Homeಮುಖಪುಟಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

ಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

- Advertisement -
- Advertisement -

ಕೊಡಗಿನ ದುರಂತಕ್ಕೆ ಎಲ್ಲರೂ ಸ್ಪಂದಿಸಿದ್ದಾರೆ. ಕೇರಳದ ದುರಂತದ ಮುಂದುವರಿಕೆಯೋ ಎಂಬಂತೆ ಕೊಡಗಿನ ಭೂಕುಸಿತ ಘಟಿಸಿದೆ. ನೂರಾರು ಜನ ಮನೆ ತೋಟ ಕಳೆದುಕೊಂಡಿದ್ದರೆ, ಸಾವಿರಾರು ಜನ ಪ್ರಕೃತಿಯ ಮುನಿಸಿಗೆ ಹೆದರಿ ಊರು ಬಿಟ್ಟಿದ್ದಾರೆ. ಸಂಪರ್ಕ ರಸ್ತೆಗಳೆನ್ನುವ ರಸ್ತೆಗಳೆಲ್ಲವೂ ಕುಸಿದು ಹೋಗಿವೆ. ಮುಖ್ಯತಃ ಬಯಲು ಸೀಮೆ ಮತ್ತು ಕರಾವಳಿಯನ್ನು ಸಂಪರ್ಕಿಸುವ ಜೀವ ನಾಡಿಯಂತಿರುವ ಮುಖ್ಯ ಹೆದ್ದಾರಿಗಳು ಸಂಪೂರ್ಣ ನಾಶವಾಗಿವೆ. ಒಟ್ಟಾರೆ ನಷ್ಟವನ್ನು ಅಂದಾಜು ಮಾಡಲು ಇನ್ನಷ್ಟು ಸಮಯ ಬೇಕು. ಕೊಡಗಿನ ದುರಂತದ ತುರ್ತು ಪರಿಹಾರಗಳಿಗೆ ಎಲ್ಲರೂ ಸ್ಪಂದಿಸುತ್ತಿರುವುದು ಶ್ಲಾಘನೀಯ. ಅದರಿಂದಾಚೆ, ಈ ವರ್ಷಾಂತ್ಯದ ವರೆಗೆ ಮತ್ತು ದೀರ್ಘಕಾಲೀನ ಪರಿಹಾರಗಳ ಬಗ್ಗೆಯೂ ಯೋಚಿಸಬೇಕಾಗಿದೆ.
ಈ ಭೂಕುಸಿತ ಅರ್ಧಕ್ಕರ್ಧ ಮನುಷ್ಯ ಹಸ್ತಕ್ಷೇಪದಿಂದ ಎಂಬುದು ನಿರ್ವಿವಾದ. ಕೊಡಗಿನ ಸ್ಥಳೀಯ ಸಂಸ್ಕøತಿ ಉಳಿದ ಮಲೆನಾಡಿನ ಹಾಗೆ ಬಯಲು ಸೀಮೆಗಿಂತ ಭಿನ್ನ. ಎಲ್ಲರೂ ತಮ್ಮ ಜಮೀನಿನಲ್ಲಿ ಮನೆ ಕಟ್ಟಿಕೊಳ್ಳುತ್ತಾರೆ. ಅದಕ್ಕೆ ರಸ್ತೆಯನ್ನೂ ಮಾಡಿಕೊಳ್ಳುತ್ತಾರೆ. ಇವೆರಡಕ್ಕೂ ಮನೆ ಹಿಂದಿನ ಗುಡ್ಡವನ್ನು ಬಗೆಯಬೇಕು! ಹಾಗೇ ಸರ್ಕಾರೀ ರಸ್ತೆಗಳು ಅಗಲೀಕರಣಗೊಂಡು ನಿರ್ಮಾಣಗೊಂಡಲ್ಲೆಲ್ಲಾ ರಸ್ತೆಗಳನ್ನು ಭೂಮಿ ನುಂಗಿ ಹಾಕಿದೆ. ಜೆಸಿಬಿಯಂಥಾ ಯಂತ್ರಗಳನ್ನು ಬಳಸಿದ ಕಾರಣ ಭೂಮಿ ಒತ್ತಡಕ್ಕೊಳಗಾಗಿದೆ ಎಂಬ ಅಂಶ ಚರ್ಚಿಸಬೇಕಾದ ಸಂಗತಿ.
