Homeಮುಖಪುಟಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

- Advertisement -
- Advertisement -

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಕಲ್ಪಿಸಲಾಗಿದ್ದ ಪುನರ್‌ವಸತಿ ಕೇಂದ್ರವನ್ನು ತೊರೆದ ಆದಿವಾಸಿಗಳು ಮತ್ತೆ ಕೊಡಗು ಜಿಲ್ಲೆಯಲ್ಲಿನ ತಮ್ಮ ಮೂಲಸ್ಥಳಕ್ಕೆ ತೆರಳಿ ಪ್ರತಿಭಟಿಸಿದ್ದಾರೆ.

ಕಾಡಿನಲ್ಲಿ ನೆಮ್ಮದಿಯಾಗಿದ್ದ ನಮ್ಮನ್ನು ಪುನರ್‌ ವಸತಿ ಕೇಂದ್ರಕ್ಕೆ ಕರೆದೊಯ್ಯುವಾಗ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಆದಿವಾಸಿಗಳು ಮತ್ತೆ ತಮ್ಮ ತವರಿಗೆ ಮರಳಲು ಯತ್ನಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾಸ್ತಿಗುಡಿ ಪುನರ್‌ ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದ ನೂರಾರು ಜೇಬುಕುರುಬ ಹಾಗೂ ಯರವ ಸಮುದಾಯದ ಆದಿವಾಸಿ ಕುಟುಂಬಗಳು ಪುನರ್‌ ವಸತಿ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಡಗಿನ ಬಾಳಲೆಗೆ ಗ್ರಾಮ ಪಂಚಾಯಿತಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಗೇಟ್‌ ಬಳಿ  ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೊಡಗಿನ ಸ್ಥಳೀಯ ಪತ್ರಿಕೆ ‘ಶಕ್ತಿ’ ಮುಖಪುಟದಲ್ಲಿ ವರದಿ ಮಾಡಿದೆ.

ಅಡುಗುಂಡಿಯಲ್ಲಿ ವಾಸವಿದ್ದ ನೂರಾರು ಆದಿವಾಸಿ ಕುಟುಂಬಗಳನ್ನು ಮನವೊಲಿಸುವ ಮೂಲಕ ಇಲ್ಲಿನ ಅರಣ್ಯ ಪ್ರದೇಶದಿಂದ ಮೈಸೂರು ಜಿಲ್ಲೆಯ ಕಸಬಾ ಹೋಬಳಿಯ ರಾಜೇಗೌಡನ ಹುಂಡಿ ಗ್ರಾಮದ ಸರ್ವೇ ನಂ. 37ರ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಪ್ರತಿಕುಟುಂಬಕ್ಕೆ 15 ಲಕ್ಷ ರೂ. ಪ್ಯಾಕೇಜಿನಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಲಾಗಿತ್ತು. ಸರ್ಕಾರದ ಮಾತು ನಂಬಿದ ಆದಿವಾಸಿಗಳು ಕಾಡು ತೊರೆದು ಬಂದಿದ್ದರು.

ಇದನ್ನೂ ಓದಿರಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಕೇಂದ್ರ ಸರ್ಕಾರದ ಪುನರ್‌ ವಸತಿ ಯೋಜನೆಯಡಿಯಲ್ಲಿ ಅರಣ್ಯ ಮತ್ತು ಪರಿಸರ ಮಂತ್ರಾಲಯವು ಇವರಿಗೆ ಜಮೀನು ಹಾಗೂ ನಿವೇಶನದ ಸ್ವಾಧೀನ ಪತ್ರಗಳನ್ನು ನೀಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಈ ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ತರುವಾಗ ಗುಣಮಟ್ಟದ ಆರ್‌ಸಿಸಿ ಮನೆ, ಮೂರು ಎಕರೆ ಜಮೀನು, ಆರಂಭದಲ್ಲಿ 75 ಸಾವಿರ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿ 2.50 ಲಕ್ಷ ಹಣವನ್ನು ಪ್ಯಾಕೇಜಿನಡಿ ಘೋಷಿಸಿ ಇವುಗಳಿಗೆ ಒಪ್ಪಿಗೆ ಸೂಚಿಸಿದ ಕುಟುಂಬಗಳನ್ನು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮೂಲಕ ಕಳುಹಿಸಿಕೊಡಲಾಯಿತು.

ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಪುನರ್ವಸತಿ ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಭೂಮಿಯನ್ನು ಖಾತೆ ಮಾಡಿಕೊಡದೆ, ಕೃಷಿಗೆ ಭೂಮಿ ನೀಡದೆ ಅನ್ಯಾಯವೆಸಗಿದ್ದಾರೆ. ಹೀಗಾಗಿ ಅಧಿಕಾರಿಗಳೊಂದಿಗೆ ಆದಿವಾಸಿಗಳು ಸಂಘರ್ಷ ನಡೆಸುತ್ತಲೇ ಇದ್ದಾರೆ. ಅಧಿಕಾರಿಗಳು ಪುನರ್ವಸತಿ  ಕೇಂದ್ರಕ್ಕೆ ಆಗಮಿಸಿ ಸೌಲಭ್ಯ ಒದಗಿಸುವ ಬಗ್ಗೆ ಭರವಸೆ ನೀಡುತ್ತಾರೆ. ಆರು ತಿಂಗಳಲ್ಲಿ ಬೇರೆಡೆಗೆ ವರ್ಗಾವಣೆಯಾಗುತ್ತಾರೆ. ಹೊಸ ಅಧಿಕಾರಿ ಬಂದಾಗಲೂ ಇದೇ ರೀತಿಯ ಭರವಸೆ ನೀಡುತ್ತಾರೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂಬುದು ಆದಿವಾಸಿಗಳ ಕೂಗು.

