Homeಮುಖಪುಟಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

ಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

- Advertisement -
- Advertisement -

ಕೊಡಗಿನ ದುರಂತಕ್ಕೆ ಎಲ್ಲರೂ ಸ್ಪಂದಿಸಿದ್ದಾರೆ. ಕೇರಳದ ದುರಂತದ ಮುಂದುವರಿಕೆಯೋ ಎಂಬಂತೆ ಕೊಡಗಿನ ಭೂಕುಸಿತ ಘಟಿಸಿದೆ. ನೂರಾರು ಜನ ಮನೆ ತೋಟ ಕಳೆದುಕೊಂಡಿದ್ದರೆ, ಸಾವಿರಾರು ಜನ ಪ್ರಕೃತಿಯ ಮುನಿಸಿಗೆ ಹೆದರಿ ಊರು ಬಿಟ್ಟಿದ್ದಾರೆ. ಸಂಪರ್ಕ ರಸ್ತೆಗಳೆನ್ನುವ ರಸ್ತೆಗಳೆಲ್ಲವೂ ಕುಸಿದು ಹೋಗಿವೆ. ಮುಖ್ಯತಃ ಬಯಲು ಸೀಮೆ ಮತ್ತು ಕರಾವಳಿಯನ್ನು ಸಂಪರ್ಕಿಸುವ ಜೀವ ನಾಡಿಯಂತಿರುವ ಮುಖ್ಯ ಹೆದ್ದಾರಿಗಳು ಸಂಪೂರ್ಣ ನಾಶವಾಗಿವೆ. ಒಟ್ಟಾರೆ ನಷ್ಟವನ್ನು ಅಂದಾಜು ಮಾಡಲು ಇನ್ನಷ್ಟು ಸಮಯ ಬೇಕು. ಕೊಡಗಿನ ದುರಂತದ ತುರ್ತು ಪರಿಹಾರಗಳಿಗೆ ಎಲ್ಲರೂ ಸ್ಪಂದಿಸುತ್ತಿರುವುದು ಶ್ಲಾಘನೀಯ. ಅದರಿಂದಾಚೆ, ಈ ವರ್ಷಾಂತ್ಯದ ವರೆಗೆ ಮತ್ತು ದೀರ್ಘಕಾಲೀನ ಪರಿಹಾರಗಳ ಬಗ್ಗೆಯೂ ಯೋಚಿಸಬೇಕಾಗಿದೆ.
ಈ ಭೂಕುಸಿತ ಅರ್ಧಕ್ಕರ್ಧ ಮನುಷ್ಯ ಹಸ್ತಕ್ಷೇಪದಿಂದ ಎಂಬುದು ನಿರ್ವಿವಾದ. ಕೊಡಗಿನ ಸ್ಥಳೀಯ ಸಂಸ್ಕøತಿ ಉಳಿದ ಮಲೆನಾಡಿನ ಹಾಗೆ ಬಯಲು ಸೀಮೆಗಿಂತ ಭಿನ್ನ. ಎಲ್ಲರೂ ತಮ್ಮ ಜಮೀನಿನಲ್ಲಿ ಮನೆ ಕಟ್ಟಿಕೊಳ್ಳುತ್ತಾರೆ. ಅದಕ್ಕೆ ರಸ್ತೆಯನ್ನೂ ಮಾಡಿಕೊಳ್ಳುತ್ತಾರೆ. ಇವೆರಡಕ್ಕೂ ಮನೆ ಹಿಂದಿನ ಗುಡ್ಡವನ್ನು ಬಗೆಯಬೇಕು! ಹಾಗೇ ಸರ್ಕಾರೀ ರಸ್ತೆಗಳು ಅಗಲೀಕರಣಗೊಂಡು ನಿರ್ಮಾಣಗೊಂಡಲ್ಲೆಲ್ಲಾ ರಸ್ತೆಗಳನ್ನು ಭೂಮಿ ನುಂಗಿ ಹಾಕಿದೆ. ಜೆಸಿಬಿಯಂಥಾ ಯಂತ್ರಗಳನ್ನು ಬಳಸಿದ ಕಾರಣ ಭೂಮಿ ಒತ್ತಡಕ್ಕೊಳಗಾಗಿದೆ ಎಂಬ ಅಂಶ ಚರ್ಚಿಸಬೇಕಾದ ಸಂಗತಿ.
