Homeಮುಖಪುಟಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

- Advertisement -
- Advertisement -

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಕಲ್ಪಿಸಲಾಗಿದ್ದ ಪುನರ್‌ವಸತಿ ಕೇಂದ್ರವನ್ನು ತೊರೆದ ಆದಿವಾಸಿಗಳು ಮತ್ತೆ ಕೊಡಗು ಜಿಲ್ಲೆಯಲ್ಲಿನ ತಮ್ಮ ಮೂಲಸ್ಥಳಕ್ಕೆ ತೆರಳಿ ಪ್ರತಿಭಟಿಸಿದ್ದಾರೆ.

ಕಾಡಿನಲ್ಲಿ ನೆಮ್ಮದಿಯಾಗಿದ್ದ ನಮ್ಮನ್ನು ಪುನರ್‌ ವಸತಿ ಕೇಂದ್ರಕ್ಕೆ ಕರೆದೊಯ್ಯುವಾಗ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಆದಿವಾಸಿಗಳು ಮತ್ತೆ ತಮ್ಮ ತವರಿಗೆ ಮರಳಲು ಯತ್ನಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾಸ್ತಿಗುಡಿ ಪುನರ್‌ ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದ ನೂರಾರು ಜೇಬುಕುರುಬ ಹಾಗೂ ಯರವ ಸಮುದಾಯದ ಆದಿವಾಸಿ ಕುಟುಂಬಗಳು ಪುನರ್‌ ವಸತಿ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಡಗಿನ ಬಾಳಲೆಗೆ ಗ್ರಾಮ ಪಂಚಾಯಿತಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಗೇಟ್‌ ಬಳಿ  ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೊಡಗಿನ ಸ್ಥಳೀಯ ಪತ್ರಿಕೆ ‘ಶಕ್ತಿ’ ಮುಖಪುಟದಲ್ಲಿ ವರದಿ ಮಾಡಿದೆ.

ಅಡುಗುಂಡಿಯಲ್ಲಿ ವಾಸವಿದ್ದ ನೂರಾರು ಆದಿವಾಸಿ ಕುಟುಂಬಗಳನ್ನು ಮನವೊಲಿಸುವ ಮೂಲಕ ಇಲ್ಲಿನ ಅರಣ್ಯ ಪ್ರದೇಶದಿಂದ ಮೈಸೂರು ಜಿಲ್ಲೆಯ ಕಸಬಾ ಹೋಬಳಿಯ ರಾಜೇಗೌಡನ ಹುಂಡಿ ಗ್ರಾಮದ ಸರ್ವೇ ನಂ. 37ರ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಪ್ರತಿಕುಟುಂಬಕ್ಕೆ 15 ಲಕ್ಷ ರೂ. ಪ್ಯಾಕೇಜಿನಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಲಾಗಿತ್ತು. ಸರ್ಕಾರದ ಮಾತು ನಂಬಿದ ಆದಿವಾಸಿಗಳು ಕಾಡು ತೊರೆದು ಬಂದಿದ್ದರು.

ಇದನ್ನೂ ಓದಿರಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಕೇಂದ್ರ ಸರ್ಕಾರದ ಪುನರ್‌ ವಸತಿ ಯೋಜನೆಯಡಿಯಲ್ಲಿ ಅರಣ್ಯ ಮತ್ತು ಪರಿಸರ ಮಂತ್ರಾಲಯವು ಇವರಿಗೆ ಜಮೀನು ಹಾಗೂ ನಿವೇಶನದ ಸ್ವಾಧೀನ ಪತ್ರಗಳನ್ನು ನೀಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಈ ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ತರುವಾಗ ಗುಣಮಟ್ಟದ ಆರ್‌ಸಿಸಿ ಮನೆ, ಮೂರು ಎಕರೆ ಜಮೀನು, ಆರಂಭದಲ್ಲಿ 75 ಸಾವಿರ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿ 2.50 ಲಕ್ಷ ಹಣವನ್ನು ಪ್ಯಾಕೇಜಿನಡಿ ಘೋಷಿಸಿ ಇವುಗಳಿಗೆ ಒಪ್ಪಿಗೆ ಸೂಚಿಸಿದ ಕುಟುಂಬಗಳನ್ನು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮೂಲಕ ಕಳುಹಿಸಿಕೊಡಲಾಯಿತು.

ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಪುನರ್ವಸತಿ ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಭೂಮಿಯನ್ನು ಖಾತೆ ಮಾಡಿಕೊಡದೆ, ಕೃಷಿಗೆ ಭೂಮಿ ನೀಡದೆ ಅನ್ಯಾಯವೆಸಗಿದ್ದಾರೆ. ಹೀಗಾಗಿ ಅಧಿಕಾರಿಗಳೊಂದಿಗೆ ಆದಿವಾಸಿಗಳು ಸಂಘರ್ಷ ನಡೆಸುತ್ತಲೇ ಇದ್ದಾರೆ. ಅಧಿಕಾರಿಗಳು ಪುನರ್ವಸತಿ  ಕೇಂದ್ರಕ್ಕೆ ಆಗಮಿಸಿ ಸೌಲಭ್ಯ ಒದಗಿಸುವ ಬಗ್ಗೆ ಭರವಸೆ ನೀಡುತ್ತಾರೆ. ಆರು ತಿಂಗಳಲ್ಲಿ ಬೇರೆಡೆಗೆ ವರ್ಗಾವಣೆಯಾಗುತ್ತಾರೆ. ಹೊಸ ಅಧಿಕಾರಿ ಬಂದಾಗಲೂ ಇದೇ ರೀತಿಯ ಭರವಸೆ ನೀಡುತ್ತಾರೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂಬುದು ಆದಿವಾಸಿಗಳ ಕೂಗು.

