Homeಮುಖಪುಟಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

ಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

- Advertisement -
- Advertisement -

ಕೊಡಗಿನ ದುರಂತಕ್ಕೆ ಎಲ್ಲರೂ ಸ್ಪಂದಿಸಿದ್ದಾರೆ. ಕೇರಳದ ದುರಂತದ ಮುಂದುವರಿಕೆಯೋ ಎಂಬಂತೆ ಕೊಡಗಿನ ಭೂಕುಸಿತ ಘಟಿಸಿದೆ. ನೂರಾರು ಜನ ಮನೆ ತೋಟ ಕಳೆದುಕೊಂಡಿದ್ದರೆ, ಸಾವಿರಾರು ಜನ ಪ್ರಕೃತಿಯ ಮುನಿಸಿಗೆ ಹೆದರಿ ಊರು ಬಿಟ್ಟಿದ್ದಾರೆ. ಸಂಪರ್ಕ ರಸ್ತೆಗಳೆನ್ನುವ ರಸ್ತೆಗಳೆಲ್ಲವೂ ಕುಸಿದು ಹೋಗಿವೆ. ಮುಖ್ಯತಃ ಬಯಲು ಸೀಮೆ ಮತ್ತು ಕರಾವಳಿಯನ್ನು ಸಂಪರ್ಕಿಸುವ ಜೀವ ನಾಡಿಯಂತಿರುವ ಮುಖ್ಯ ಹೆದ್ದಾರಿಗಳು ಸಂಪೂರ್ಣ ನಾಶವಾಗಿವೆ. ಒಟ್ಟಾರೆ ನಷ್ಟವನ್ನು ಅಂದಾಜು ಮಾಡಲು ಇನ್ನಷ್ಟು ಸಮಯ ಬೇಕು. ಕೊಡಗಿನ ದುರಂತದ ತುರ್ತು ಪರಿಹಾರಗಳಿಗೆ ಎಲ್ಲರೂ ಸ್ಪಂದಿಸುತ್ತಿರುವುದು ಶ್ಲಾಘನೀಯ. ಅದರಿಂದಾಚೆ, ಈ ವರ್ಷಾಂತ್ಯದ ವರೆಗೆ ಮತ್ತು ದೀರ್ಘಕಾಲೀನ ಪರಿಹಾರಗಳ ಬಗ್ಗೆಯೂ ಯೋಚಿಸಬೇಕಾಗಿದೆ.
ಈ ಭೂಕುಸಿತ ಅರ್ಧಕ್ಕರ್ಧ ಮನುಷ್ಯ ಹಸ್ತಕ್ಷೇಪದಿಂದ ಎಂಬುದು ನಿರ್ವಿವಾದ. ಕೊಡಗಿನ ಸ್ಥಳೀಯ ಸಂಸ್ಕøತಿ ಉಳಿದ ಮಲೆನಾಡಿನ ಹಾಗೆ ಬಯಲು ಸೀಮೆಗಿಂತ ಭಿನ್ನ. ಎಲ್ಲರೂ ತಮ್ಮ ಜಮೀನಿನಲ್ಲಿ ಮನೆ ಕಟ್ಟಿಕೊಳ್ಳುತ್ತಾರೆ. ಅದಕ್ಕೆ ರಸ್ತೆಯನ್ನೂ ಮಾಡಿಕೊಳ್ಳುತ್ತಾರೆ. ಇವೆರಡಕ್ಕೂ ಮನೆ ಹಿಂದಿನ ಗುಡ್ಡವನ್ನು ಬಗೆಯಬೇಕು! ಹಾಗೇ ಸರ್ಕಾರೀ ರಸ್ತೆಗಳು ಅಗಲೀಕರಣಗೊಂಡು ನಿರ್ಮಾಣಗೊಂಡಲ್ಲೆಲ್ಲಾ ರಸ್ತೆಗಳನ್ನು ಭೂಮಿ ನುಂಗಿ ಹಾಕಿದೆ. ಜೆಸಿಬಿಯಂಥಾ ಯಂತ್ರಗಳನ್ನು ಬಳಸಿದ ಕಾರಣ ಭೂಮಿ ಒತ್ತಡಕ್ಕೊಳಗಾಗಿದೆ ಎಂಬ ಅಂಶ ಚರ್ಚಿಸಬೇಕಾದ ಸಂಗತಿ.