ಕಾಫಿ ತೋಟಗಳ ಎಗ್ಗಿಲ್ಲದ ವಿಸ್ತರಣೆ ಇನ್ನೊಂದು ಕಾರಣ. ಈ ವಿಸ್ತರಣೆಯಲ್ಲಿ ಜಮೀನಿನಲ್ಲಿದ್ದ ಕಾಡುಮರಗಳನ್ನು ಬಹುತೇಕ ಟಿಂಬರ್ ಅಂತ ಮಾರಿಯಾಗಿದೆ. ಅಲ್ಲಿ ಉಳಿದಿರುವುದು ಸಿಲ್ವರ್‍ನಂಥಾ ಮೃದು ಮರಗಳು ಮಾತ್ರಾ. ಕೊಡಗಿನ ಮಣ್ಣು ಕೊಂಚ ಮರಳು ಮಿಶ್ರಿತ. ಅದು ಲ್ಯಾಟರೈಟ್ ಕುಲಕ್ಕೆ ಸೇರಿದ್ದಲ್ಲ. ಕೊಡಗಿನ ಅಂಚಿನ ಭಾಗಗಳು ತಾಂತ್ರಿಕವಾಗಿ ಲ್ಯಾಟರೈಟ್ ಆದರೂ ಅದರಲ್ಲಿ ಕ್ಲೇ ಅಂಶ ಯಥೇಚ್ಛ ಇದೆಯಂತೆ. ಈ ಕಾರಣಕ್ಕೇ ಅದು ಬೇಗ ಸಡಿಲವಾಗುತ್ತದೆ. ಮರಗಳು ದೈತ್ಯಾಕಾರವಾಗಿ ಬೆಳೆಯಲೂ ಇದೇ ಕಾರಣ. ಬೇರು ಇಳಿಸುವುದು ಸುಲಭ. ಇವು ಗ್ರಾಮೀಣ ಪರಿಸರದ ಭೂಕುಸಿತದ ಬಗ್ಗೆ.
ಇನ್ನು ಮಡಿಕೇರಿಯಂಥಾ ಪಟ್ಟಣದಲ್ಲಿ ಹೊಸ ಬಡಾವಣೆಗಳ ಮನೆಗಳನ್ನು ಕಟ್ಟುವಾಗ ಜಲ್ಲಿ ಸಿಮೆಂಟ್ ಕಬ್ಬಿಣದ ಮೇಲೆ ವಿಶ್ವಾಸವಿಟ್ಟೇ ಕಟ್ಟಿದ್ದು ಹೊರತು, ಮಣ್ಣಿನ ಗುಣ ಸ್ವಭಾವದ ಬಗ್ಗೆ ಯಾವ ಎಂಜಿನಿಯರೂ ತಲೆ ಕೆಡಿಸಿಕೊಂಡಿಲ್ಲ. ಬೆಂಕಿ ಪೊಟ್ಟಣ ಇಟ್ಟ ಹಾಗೆ ಗುಡ್ಡದ ಇಳಿಜಾರು ಪೂರ್ತಿ ಮನೆಗಳು ಕಟ್ಟಿದ ರೀತಿ ಅಪಾಯವನ್ನು ಮೈಮೇಲೆ ಎಳೆದುಕೊಂಡ ಪರಿಯನ್ನು ಅನಾವರಣಗೊಳಿಸಿದೆ.
ಕುಶಾಲನಗರದಂಥಾ ಊರುಗಳಲ್ಲಿ ನದೀ ಪಾತ್ರದ ಗದ್ದೆಗಳಲ್ಲಿ ಲೇ ಔಟ್ ಮಾಡುವ ಖಯಾಲಿ ಶುರುವಾಗಿದ್ದೇ, ಈ ಬಾರಿ ಅಲ್ಲೆಲ್ಲಾ ನೀರು ನುಗ್ಗಲು ಕಾರಣವಾಗಿದೆ.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮಟ್ಟದ ರಸ್ತೆಗಳನ್ನು ನಿರ್ಮಿಸಿದ ರೀತಿ ಎಷ್ಟು ಅವೈಜ್ಞಾನಿಕ ಎಂಬುದಕ್ಕೆ ಈ ರಸ್ತೆಗಳೆಲ್ಲಾ ಸರ್ವ ನಾಶವಾಗಿರುವುದೇ ಪುರಾವೆ. ಇವನ್ನು ಪೋಸ್ಟ್‍ಮಾರ್ಟಮ್ ಎಂದು ಭಾವಿಸೋಣ.