ಕಾಫಿ ತೋಟಗಳ ಎಗ್ಗಿಲ್ಲದ ವಿಸ್ತರಣೆ ಇನ್ನೊಂದು ಕಾರಣ. ಈ ವಿಸ್ತರಣೆಯಲ್ಲಿ ಜಮೀನಿನಲ್ಲಿದ್ದ ಕಾಡುಮರಗಳನ್ನು ಬಹುತೇಕ ಟಿಂಬರ್ ಅಂತ ಮಾರಿಯಾಗಿದೆ. ಅಲ್ಲಿ ಉಳಿದಿರುವುದು ಸಿಲ್ವರ್‍ನಂಥಾ ಮೃದು ಮರಗಳು ಮಾತ್ರಾ. ಕೊಡಗಿನ ಮಣ್ಣು ಕೊಂಚ ಮರಳು ಮಿಶ್ರಿತ. ಅದು ಲ್ಯಾಟರೈಟ್ ಕುಲಕ್ಕೆ ಸೇರಿದ್ದಲ್ಲ. ಕೊಡಗಿನ ಅಂಚಿನ ಭಾಗಗಳು ತಾಂತ್ರಿಕವಾಗಿ ಲ್ಯಾಟರೈಟ್ ಆದರೂ ಅದರಲ್ಲಿ ಕ್ಲೇ ಅಂಶ ಯಥೇಚ್ಛ ಇದೆಯಂತೆ. ಈ ಕಾರಣಕ್ಕೇ ಅದು ಬೇಗ ಸಡಿಲವಾಗುತ್ತದೆ. ಮರಗಳು ದೈತ್ಯಾಕಾರವಾಗಿ ಬೆಳೆಯಲೂ ಇದೇ ಕಾರಣ. ಬೇರು ಇಳಿಸುವುದು ಸುಲಭ. ಇವು ಗ್ರಾಮೀಣ ಪರಿಸರದ ಭೂಕುಸಿತದ ಬಗ್ಗೆ.
ಇನ್ನು ಮಡಿಕೇರಿಯಂಥಾ ಪಟ್ಟಣದಲ್ಲಿ ಹೊಸ ಬಡಾವಣೆಗಳ ಮನೆಗಳನ್ನು ಕಟ್ಟುವಾಗ ಜಲ್ಲಿ ಸಿಮೆಂಟ್ ಕಬ್ಬಿಣದ ಮೇಲೆ ವಿಶ್ವಾಸವಿಟ್ಟೇ ಕಟ್ಟಿದ್ದು ಹೊರತು, ಮಣ್ಣಿನ ಗುಣ ಸ್ವಭಾವದ ಬಗ್ಗೆ ಯಾವ ಎಂಜಿನಿಯರೂ ತಲೆ ಕೆಡಿಸಿಕೊಂಡಿಲ್ಲ. ಬೆಂಕಿ ಪೊಟ್ಟಣ ಇಟ್ಟ ಹಾಗೆ ಗುಡ್ಡದ ಇಳಿಜಾರು ಪೂರ್ತಿ ಮನೆಗಳು ಕಟ್ಟಿದ ರೀತಿ ಅಪಾಯವನ್ನು ಮೈಮೇಲೆ ಎಳೆದುಕೊಂಡ ಪರಿಯನ್ನು ಅನಾವರಣಗೊಳಿಸಿದೆ.
ಕುಶಾಲನಗರದಂಥಾ ಊರುಗಳಲ್ಲಿ ನದೀ ಪಾತ್ರದ ಗದ್ದೆಗಳಲ್ಲಿ ಲೇ ಔಟ್ ಮಾಡುವ ಖಯಾಲಿ ಶುರುವಾಗಿದ್ದೇ, ಈ ಬಾರಿ ಅಲ್ಲೆಲ್ಲಾ ನೀರು ನುಗ್ಗಲು ಕಾರಣವಾಗಿದೆ.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮಟ್ಟದ ರಸ್ತೆಗಳನ್ನು ನಿರ್ಮಿಸಿದ ರೀತಿ ಎಷ್ಟು ಅವೈಜ್ಞಾನಿಕ ಎಂಬುದಕ್ಕೆ ಈ ರಸ್ತೆಗಳೆಲ್ಲಾ ಸರ್ವ ನಾಶವಾಗಿರುವುದೇ ಪುರಾವೆ. ಇವನ್ನು ಪೋಸ್ಟ್‍ಮಾರ್ಟಮ್ ಎಂದು ಭಾವಿಸೋಣ.