ಕಾಫಿ ತೋಟಗಳ ಎಗ್ಗಿಲ್ಲದ ವಿಸ್ತರಣೆ ಇನ್ನೊಂದು ಕಾರಣ. ಈ ವಿಸ್ತರಣೆಯಲ್ಲಿ ಜಮೀನಿನಲ್ಲಿದ್ದ ಕಾಡುಮರಗಳನ್ನು ಬಹುತೇಕ ಟಿಂಬರ್ ಅಂತ ಮಾರಿಯಾಗಿದೆ. ಅಲ್ಲಿ ಉಳಿದಿರುವುದು ಸಿಲ್ವರ್‍ನಂಥಾ ಮೃದು ಮರಗಳು ಮಾತ್ರಾ. ಕೊಡಗಿನ ಮಣ್ಣು ಕೊಂಚ ಮರಳು ಮಿಶ್ರಿತ. ಅದು ಲ್ಯಾಟರೈಟ್ ಕುಲಕ್ಕೆ ಸೇರಿದ್ದಲ್ಲ. ಕೊಡಗಿನ ಅಂಚಿನ ಭಾಗಗಳು ತಾಂತ್ರಿಕವಾಗಿ ಲ್ಯಾಟರೈಟ್ ಆದರೂ ಅದರಲ್ಲಿ ಕ್ಲೇ ಅಂಶ ಯಥೇಚ್ಛ ಇದೆಯಂತೆ. ಈ ಕಾರಣಕ್ಕೇ ಅದು ಬೇಗ ಸಡಿಲವಾಗುತ್ತದೆ. ಮರಗಳು ದೈತ್ಯಾಕಾರವಾಗಿ ಬೆಳೆಯಲೂ ಇದೇ ಕಾರಣ. ಬೇರು ಇಳಿಸುವುದು ಸುಲಭ. ಇವು ಗ್ರಾಮೀಣ ಪರಿಸರದ ಭೂಕುಸಿತದ ಬಗ್ಗೆ.
ಇನ್ನು ಮಡಿಕೇರಿಯಂಥಾ ಪಟ್ಟಣದಲ್ಲಿ ಹೊಸ ಬಡಾವಣೆಗಳ ಮನೆಗಳನ್ನು ಕಟ್ಟುವಾಗ ಜಲ್ಲಿ ಸಿಮೆಂಟ್ ಕಬ್ಬಿಣದ ಮೇಲೆ ವಿಶ್ವಾಸವಿಟ್ಟೇ ಕಟ್ಟಿದ್ದು ಹೊರತು, ಮಣ್ಣಿನ ಗುಣ ಸ್ವಭಾವದ ಬಗ್ಗೆ ಯಾವ ಎಂಜಿನಿಯರೂ ತಲೆ ಕೆಡಿಸಿಕೊಂಡಿಲ್ಲ. ಬೆಂಕಿ ಪೊಟ್ಟಣ ಇಟ್ಟ ಹಾಗೆ ಗುಡ್ಡದ ಇಳಿಜಾರು ಪೂರ್ತಿ ಮನೆಗಳು ಕಟ್ಟಿದ ರೀತಿ ಅಪಾಯವನ್ನು ಮೈಮೇಲೆ ಎಳೆದುಕೊಂಡ ಪರಿಯನ್ನು ಅನಾವರಣಗೊಳಿಸಿದೆ.
ಕುಶಾಲನಗರದಂಥಾ ಊರುಗಳಲ್ಲಿ ನದೀ ಪಾತ್ರದ ಗದ್ದೆಗಳಲ್ಲಿ ಲೇ ಔಟ್ ಮಾಡುವ ಖಯಾಲಿ ಶುರುವಾಗಿದ್ದೇ, ಈ ಬಾರಿ ಅಲ್ಲೆಲ್ಲಾ ನೀರು ನುಗ್ಗಲು ಕಾರಣವಾಗಿದೆ.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮಟ್ಟದ ರಸ್ತೆಗಳನ್ನು ನಿರ್ಮಿಸಿದ ರೀತಿ ಎಷ್ಟು ಅವೈಜ್ಞಾನಿಕ ಎಂಬುದಕ್ಕೆ ಈ ರಸ್ತೆಗಳೆಲ್ಲಾ ಸರ್ವ ನಾಶವಾಗಿರುವುದೇ ಪುರಾವೆ. ಇವನ್ನು ಪೋಸ್ಟ್‍ಮಾರ್ಟಮ್ ಎಂದು ಭಾವಿಸೋಣ.