ಮುಂದಿನ ಸರಣಿ ಸಮಸ್ಯೆಗಳೇನು ಎಂಬುದನ್ನು ಗಮನಿಸೋಣ. ಈ ಬಾರಿಯ ಮಳೆಯಿಂದಾಗಿ ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿ ನೆಲ ಕಚ್ಚುವ ಸಾಧ್ಯತೆ ನಿಚ್ಚಳವಾಗಿದೆ. ತೋಟಗಳೆಲ್ಲಾ ಅಸ್ತವ್ಯಸ್ತ ಆಗಿರುವ ಕಾರಣ ಇದನ್ನೇ ನಂಬಿರುವ ಸಾವಿರಾರು ಕೂಲಿಕಾರ ಕುಟುಂಬಗಳು ಬೀದಿಗೆ ಬೀಳುತ್ತಾರೆ, ಮುಂದಿನ ಮೂರು ನಾಲ್ಕು ತಿಂಗಳು ಕೂಲಿ ಸೃಷ್ಟಿಯಾಗುವ ಸಾಧ್ಯತೆಗಳೇ ಇಲ್ಲ. ಇದರೊಂದಿಗೆ ಆದಿವಾಸಿಗಳು, ದಲಿತ ಕಾರ್ಮಿಕರ ಗುಡಿಸಲುಗಳೆಲ್ಲಾ ಮೂರಾಬಟ್ಟೆ ಆಗಿರುವ ವರದಿಗಳಿವೆ. ಇವೆಲ್ಲಾ ಫೋಟೋಜೆನಿಕ್ ಅಲ್ಲದ ಕಾರಣ ಟಿವಿ ಚಾನೆಲುಗಳ ಕಣ್ಣಿಗೆ ಬಿದ್ದಿಲ್ಲ.
ಊರಿನ ಸಂಪರ್ಕ ರಸ್ತೆಗಳೆಲ್ಲಾ ನಾಶವಾಗಿರುವ ಕಾರಣ ಹೊರಹೋಗಲೂ ವ್ಯವಸ್ಥೆ ಇಲ್ಲ. ಸ್ಥಳೀಯವಾಗಿ ಸಂಪನ್ಮೂಲಗಳೂ ಇಲ್ಲ. ನೆನಪಿಡಿ, ಮಳೆಗಾಲದ ಅರ್ಧ ಮಾತ್ರಾ ಮುಗಿದಿದೆ. ಸುಮಾರಾಗಿ ಕಾವೇರಿ ಸಂಕ್ರಮಣದವರೆಗೂ ಕೊಡಗಲ್ಲಿ ಮಳೆ ಬರುತ್ತಿರುತ್ತದೆ. ಈ ಒಂದೊಂದು ಮಳೆಯೂ ಹಸಿ ಮಣ್ಣನ್ನು ಇನ್ನಷ್ಟು ತೇವಗೊಳಿಸುವ ಶಕ್ತಿ ಹೊಂದಿದೆ.
ಅರ್ಥಾತ್ ಈ ಕುಟುಂಬಗಳಿಗೆ ಮುಂದಿನ ಕನಿಷ್ಠ ಆರು ತಿಂಗಳು ಸಹಾಯ ಹಸ್ತ ಬೇಕು. ಅಷ್ಟೇ ಅಲ್ಲ, ಮನೆ, ರಸ್ತೆ ನಿರ್ಮಿಸುವುದೆಂದರೆ ಏನಿದ್ದರೂ ಸಂಕ್ರಾಂತಿ ಕಳೆಯಬೇಕು. ಅಂದರೆ ಈ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ಬೇಕು. ಮಲೆನಾಡಿನಲ್ಲಿ ಮನೆ ಕಟ್ಟಿಸುವುದೆಂದರೆ ಮನೆಯೊಂದಕ್ಕೆ ಕನಿಷ್ಠ ಐದು ಲಕ್ಷ ಬೇಕು. ಇನ್ನು ಭೂಕುಸಿತ ನಿರೋಧಕ ರೀತಿಯಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಮರುಚಿಂತನೆ ನಡೆಯಬೇಕಾಗಿದೆ. ಇದು ಗ್ರಾಮೀಣ ಪರಿಸರದ ಬಡವರ ಬದುಕು ಕಟ್ಟುವ ಬಗ್ಗೆ. ನಾಶವಾದ ತೋಟಗಳ ಮರು ಸೃಷ್ಟಿಗೆ ರ್ದೀಕಾಲೀನ ಹಣಕಾಸಿನ ನೆರವು ಬೇಕು.