ಮುಂದಿನ ಸರಣಿ ಸಮಸ್ಯೆಗಳೇನು ಎಂಬುದನ್ನು ಗಮನಿಸೋಣ. ಈ ಬಾರಿಯ ಮಳೆಯಿಂದಾಗಿ ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿ ನೆಲ ಕಚ್ಚುವ ಸಾಧ್ಯತೆ ನಿಚ್ಚಳವಾಗಿದೆ. ತೋಟಗಳೆಲ್ಲಾ ಅಸ್ತವ್ಯಸ್ತ ಆಗಿರುವ ಕಾರಣ ಇದನ್ನೇ ನಂಬಿರುವ ಸಾವಿರಾರು ಕೂಲಿಕಾರ ಕುಟುಂಬಗಳು ಬೀದಿಗೆ ಬೀಳುತ್ತಾರೆ, ಮುಂದಿನ ಮೂರು ನಾಲ್ಕು ತಿಂಗಳು ಕೂಲಿ ಸೃಷ್ಟಿಯಾಗುವ ಸಾಧ್ಯತೆಗಳೇ ಇಲ್ಲ. ಇದರೊಂದಿಗೆ ಆದಿವಾಸಿಗಳು, ದಲಿತ ಕಾರ್ಮಿಕರ ಗುಡಿಸಲುಗಳೆಲ್ಲಾ ಮೂರಾಬಟ್ಟೆ ಆಗಿರುವ ವರದಿಗಳಿವೆ. ಇವೆಲ್ಲಾ ಫೋಟೋಜೆನಿಕ್ ಅಲ್ಲದ ಕಾರಣ ಟಿವಿ ಚಾನೆಲುಗಳ ಕಣ್ಣಿಗೆ ಬಿದ್ದಿಲ್ಲ.
ಊರಿನ ಸಂಪರ್ಕ ರಸ್ತೆಗಳೆಲ್ಲಾ ನಾಶವಾಗಿರುವ ಕಾರಣ ಹೊರಹೋಗಲೂ ವ್ಯವಸ್ಥೆ ಇಲ್ಲ. ಸ್ಥಳೀಯವಾಗಿ ಸಂಪನ್ಮೂಲಗಳೂ ಇಲ್ಲ. ನೆನಪಿಡಿ, ಮಳೆಗಾಲದ ಅರ್ಧ ಮಾತ್ರಾ ಮುಗಿದಿದೆ. ಸುಮಾರಾಗಿ ಕಾವೇರಿ ಸಂಕ್ರಮಣದವರೆಗೂ ಕೊಡಗಲ್ಲಿ ಮಳೆ ಬರುತ್ತಿರುತ್ತದೆ. ಈ ಒಂದೊಂದು ಮಳೆಯೂ ಹಸಿ ಮಣ್ಣನ್ನು ಇನ್ನಷ್ಟು ತೇವಗೊಳಿಸುವ ಶಕ್ತಿ ಹೊಂದಿದೆ.
ಅರ್ಥಾತ್ ಈ ಕುಟುಂಬಗಳಿಗೆ ಮುಂದಿನ ಕನಿಷ್ಠ ಆರು ತಿಂಗಳು ಸಹಾಯ ಹಸ್ತ ಬೇಕು. ಅಷ್ಟೇ ಅಲ್ಲ, ಮನೆ, ರಸ್ತೆ ನಿರ್ಮಿಸುವುದೆಂದರೆ ಏನಿದ್ದರೂ ಸಂಕ್ರಾಂತಿ ಕಳೆಯಬೇಕು. ಅಂದರೆ ಈ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ಬೇಕು. ಮಲೆನಾಡಿನಲ್ಲಿ ಮನೆ ಕಟ್ಟಿಸುವುದೆಂದರೆ ಮನೆಯೊಂದಕ್ಕೆ ಕನಿಷ್ಠ ಐದು ಲಕ್ಷ ಬೇಕು. ಇನ್ನು ಭೂಕುಸಿತ ನಿರೋಧಕ ರೀತಿಯಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಮರುಚಿಂತನೆ ನಡೆಯಬೇಕಾಗಿದೆ. ಇದು ಗ್ರಾಮೀಣ ಪರಿಸರದ ಬಡವರ ಬದುಕು ಕಟ್ಟುವ ಬಗ್ಗೆ. ನಾಶವಾದ ತೋಟಗಳ ಮರು ಸೃಷ್ಟಿಗೆ ರ್ದೀಕಾಲೀನ ಹಣಕಾಸಿನ ನೆರವು ಬೇಕು.