ಮುಂದಿನ ಸರಣಿ ಸಮಸ್ಯೆಗಳೇನು ಎಂಬುದನ್ನು ಗಮನಿಸೋಣ. ಈ ಬಾರಿಯ ಮಳೆಯಿಂದಾಗಿ ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿ ನೆಲ ಕಚ್ಚುವ ಸಾಧ್ಯತೆ ನಿಚ್ಚಳವಾಗಿದೆ. ತೋಟಗಳೆಲ್ಲಾ ಅಸ್ತವ್ಯಸ್ತ ಆಗಿರುವ ಕಾರಣ ಇದನ್ನೇ ನಂಬಿರುವ ಸಾವಿರಾರು ಕೂಲಿಕಾರ ಕುಟುಂಬಗಳು ಬೀದಿಗೆ ಬೀಳುತ್ತಾರೆ, ಮುಂದಿನ ಮೂರು ನಾಲ್ಕು ತಿಂಗಳು ಕೂಲಿ ಸೃಷ್ಟಿಯಾಗುವ ಸಾಧ್ಯತೆಗಳೇ ಇಲ್ಲ. ಇದರೊಂದಿಗೆ ಆದಿವಾಸಿಗಳು, ದಲಿತ ಕಾರ್ಮಿಕರ ಗುಡಿಸಲುಗಳೆಲ್ಲಾ ಮೂರಾಬಟ್ಟೆ ಆಗಿರುವ ವರದಿಗಳಿವೆ. ಇವೆಲ್ಲಾ ಫೋಟೋಜೆನಿಕ್ ಅಲ್ಲದ ಕಾರಣ ಟಿವಿ ಚಾನೆಲುಗಳ ಕಣ್ಣಿಗೆ ಬಿದ್ದಿಲ್ಲ.
ಊರಿನ ಸಂಪರ್ಕ ರಸ್ತೆಗಳೆಲ್ಲಾ ನಾಶವಾಗಿರುವ ಕಾರಣ ಹೊರಹೋಗಲೂ ವ್ಯವಸ್ಥೆ ಇಲ್ಲ. ಸ್ಥಳೀಯವಾಗಿ ಸಂಪನ್ಮೂಲಗಳೂ ಇಲ್ಲ. ನೆನಪಿಡಿ, ಮಳೆಗಾಲದ ಅರ್ಧ ಮಾತ್ರಾ ಮುಗಿದಿದೆ. ಸುಮಾರಾಗಿ ಕಾವೇರಿ ಸಂಕ್ರಮಣದವರೆಗೂ ಕೊಡಗಲ್ಲಿ ಮಳೆ ಬರುತ್ತಿರುತ್ತದೆ. ಈ ಒಂದೊಂದು ಮಳೆಯೂ ಹಸಿ ಮಣ್ಣನ್ನು ಇನ್ನಷ್ಟು ತೇವಗೊಳಿಸುವ ಶಕ್ತಿ ಹೊಂದಿದೆ.
ಅರ್ಥಾತ್ ಈ ಕುಟುಂಬಗಳಿಗೆ ಮುಂದಿನ ಕನಿಷ್ಠ ಆರು ತಿಂಗಳು ಸಹಾಯ ಹಸ್ತ ಬೇಕು. ಅಷ್ಟೇ ಅಲ್ಲ, ಮನೆ, ರಸ್ತೆ ನಿರ್ಮಿಸುವುದೆಂದರೆ ಏನಿದ್ದರೂ ಸಂಕ್ರಾಂತಿ ಕಳೆಯಬೇಕು. ಅಂದರೆ ಈ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ಬೇಕು. ಮಲೆನಾಡಿನಲ್ಲಿ ಮನೆ ಕಟ್ಟಿಸುವುದೆಂದರೆ ಮನೆಯೊಂದಕ್ಕೆ ಕನಿಷ್ಠ ಐದು ಲಕ್ಷ ಬೇಕು. ಇನ್ನು ಭೂಕುಸಿತ ನಿರೋಧಕ ರೀತಿಯಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಮರುಚಿಂತನೆ ನಡೆಯಬೇಕಾಗಿದೆ. ಇದು ಗ್ರಾಮೀಣ ಪರಿಸರದ ಬಡವರ ಬದುಕು ಕಟ್ಟುವ ಬಗ್ಗೆ. ನಾಶವಾದ ತೋಟಗಳ ಮರು ಸೃಷ್ಟಿಗೆ ರ್ದೀಕಾಲೀನ ಹಣಕಾಸಿನ ನೆರವು ಬೇಕು.