ಇನ್ನೊಂದೆಡೆ ಸಂಪರ್ಕ ರಸ್ತೆಗಳನ್ನು ಸರ್ಕಾರ ಮರು ನಿರ್ಮಿಸಲು ಸಮರೋಪಾದಿಯಲ್ಲಿ ತಯಾರಾಗಬೇಕು. ಮಡಿಕೇರಿ-ಸುಳ್ಯ, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ ; ಬಿಸಿಲೆ- ಸುಬ್ರಮಣ್ಯ ರಸ್ತೆಗಳು ಸಂಪೂರ್ಣ ಪಾತಾಳಕ್ಕಿಳಿದಿವೆ. ಇವನ್ನು ನಿರ್ಮಿಸಲು ವೆಚ್ಚ ಮಾಡಿದ್ದಕ್ಕಿಂತ ಹೆಚ್ಚು ರಿಪೇರಿ ಮಾಡಲು ವೆಚ್ಚ ಮಾಡಬೇಕಿದೆ. ಮತ್ತೆ ಅದೇ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಿಸಿದರೆ ಘೋರ ಭವಿಷ್ಯದ ಅಪಾಯಕ್ಕೆ ಮುನ್ನುಡಿ ಬರೆದ ಹಾಗೆಯೇ ಸೈ. ಅಂದರೆ ಇಡೀ ಪುನರ್ನಿರ್ಮಾಣ ಪರಿಸರ ಸಂವೇದೀ ಸೂಕ್ಷ್ಮಗಳನ್ನು ಒಳಗೊಳ್ಳಬೇಕಾಗಿದೆ.
ಪರಿಹಾರ ಕಾಮಗಾರಿಗಳ ಜವಾಬ್ದಾರಿ ಗಮನಿಸಿದರೆ, ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿ ಹೆಚ್ಚು. ಅನುದಾನವೂ ಇದೇ ರಿತಿಯಲ್ಲಿ ಹರಿದು ಬರಲಿದೆ. ಈ ಇಲಾಖೆಗಳಿಗೆ ಅನುಕಂಪ ಬಿಡಿ, ದಕ್ಷತೆ ಇರುವ ಪುರಾವೆಯೂ ಇಲ್ಲ. ಇದರೊಂದಿಗೇ ಕೊಕ್ಕೆ ಹಾಕುವ ಮೂಲಕ ಕಾಮಗಾರಿಗಳನ್ನು ತ್ರಿಶಂಕು ಸ್ಥಿತಿಯಲ್ಲಿಡುವ ಸಾಮಥ್ರ್ಯ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಗಿವೆ. ಇವೆರಡೂ ಇಲಾಖೆಗಳ ಆದಾಯ ಮೂಲವೇ ಇದು. ಈ ಇಲಾಖೆಗಳಿಗೆ ಇಡೀ ಕೊಡಗು ಜಿಲ್ಲೆಯೇ ಒಂದು ಊಟದ ತಟ್ಟೆಯ ಹಾಗೆ ಕಂಡರೆ ಅಚ್ಚರಿ ಇಲ್ಲ!
ರೈತರ ಸಾಲಮನ್ನಾ ಮಾಡಿ ಈಗಾಗಲೇ ನಿರ್ಧನ ಯೋಗದಲ್ಲಿರುವ ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಕನಿಷ್ಠ 2-3 ಸಾವಿರ ಕೋಟಿ ವಿನಿಯೋಗಿಸಬೇಕಿದೆ. ಕೇಂದ್ರದ ಅನುದಾನ ದೊಡ್ಡ ಮಟ್ಟದಲ್ಲಿ ಬಂದರೆ ಪರಿಸ್ಥಿತಿ ಸುಧಾರಿಸೀತು. ಆದರೆ ಪುನರ್ನಿರ್ಮಾಣ ಏನಿದ್ದರೂ ಜನವರಿಯಿಂದಾಚೆ ಎಂಬ ಸತ್ಯದೊಂದಿಗೆ ಲೋಕಸಭಾ ಚುನಾವಣೆಯ ಭರಾಟೆ ನೆನಪಿಸಿಕೊಂಡರೆ ಪರಿಹಾರ ಎಷ್ಟರ ಮಟ್ಟಿಗೆ ಸಕಾಲದಲ್ಲಿ ಪೂರೈಸೀತು ಎಂಬ ಚಿಂತೆ ನಮ್ಮನ್ನು ಕಾಡಬೇಕು.
ಆದ್ದರಿಂದಲೇ ನಾವು ಈ ಆಡಳಿತ ಯಂತ್ರದ ನಡೆಗಳ ಮೇಲೆ ಕಣ್ಣಿಡಲು ಸನ್ನದ್ಧರಾಗಬೇಕಿದೆ.

 

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...