Homeಮುಖಪುಟಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

- Advertisement -
- Advertisement -

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಕಲ್ಪಿಸಲಾಗಿದ್ದ ಪುನರ್‌ವಸತಿ ಕೇಂದ್ರವನ್ನು ತೊರೆದ ಆದಿವಾಸಿಗಳು ಮತ್ತೆ ಕೊಡಗು ಜಿಲ್ಲೆಯಲ್ಲಿನ ತಮ್ಮ ಮೂಲಸ್ಥಳಕ್ಕೆ ತೆರಳಿ ಪ್ರತಿಭಟಿಸಿದ್ದಾರೆ.

ಕಾಡಿನಲ್ಲಿ ನೆಮ್ಮದಿಯಾಗಿದ್ದ ನಮ್ಮನ್ನು ಪುನರ್‌ ವಸತಿ ಕೇಂದ್ರಕ್ಕೆ ಕರೆದೊಯ್ಯುವಾಗ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಆದಿವಾಸಿಗಳು ಮತ್ತೆ ತಮ್ಮ ತವರಿಗೆ ಮರಳಲು ಯತ್ನಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾಸ್ತಿಗುಡಿ ಪುನರ್‌ ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದ ನೂರಾರು ಜೇಬುಕುರುಬ ಹಾಗೂ ಯರವ ಸಮುದಾಯದ ಆದಿವಾಸಿ ಕುಟುಂಬಗಳು ಪುನರ್‌ ವಸತಿ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಡಗಿನ ಬಾಳಲೆಗೆ ಗ್ರಾಮ ಪಂಚಾಯಿತಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಗೇಟ್‌ ಬಳಿ  ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೊಡಗಿನ ಸ್ಥಳೀಯ ಪತ್ರಿಕೆ ‘ಶಕ್ತಿ’ ಮುಖಪುಟದಲ್ಲಿ ವರದಿ ಮಾಡಿದೆ.

ಅಡುಗುಂಡಿಯಲ್ಲಿ ವಾಸವಿದ್ದ ನೂರಾರು ಆದಿವಾಸಿ ಕುಟುಂಬಗಳನ್ನು ಮನವೊಲಿಸುವ ಮೂಲಕ ಇಲ್ಲಿನ ಅರಣ್ಯ ಪ್ರದೇಶದಿಂದ ಮೈಸೂರು ಜಿಲ್ಲೆಯ ಕಸಬಾ ಹೋಬಳಿಯ ರಾಜೇಗೌಡನ ಹುಂಡಿ ಗ್ರಾಮದ ಸರ್ವೇ ನಂ. 37ರ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಪ್ರತಿಕುಟುಂಬಕ್ಕೆ 15 ಲಕ್ಷ ರೂ. ಪ್ಯಾಕೇಜಿನಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಲಾಗಿತ್ತು. ಸರ್ಕಾರದ ಮಾತು ನಂಬಿದ ಆದಿವಾಸಿಗಳು ಕಾಡು ತೊರೆದು ಬಂದಿದ್ದರು.

ಇದನ್ನೂ ಓದಿರಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಕೇಂದ್ರ ಸರ್ಕಾರದ ಪುನರ್‌ ವಸತಿ ಯೋಜನೆಯಡಿಯಲ್ಲಿ ಅರಣ್ಯ ಮತ್ತು ಪರಿಸರ ಮಂತ್ರಾಲಯವು ಇವರಿಗೆ ಜಮೀನು ಹಾಗೂ ನಿವೇಶನದ ಸ್ವಾಧೀನ ಪತ್ರಗಳನ್ನು ನೀಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಈ ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ತರುವಾಗ ಗುಣಮಟ್ಟದ ಆರ್‌ಸಿಸಿ ಮನೆ, ಮೂರು ಎಕರೆ ಜಮೀನು, ಆರಂಭದಲ್ಲಿ 75 ಸಾವಿರ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿ 2.50 ಲಕ್ಷ ಹಣವನ್ನು ಪ್ಯಾಕೇಜಿನಡಿ ಘೋಷಿಸಿ ಇವುಗಳಿಗೆ ಒಪ್ಪಿಗೆ ಸೂಚಿಸಿದ ಕುಟುಂಬಗಳನ್ನು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮೂಲಕ ಕಳುಹಿಸಿಕೊಡಲಾಯಿತು.

ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಪುನರ್ವಸತಿ ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಭೂಮಿಯನ್ನು ಖಾತೆ ಮಾಡಿಕೊಡದೆ, ಕೃಷಿಗೆ ಭೂಮಿ ನೀಡದೆ ಅನ್ಯಾಯವೆಸಗಿದ್ದಾರೆ. ಹೀಗಾಗಿ ಅಧಿಕಾರಿಗಳೊಂದಿಗೆ ಆದಿವಾಸಿಗಳು ಸಂಘರ್ಷ ನಡೆಸುತ್ತಲೇ ಇದ್ದಾರೆ. ಅಧಿಕಾರಿಗಳು ಪುನರ್ವಸತಿ  ಕೇಂದ್ರಕ್ಕೆ ಆಗಮಿಸಿ ಸೌಲಭ್ಯ ಒದಗಿಸುವ ಬಗ್ಗೆ ಭರವಸೆ ನೀಡುತ್ತಾರೆ. ಆರು ತಿಂಗಳಲ್ಲಿ ಬೇರೆಡೆಗೆ ವರ್ಗಾವಣೆಯಾಗುತ್ತಾರೆ. ಹೊಸ ಅಧಿಕಾರಿ ಬಂದಾಗಲೂ ಇದೇ ರೀತಿಯ ಭರವಸೆ ನೀಡುತ್ತಾರೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂಬುದು ಆದಿವಾಸಿಗಳ ಕೂಗು.