ಇನ್ನೊಂದೆಡೆ ಸಂಪರ್ಕ ರಸ್ತೆಗಳನ್ನು ಸರ್ಕಾರ ಮರು ನಿರ್ಮಿಸಲು ಸಮರೋಪಾದಿಯಲ್ಲಿ ತಯಾರಾಗಬೇಕು. ಮಡಿಕೇರಿ-ಸುಳ್ಯ, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ ; ಬಿಸಿಲೆ- ಸುಬ್ರಮಣ್ಯ ರಸ್ತೆಗಳು ಸಂಪೂರ್ಣ ಪಾತಾಳಕ್ಕಿಳಿದಿವೆ. ಇವನ್ನು ನಿರ್ಮಿಸಲು ವೆಚ್ಚ ಮಾಡಿದ್ದಕ್ಕಿಂತ ಹೆಚ್ಚು ರಿಪೇರಿ ಮಾಡಲು ವೆಚ್ಚ ಮಾಡಬೇಕಿದೆ. ಮತ್ತೆ ಅದೇ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಿಸಿದರೆ ಘೋರ ಭವಿಷ್ಯದ ಅಪಾಯಕ್ಕೆ ಮುನ್ನುಡಿ ಬರೆದ ಹಾಗೆಯೇ ಸೈ. ಅಂದರೆ ಇಡೀ ಪುನರ್ನಿರ್ಮಾಣ ಪರಿಸರ ಸಂವೇದೀ ಸೂಕ್ಷ್ಮಗಳನ್ನು ಒಳಗೊಳ್ಳಬೇಕಾಗಿದೆ.
ಪರಿಹಾರ ಕಾಮಗಾರಿಗಳ ಜವಾಬ್ದಾರಿ ಗಮನಿಸಿದರೆ, ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿ ಹೆಚ್ಚು. ಅನುದಾನವೂ ಇದೇ ರಿತಿಯಲ್ಲಿ ಹರಿದು ಬರಲಿದೆ. ಈ ಇಲಾಖೆಗಳಿಗೆ ಅನುಕಂಪ ಬಿಡಿ, ದಕ್ಷತೆ ಇರುವ ಪುರಾವೆಯೂ ಇಲ್ಲ. ಇದರೊಂದಿಗೇ ಕೊಕ್ಕೆ ಹಾಕುವ ಮೂಲಕ ಕಾಮಗಾರಿಗಳನ್ನು ತ್ರಿಶಂಕು ಸ್ಥಿತಿಯಲ್ಲಿಡುವ ಸಾಮಥ್ರ್ಯ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಗಿವೆ. ಇವೆರಡೂ ಇಲಾಖೆಗಳ ಆದಾಯ ಮೂಲವೇ ಇದು. ಈ ಇಲಾಖೆಗಳಿಗೆ ಇಡೀ ಕೊಡಗು ಜಿಲ್ಲೆಯೇ ಒಂದು ಊಟದ ತಟ್ಟೆಯ ಹಾಗೆ ಕಂಡರೆ ಅಚ್ಚರಿ ಇಲ್ಲ!
ರೈತರ ಸಾಲಮನ್ನಾ ಮಾಡಿ ಈಗಾಗಲೇ ನಿರ್ಧನ ಯೋಗದಲ್ಲಿರುವ ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಕನಿಷ್ಠ 2-3 ಸಾವಿರ ಕೋಟಿ ವಿನಿಯೋಗಿಸಬೇಕಿದೆ. ಕೇಂದ್ರದ ಅನುದಾನ ದೊಡ್ಡ ಮಟ್ಟದಲ್ಲಿ ಬಂದರೆ ಪರಿಸ್ಥಿತಿ ಸುಧಾರಿಸೀತು. ಆದರೆ ಪುನರ್ನಿರ್ಮಾಣ ಏನಿದ್ದರೂ ಜನವರಿಯಿಂದಾಚೆ ಎಂಬ ಸತ್ಯದೊಂದಿಗೆ ಲೋಕಸಭಾ ಚುನಾವಣೆಯ ಭರಾಟೆ ನೆನಪಿಸಿಕೊಂಡರೆ ಪರಿಹಾರ ಎಷ್ಟರ ಮಟ್ಟಿಗೆ ಸಕಾಲದಲ್ಲಿ ಪೂರೈಸೀತು ಎಂಬ ಚಿಂತೆ ನಮ್ಮನ್ನು ಕಾಡಬೇಕು.
ಆದ್ದರಿಂದಲೇ ನಾವು ಈ ಆಡಳಿತ ಯಂತ್ರದ ನಡೆಗಳ ಮೇಲೆ ಕಣ್ಣಿಡಲು ಸನ್ನದ್ಧರಾಗಬೇಕಿದೆ.

 

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...