಟುಂಬಗಳನ್ನು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮೂಲಕ ಕಳುಹಿಸಿಕೊಡಲಾಯಿತು.

ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಪುನರ್ವಸತಿ ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಭೂಮಿಯನ್ನು ಖಾತೆ ಮಾಡಿಕೊಡದೆ, ಕೃಷಿಗೆ ಭೂಮಿ ನೀಡದೆ ಅನ್ಯಾಯವೆಸಗಿದ್ದಾರೆ. ಹೀಗಾಗಿ ಅಧಿಕಾರಿಗಳೊಂದಿಗೆ ಆದಿವಾಸಿಗಳು ಸಂಘರ್ಷ ನಡೆಸುತ್ತಲೇ ಇದ್ದಾರೆ. ಅಧಿಕಾರಿಗಳು ಪುನರ್ವಸತಿ  ಕೇಂದ್ರಕ್ಕೆ ಆಗಮಿಸಿ ಸೌಲಭ್ಯ ಒದಗಿಸುವ ಬಗ್ಗೆ ಭರವಸೆ ನೀಡುತ್ತಾರೆ. ಆರು ತಿಂಗಳಲ್ಲಿ ಬೇರೆಡೆಗೆ ವರ್ಗಾವಣೆಯಾಗುತ್ತಾರೆ. ಹೊಸ ಅಧಿಕಾರಿ ಬಂದಾಗಲೂ ಇದೇ ರೀತಿಯ ಭರವಸೆ ನೀಡುತ್ತಾರೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂಬುದು ಆದಿವಾಸಿಗಳ ಕೂಗು.

ಸಿಟ್ಟಿಗೆದ್ದ ಆದಿವಾಸಿಗಳು ಹಾಡಿ ಮುಖಂಡರಾದ ಜೇನು ಕುರುಬರ ಟಿ.ಅಯ್ಯಪ್ಪ ಹಾಗೂ ಜೇಬು ಕುರುಬರ ಎಂ.ಸಣ್ಣಯ್ಯ ನೇತೃತ್ವದಲ್ಲಿ ಹೊರಟು ಅಡಗುಂಡಿ ಅರಣ್ಯಕ್ಕೆ ಆಗಮಿಸಿದರು. ವಿಷಯ ತಿಳಿದ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಡುಗುಂಡಿಗೇಟ್ ಬಳಿಯೇ ಆದಿವಾಸಿಗಳನ್ನು ತಡೆದಿದ್ದಾರೆ. ಗೇಟ್‌ ಬಳಿಯೇ ಪ್ರತಿಭಟನೆಯನ್ನು ನಡೆಸಿದಾಗ, ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದಾರೆ.

“ಆರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳು ಬದಲಾಗುತ್ತಾರೆ. ಆಶ್ವಾಸನಗೆಗಳು ಹಾಗೆಯೇ ಉಳಿಯುತ್ತವೆ. ಮೂರು ಎಕರೆ ಜಮೀನಿಗೆ ಯಾವುದೇ ಆರ್‌ಟಿಸಿ ಇಲ್ಲಿಯತನಕ ನೀಡಿಲ್ಲ. ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಭೂಮಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಮಾತು ಉಳಿಸಿಕೊಂಡಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರ್‌ ವಸತಿಗೆ ತೆರಳುವ ವೇಳೆ 15 ಲಕ್ಷ ರೂ. ಪ್ಯಾಕೇಜಿನೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹತ್ತು ಲಕ್ಷ ಪ್ಯಾಕೇಜನ್ನು ನೀಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಪ್ಯಾಕೇಜನ್ನು ನೀಡಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ ಸಾಧ್ಯವಾಗುತ್ತಿಲ್ಲ. ಕೊಡಗಿನ ಅರಣ್ಯದ ಗುಡಿಸಲುಗಳಲ್ಲಿ ನೆಮ್ಮದಿಯಾಗಿದ್ದೆವು. ಇದೀಗ ನಾಡಿಗೆ ಕರೆದೊಯ್ದು ನಮ್ಮ ಜೀವನವನ್ನು ಅತಂತ್ರ ಮಾಡಿದ್ದೀರಿ. ಯಾರೂ ಕೂಡ ಈಗ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಉಪವಿಭಾಗಾಧಿಕಾರಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದು, “ಆದಿವಾಸಿಗಳಿಗೆ ನೀಡಬೇಕಿದ್ದ ಸವಲತ್ತುಗಳನ್ನು ಈಡೇರಿಸುವ ಕೆಲಸವು ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ” ಎಂದರು.

ಬುಡಕಟ್ಟು ಸಮುದಾಯಗಳ ಪರ ಕೆಲಸ ಮಾಡುತ್ತಿರುವ ಪ್ರೊ.ಎ.ಎಸ್.ಪ್ರಭಾಕರ್‌ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳು ಭರವಸೆಯಾಗಿದೆಯೇ ಉಳಿದರೆ ವಂಚನೆ ಮಾಡಿದಂತೆ. ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಕಾಯ್ದೆ ಕಾರವೊಡ್ಡಿ ಆದಿವಾಸಿಗಳನ್ನು ಪುನರ್ವಸತಿಗೆ ತರಲಾಯಿತು. 15 ಲಕ್ಷ ರೂ.ಗಳ ಪ್ಯಾಕೇಜ್‌ ಹಾಗೂ ಜಮೀನು ನೀಡುವುದಾಗಿ ಹೇಳಲಾಗಿತ್ತು. ಈ ಭರವಸೆಗಳನ್ನು ಈಡೇರಿಸಿಲ್ಲ. ಇಷ್ಟು ಜನ ಮಾತ್ರವಲ್ಲ; ಊರು ಊರುಗಳನ್ನೇ ಎತ್ತಂಗಡಿ ಮಾಡಲಾಗಿದೆ. ಸಾವಿರಾರು ಕುಟುಂಬಗಳು ಅತಂತ್ರವಾಗಿವೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is true..
    We sd give support, help for their human rights ruined by forest departments and environmentalists, green tribunal wrong orders,,ngo etc…
    Farmers only are the real protectors of land ,forest,peoples leaving around.
    Farmers plantations are more green maintained in most of kodagu ,chickmangloor, areas than reserved forests looks baren. Without trees and water tables ..
    Only money is spent on forest developments

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...