ಸಿಟ್ಟಿಗೆದ್ದ ಆದಿವಾಸಿಗಳು ಹಾಡಿ ಮುಖಂಡರಾದ ಜೇನು ಕುರುಬರ ಟಿ.ಅಯ್ಯಪ್ಪ ಹಾಗೂ ಜೇಬು ಕುರುಬರ ಎಂ.ಸಣ್ಣಯ್ಯ ನೇತೃತ್ವದಲ್ಲಿ ಹೊರಟು ಅಡಗುಂಡಿ ಅರಣ್ಯಕ್ಕೆ ಆಗಮಿಸಿದರು. ವಿಷಯ ತಿಳಿದ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಡುಗುಂಡಿಗೇಟ್ ಬಳಿಯೇ ಆದಿವಾಸಿಗಳನ್ನು ತಡೆದಿದ್ದಾರೆ. ಗೇಟ್‌ ಬಳಿಯೇ ಪ್ರತಿಭಟನೆಯನ್ನು ನಡೆಸಿದಾಗ, ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದಾರೆ.

“ಆರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳು ಬದಲಾಗುತ್ತಾರೆ. ಆಶ್ವಾಸನಗೆಗಳು ಹಾಗೆಯೇ ಉಳಿಯುತ್ತವೆ. ಮೂರು ಎಕರೆ ಜಮೀನಿಗೆ ಯಾವುದೇ ಆರ್‌ಟಿಸಿ ಇಲ್ಲಿಯತನಕ ನೀಡಿಲ್ಲ. ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಭೂಮಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಮಾತು ಉಳಿಸಿಕೊಂಡಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರ್‌ ವಸತಿಗೆ ತೆರಳುವ ವೇಳೆ 15 ಲಕ್ಷ ರೂ. ಪ್ಯಾಕೇಜಿನೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹತ್ತು ಲಕ್ಷ ಪ್ಯಾಕೇಜನ್ನು ನೀಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಪ್ಯಾಕೇಜನ್ನು ನೀಡಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ ಸಾಧ್ಯವಾಗುತ್ತಿಲ್ಲ. ಕೊಡಗಿನ ಅರಣ್ಯದ ಗುಡಿಸಲುಗಳಲ್ಲಿ ನೆಮ್ಮದಿಯಾಗಿದ್ದೆವು. ಇದೀಗ ನಾಡಿಗೆ ಕರೆದೊಯ್ದು ನಮ್ಮ ಜೀವನವನ್ನು ಅತಂತ್ರ ಮಾಡಿದ್ದೀರಿ. ಯಾರೂ ಕೂಡ ಈಗ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಉಪವಿಭಾಗಾಧಿಕಾರಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದು, “ಆದಿವಾಸಿಗಳಿಗೆ ನೀಡಬೇಕಿದ್ದ ಸವಲತ್ತುಗಳನ್ನು ಈಡೇರಿಸುವ ಕೆಲಸವು ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ” ಎಂದರು.

ಬುಡಕಟ್ಟು ಸಮುದಾಯಗಳ ಪರ ಕೆಲಸ ಮಾಡುತ್ತಿರುವ ಪ್ರೊ.ಎ.ಎಸ್.ಪ್ರಭಾಕರ್‌ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳು ಭರವಸೆಯಾಗಿದೆಯೇ ಉಳಿದರೆ ವಂಚನೆ ಮಾಡಿದಂತೆ. ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಕಾಯ್ದೆ ಕಾರವೊಡ್ಡಿ ಆದಿವಾಸಿಗಳನ್ನು ಪುನರ್ವಸತಿಗೆ ತರಲಾಯಿತು. 15 ಲಕ್ಷ ರೂ.ಗಳ ಪ್ಯಾಕೇಜ್‌ ಹಾಗೂ ಜಮೀನು ನೀಡುವುದಾಗಿ ಹೇಳಲಾಗಿತ್ತು. ಈ ಭರವಸೆಗಳನ್ನು ಈಡೇರಿಸಿಲ್ಲ. ಇಷ್ಟು ಜನ ಮಾತ್ರವಲ್ಲ; ಊರು ಊರುಗಳನ್ನೇ ಎತ್ತಂಗಡಿ ಮಾಡಲಾಗಿದೆ. ಸಾವಿರಾರು ಕುಟುಂಬಗಳು ಅತಂತ್ರವಾಗಿವೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is true..
    We sd give support, help for their human rights ruined by forest departments and environmentalists, green tribunal wrong orders,,ngo etc…
    Farmers only are the real protectors of land ,forest,peoples leaving around.
    Farmers plantations are more green maintained in most of kodagu ,chickmangloor, areas than reserved forests looks baren. Without trees and water tables ..
    Only money is spent on forest developments

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...