Homeಮುಖಪುಟಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

ಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

- Advertisement -
- Advertisement -

ಕೊಡಗಿನ ದುರಂತಕ್ಕೆ ಎಲ್ಲರೂ ಸ್ಪಂದಿಸಿದ್ದಾರೆ. ಕೇರಳದ ದುರಂತದ ಮುಂದುವರಿಕೆಯೋ ಎಂಬಂತೆ ಕೊಡಗಿನ ಭೂಕುಸಿತ ಘಟಿಸಿದೆ. ನೂರಾರು ಜನ ಮನೆ ತೋಟ ಕಳೆದುಕೊಂಡಿದ್ದರೆ, ಸಾವಿರಾರು ಜನ ಪ್ರಕೃತಿಯ ಮುನಿಸಿಗೆ ಹೆದರಿ ಊರು ಬಿಟ್ಟಿದ್ದಾರೆ. ಸಂಪರ್ಕ ರಸ್ತೆಗಳೆನ್ನುವ ರಸ್ತೆಗಳೆಲ್ಲವೂ ಕುಸಿದು ಹೋಗಿವೆ. ಮುಖ್ಯತಃ ಬಯಲು ಸೀಮೆ ಮತ್ತು ಕರಾವಳಿಯನ್ನು ಸಂಪರ್ಕಿಸುವ ಜೀವ ನಾಡಿಯಂತಿರುವ ಮುಖ್ಯ ಹೆದ್ದಾರಿಗಳು ಸಂಪೂರ್ಣ ನಾಶವಾಗಿವೆ. ಒಟ್ಟಾರೆ ನಷ್ಟವನ್ನು ಅಂದಾಜು ಮಾಡಲು ಇನ್ನಷ್ಟು ಸಮಯ ಬೇಕು. ಕೊಡಗಿನ ದುರಂತದ ತುರ್ತು ಪರಿಹಾರಗಳಿಗೆ ಎಲ್ಲರೂ ಸ್ಪಂದಿಸುತ್ತಿರುವುದು ಶ್ಲಾಘನೀಯ. ಅದರಿಂದಾಚೆ, ಈ ವರ್ಷಾಂತ್ಯದ ವರೆಗೆ ಮತ್ತು ದೀರ್ಘಕಾಲೀನ ಪರಿಹಾರಗಳ ಬಗ್ಗೆಯೂ ಯೋಚಿಸಬೇಕಾಗಿದೆ.
ಈ ಭೂಕುಸಿತ ಅರ್ಧಕ್ಕರ್ಧ ಮನುಷ್ಯ ಹಸ್ತಕ್ಷೇಪದಿಂದ ಎಂಬುದು ನಿರ್ವಿವಾದ. ಕೊಡಗಿನ ಸ್ಥಳೀಯ ಸಂಸ್ಕøತಿ ಉಳಿದ ಮಲೆನಾಡಿನ ಹಾಗೆ ಬಯಲು ಸೀಮೆಗಿಂತ ಭಿನ್ನ. ಎಲ್ಲರೂ ತಮ್ಮ ಜಮೀನಿನಲ್ಲಿ ಮನೆ ಕಟ್ಟಿಕೊಳ್ಳುತ್ತಾರೆ. ಅದಕ್ಕೆ ರಸ್ತೆಯನ್ನೂ ಮಾಡಿಕೊಳ್ಳುತ್ತಾರೆ. ಇವೆರಡಕ್ಕೂ ಮನೆ ಹಿಂದಿನ ಗುಡ್ಡವನ್ನು ಬಗೆಯಬೇಕು! ಹಾಗೇ ಸರ್ಕಾರೀ ರಸ್ತೆಗಳು ಅಗಲೀಕರಣಗೊಂಡು ನಿರ್ಮಾಣಗೊಂಡಲ್ಲೆಲ್ಲಾ ರಸ್ತೆಗಳನ್ನು ಭೂಮಿ ನುಂಗಿ ಹಾಕಿದೆ. ಜೆಸಿಬಿಯಂಥಾ ಯಂತ್ರಗಳನ್ನು ಬಳಸಿದ ಕಾರಣ ಭೂಮಿ ಒತ್ತಡಕ್ಕೊಳಗಾಗಿದೆ ಎಂಬ ಅಂಶ ಚರ್ಚಿಸಬೇಕಾದ ಸಂಗತಿ.