ಇನ್ನೊಂದೆಡೆ ಸಂಪರ್ಕ ರಸ್ತೆಗಳನ್ನು ಸರ್ಕಾರ ಮರು ನಿರ್ಮಿಸಲು ಸಮರೋಪಾದಿಯಲ್ಲಿ ತಯಾರಾಗಬೇಕು. ಮಡಿಕೇರಿ-ಸುಳ್ಯ, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ ; ಬಿಸಿಲೆ- ಸುಬ್ರಮಣ್ಯ ರಸ್ತೆಗಳು ಸಂಪೂರ್ಣ ಪಾತಾಳಕ್ಕಿಳಿದಿವೆ. ಇವನ್ನು ನಿರ್ಮಿಸಲು ವೆಚ್ಚ ಮಾಡಿದ್ದಕ್ಕಿಂತ ಹೆಚ್ಚು ರಿಪೇರಿ ಮಾಡಲು ವೆಚ್ಚ ಮಾಡಬೇಕಿದೆ. ಮತ್ತೆ ಅದೇ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಿಸಿದರೆ ಘೋರ ಭವಿಷ್ಯದ ಅಪಾಯಕ್ಕೆ ಮುನ್ನುಡಿ ಬರೆದ ಹಾಗೆಯೇ ಸೈ. ಅಂದರೆ ಇಡೀ ಪುನರ್ನಿರ್ಮಾಣ ಪರಿಸರ ಸಂವೇದೀ ಸೂಕ್ಷ್ಮಗಳನ್ನು ಒಳಗೊಳ್ಳಬೇಕಾಗಿದೆ.
ಪರಿಹಾರ ಕಾಮಗಾರಿಗಳ ಜವಾಬ್ದಾರಿ ಗಮನಿಸಿದರೆ, ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿ ಹೆಚ್ಚು. ಅನುದಾನವೂ ಇದೇ ರಿತಿಯಲ್ಲಿ ಹರಿದು ಬರಲಿದೆ. ಈ ಇಲಾಖೆಗಳಿಗೆ ಅನುಕಂಪ ಬಿಡಿ, ದಕ್ಷತೆ ಇರುವ ಪುರಾವೆಯೂ ಇಲ್ಲ. ಇದರೊಂದಿಗೇ ಕೊಕ್ಕೆ ಹಾಕುವ ಮೂಲಕ ಕಾಮಗಾರಿಗಳನ್ನು ತ್ರಿಶಂಕು ಸ್ಥಿತಿಯಲ್ಲಿಡುವ ಸಾಮಥ್ರ್ಯ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಗಿವೆ. ಇವೆರಡೂ ಇಲಾಖೆಗಳ ಆದಾಯ ಮೂಲವೇ ಇದು. ಈ ಇಲಾಖೆಗಳಿಗೆ ಇಡೀ ಕೊಡಗು ಜಿಲ್ಲೆಯೇ ಒಂದು ಊಟದ ತಟ್ಟೆಯ ಹಾಗೆ ಕಂಡರೆ ಅಚ್ಚರಿ ಇಲ್ಲ!
ರೈತರ ಸಾಲಮನ್ನಾ ಮಾಡಿ ಈಗಾಗಲೇ ನಿರ್ಧನ ಯೋಗದಲ್ಲಿರುವ ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಕನಿಷ್ಠ 2-3 ಸಾವಿರ ಕೋಟಿ ವಿನಿಯೋಗಿಸಬೇಕಿದೆ. ಕೇಂದ್ರದ ಅನುದಾನ ದೊಡ್ಡ ಮಟ್ಟದಲ್ಲಿ ಬಂದರೆ ಪರಿಸ್ಥಿತಿ ಸುಧಾರಿಸೀತು. ಆದರೆ ಪುನರ್ನಿರ್ಮಾಣ ಏನಿದ್ದರೂ ಜನವರಿಯಿಂದಾಚೆ ಎಂಬ ಸತ್ಯದೊಂದಿಗೆ ಲೋಕಸಭಾ ಚುನಾವಣೆಯ ಭರಾಟೆ ನೆನಪಿಸಿಕೊಂಡರೆ ಪರಿಹಾರ ಎಷ್ಟರ ಮಟ್ಟಿಗೆ ಸಕಾಲದಲ್ಲಿ ಪೂರೈಸೀತು ಎಂಬ ಚಿಂತೆ ನಮ್ಮನ್ನು ಕಾಡಬೇಕು.
ಆದ್ದರಿಂದಲೇ ನಾವು ಈ ಆಡಳಿತ ಯಂತ್ರದ ನಡೆಗಳ ಮೇಲೆ ಕಣ್ಣಿಡಲು ಸನ್ನದ್ಧರಾಗಬೇಕಿದೆ.

 

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...