ಸಿಟ್ಟಿಗೆದ್ದ ಆದಿವಾಸಿಗಳು ಹಾಡಿ ಮುಖಂಡರಾದ ಜೇನು ಕುರುಬರ ಟಿ.ಅಯ್ಯಪ್ಪ ಹಾಗೂ ಜೇಬು ಕುರುಬರ ಎಂ.ಸಣ್ಣಯ್ಯ ನೇತೃತ್ವದಲ್ಲಿ ಹೊರಟು ಅಡಗುಂಡಿ ಅರಣ್ಯಕ್ಕೆ ಆಗಮಿಸಿದರು. ವಿಷಯ ತಿಳಿದ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಡುಗುಂಡಿಗೇಟ್ ಬಳಿಯೇ ಆದಿವಾಸಿಗಳನ್ನು ತಡೆದಿದ್ದಾರೆ. ಗೇಟ್‌ ಬಳಿಯೇ ಪ್ರತಿಭಟನೆಯನ್ನು ನಡೆಸಿದಾಗ, ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದಾರೆ.

“ಆರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳು ಬದಲಾಗುತ್ತಾರೆ. ಆಶ್ವಾಸನಗೆಗಳು ಹಾಗೆಯೇ ಉಳಿಯುತ್ತವೆ. ಮೂರು ಎಕರೆ ಜಮೀನಿಗೆ ಯಾವುದೇ ಆರ್‌ಟಿಸಿ ಇಲ್ಲಿಯತನಕ ನೀಡಿಲ್ಲ. ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಭೂಮಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಮಾತು ಉಳಿಸಿಕೊಂಡಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರ್‌ ವಸತಿಗೆ ತೆರಳುವ ವೇಳೆ 15 ಲಕ್ಷ ರೂ. ಪ್ಯಾಕೇಜಿನೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹತ್ತು ಲಕ್ಷ ಪ್ಯಾಕೇಜನ್ನು ನೀಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಪ್ಯಾಕೇಜನ್ನು ನೀಡಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ ಸಾಧ್ಯವಾಗುತ್ತಿಲ್ಲ. ಕೊಡಗಿನ ಅರಣ್ಯದ ಗುಡಿಸಲುಗಳಲ್ಲಿ ನೆಮ್ಮದಿಯಾಗಿದ್ದೆವು. ಇದೀಗ ನಾಡಿಗೆ ಕರೆದೊಯ್ದು ನಮ್ಮ ಜೀವನವನ್ನು ಅತಂತ್ರ ಮಾಡಿದ್ದೀರಿ. ಯಾರೂ ಕೂಡ ಈಗ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಉಪವಿಭಾಗಾಧಿಕಾರಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದು, “ಆದಿವಾಸಿಗಳಿಗೆ ನೀಡಬೇಕಿದ್ದ ಸವಲತ್ತುಗಳನ್ನು ಈಡೇರಿಸುವ ಕೆಲಸವು ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ” ಎಂದರು.

ಬುಡಕಟ್ಟು ಸಮುದಾಯಗಳ ಪರ ಕೆಲಸ ಮಾಡುತ್ತಿರುವ ಪ್ರೊ.ಎ.ಎಸ್.ಪ್ರಭಾಕರ್‌ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳು ಭರವಸೆಯಾಗಿದೆಯೇ ಉಳಿದರೆ ವಂಚನೆ ಮಾಡಿದಂತೆ. ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಕಾಯ್ದೆ ಕಾರವೊಡ್ಡಿ ಆದಿವಾಸಿಗಳನ್ನು ಪುನರ್ವಸತಿಗೆ ತರಲಾಯಿತು. 15 ಲಕ್ಷ ರೂ.ಗಳ ಪ್ಯಾಕೇಜ್‌ ಹಾಗೂ ಜಮೀನು ನೀಡುವುದಾಗಿ ಹೇಳಲಾಗಿತ್ತು. ಈ ಭರವಸೆಗಳನ್ನು ಈಡೇರಿಸಿಲ್ಲ. ಇಷ್ಟು ಜನ ಮಾತ್ರವಲ್ಲ; ಊರು ಊರುಗಳನ್ನೇ ಎತ್ತಂಗಡಿ ಮಾಡಲಾಗಿದೆ. ಸಾವಿರಾರು ಕುಟುಂಬಗಳು ಅತಂತ್ರವಾಗಿವೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is true..
    We sd give support, help for their human rights ruined by forest departments and environmentalists, green tribunal wrong orders,,ngo etc…
    Farmers only are the real protectors of land ,forest,peoples leaving around.
    Farmers plantations are more green maintained in most of kodagu ,chickmangloor, areas than reserved forests looks baren. Without trees and water tables ..
    Only money is spent on forest developments

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...