ಸಿಟ್ಟಿಗೆದ್ದ ಆದಿವಾಸಿಗಳು ಹಾಡಿ ಮುಖಂಡರಾದ ಜೇನು ಕುರುಬರ ಟಿ.ಅಯ್ಯಪ್ಪ ಹಾಗೂ ಜೇಬು ಕುರುಬರ ಎಂ.ಸಣ್ಣಯ್ಯ ನೇತೃತ್ವದಲ್ಲಿ ಹೊರಟು ಅಡಗುಂಡಿ ಅರಣ್ಯಕ್ಕೆ ಆಗಮಿಸಿದರು. ವಿಷಯ ತಿಳಿದ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಡುಗುಂಡಿಗೇಟ್ ಬಳಿಯೇ ಆದಿವಾಸಿಗಳನ್ನು ತಡೆದಿದ್ದಾರೆ. ಗೇಟ್‌ ಬಳಿಯೇ ಪ್ರತಿಭಟನೆಯನ್ನು ನಡೆಸಿದಾಗ, ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದಾರೆ.

“ಆರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳು ಬದಲಾಗುತ್ತಾರೆ. ಆಶ್ವಾಸನಗೆಗಳು ಹಾಗೆಯೇ ಉಳಿಯುತ್ತವೆ. ಮೂರು ಎಕರೆ ಜಮೀನಿಗೆ ಯಾವುದೇ ಆರ್‌ಟಿಸಿ ಇಲ್ಲಿಯತನಕ ನೀಡಿಲ್ಲ. ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಭೂಮಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಮಾತು ಉಳಿಸಿಕೊಂಡಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರ್‌ ವಸತಿಗೆ ತೆರಳುವ ವೇಳೆ 15 ಲಕ್ಷ ರೂ. ಪ್ಯಾಕೇಜಿನೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹತ್ತು ಲಕ್ಷ ಪ್ಯಾಕೇಜನ್ನು ನೀಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಪ್ಯಾಕೇಜನ್ನು ನೀಡಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ ಸಾಧ್ಯವಾಗುತ್ತಿಲ್ಲ. ಕೊಡಗಿನ ಅರಣ್ಯದ ಗುಡಿಸಲುಗಳಲ್ಲಿ ನೆಮ್ಮದಿಯಾಗಿದ್ದೆವು. ಇದೀಗ ನಾಡಿಗೆ ಕರೆದೊಯ್ದು ನಮ್ಮ ಜೀವನವನ್ನು ಅತಂತ್ರ ಮಾಡಿದ್ದೀರಿ. ಯಾರೂ ಕೂಡ ಈಗ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಉಪವಿಭಾಗಾಧಿಕಾರಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದು, “ಆದಿವಾಸಿಗಳಿಗೆ ನೀಡಬೇಕಿದ್ದ ಸವಲತ್ತುಗಳನ್ನು ಈಡೇರಿಸುವ ಕೆಲಸವು ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ” ಎಂದರು.

ಬುಡಕಟ್ಟು ಸಮುದಾಯಗಳ ಪರ ಕೆಲಸ ಮಾಡುತ್ತಿರುವ ಪ್ರೊ.ಎ.ಎಸ್.ಪ್ರಭಾಕರ್‌ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳು ಭರವಸೆಯಾಗಿದೆಯೇ ಉಳಿದರೆ ವಂಚನೆ ಮಾಡಿದಂತೆ. ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಕಾಯ್ದೆ ಕಾರವೊಡ್ಡಿ ಆದಿವಾಸಿಗಳನ್ನು ಪುನರ್ವಸತಿಗೆ ತರಲಾಯಿತು. 15 ಲಕ್ಷ ರೂ.ಗಳ ಪ್ಯಾಕೇಜ್‌ ಹಾಗೂ ಜಮೀನು ನೀಡುವುದಾಗಿ ಹೇಳಲಾಗಿತ್ತು. ಈ ಭರವಸೆಗಳನ್ನು ಈಡೇರಿಸಿಲ್ಲ. ಇಷ್ಟು ಜನ ಮಾತ್ರವಲ್ಲ; ಊರು ಊರುಗಳನ್ನೇ ಎತ್ತಂಗಡಿ ಮಾಡಲಾಗಿದೆ. ಸಾವಿರಾರು ಕುಟುಂಬಗಳು ಅತಂತ್ರವಾಗಿವೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is true..
    We sd give support, help for their human rights ruined by forest departments and environmentalists, green tribunal wrong orders,,ngo etc…
    Farmers only are the real protectors of land ,forest,peoples leaving around.
    Farmers plantations are more green maintained in most of kodagu ,chickmangloor, areas than reserved forests looks baren. Without trees and water tables ..
    Only money is spent on forest developments

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...