ಕಾಫಿ ತೋಟಗಳ ಎಗ್ಗಿಲ್ಲದ ವಿಸ್ತರಣೆ ಇನ್ನೊಂದು ಕಾರಣ. ಈ ವಿಸ್ತರಣೆಯಲ್ಲಿ ಜಮೀನಿನಲ್ಲಿದ್ದ ಕಾಡುಮರಗಳನ್ನು ಬಹುತೇಕ ಟಿಂಬರ್ ಅಂತ ಮಾರಿಯಾಗಿದೆ. ಅಲ್ಲಿ ಉಳಿದಿರುವುದು ಸಿಲ್ವರ್‍ನಂಥಾ ಮೃದು ಮರಗಳು ಮಾತ್ರಾ. ಕೊಡಗಿನ ಮಣ್ಣು ಕೊಂಚ ಮರಳು ಮಿಶ್ರಿತ. ಅದು ಲ್ಯಾಟರೈಟ್ ಕುಲಕ್ಕೆ ಸೇರಿದ್ದಲ್ಲ. ಕೊಡಗಿನ ಅಂಚಿನ ಭಾಗಗಳು ತಾಂತ್ರಿಕವಾಗಿ ಲ್ಯಾಟರೈಟ್ ಆದರೂ ಅದರಲ್ಲಿ ಕ್ಲೇ ಅಂಶ ಯಥೇಚ್ಛ ಇದೆಯಂತೆ. ಈ ಕಾರಣಕ್ಕೇ ಅದು ಬೇಗ ಸಡಿಲವಾಗುತ್ತದೆ. ಮರಗಳು ದೈತ್ಯಾಕಾರವಾಗಿ ಬೆಳೆಯಲೂ ಇದೇ ಕಾರಣ. ಬೇರು ಇಳಿಸುವುದು ಸುಲಭ. ಇವು ಗ್ರಾಮೀಣ ಪರಿಸರದ ಭೂಕುಸಿತದ ಬಗ್ಗೆ.
ಇನ್ನು ಮಡಿಕೇರಿಯಂಥಾ ಪಟ್ಟಣದಲ್ಲಿ ಹೊಸ ಬಡಾವಣೆಗಳ ಮನೆಗಳನ್ನು ಕಟ್ಟುವಾಗ ಜಲ್ಲಿ ಸಿಮೆಂಟ್ ಕಬ್ಬಿಣದ ಮೇಲೆ ವಿಶ್ವಾಸವಿಟ್ಟೇ ಕಟ್ಟಿದ್ದು ಹೊರತು, ಮಣ್ಣಿನ ಗುಣ ಸ್ವಭಾವದ ಬಗ್ಗೆ ಯಾವ ಎಂಜಿನಿಯರೂ ತಲೆ ಕೆಡಿಸಿಕೊಂಡಿಲ್ಲ. ಬೆಂಕಿ ಪೊಟ್ಟಣ ಇಟ್ಟ ಹಾಗೆ ಗುಡ್ಡದ ಇಳಿಜಾರು ಪೂರ್ತಿ ಮನೆಗಳು ಕಟ್ಟಿದ ರೀತಿ ಅಪಾಯವನ್ನು ಮೈಮೇಲೆ ಎಳೆದುಕೊಂಡ ಪರಿಯನ್ನು ಅನಾವರಣಗೊಳಿಸಿದೆ.
ಕುಶಾಲನಗರದಂಥಾ ಊರುಗಳಲ್ಲಿ ನದೀ ಪಾತ್ರದ ಗದ್ದೆಗಳಲ್ಲಿ ಲೇ ಔಟ್ ಮಾಡುವ ಖಯಾಲಿ ಶುರುವಾಗಿದ್ದೇ, ಈ ಬಾರಿ ಅಲ್ಲೆಲ್ಲಾ ನೀರು ನುಗ್ಗಲು ಕಾರಣವಾಗಿದೆ.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮಟ್ಟದ ರಸ್ತೆಗಳನ್ನು ನಿರ್ಮಿಸಿದ ರೀತಿ ಎಷ್ಟು ಅವೈಜ್ಞಾನಿಕ ಎಂಬುದಕ್ಕೆ ಈ ರಸ್ತೆಗಳೆಲ್ಲಾ ಸರ್ವ ನಾಶವಾಗಿರುವುದೇ ಪುರಾವೆ. ಇವನ್ನು ಪೋಸ್ಟ್‍ಮಾರ್ಟಮ್ ಎಂದು ಭಾವಿಸೋಣ.
ಮುಂದಿನ ಸರಣಿ ಸಮಸ್ಯೆಗಳೇನು ಎಂಬುದನ್ನು ಗಮನಿಸೋಣ. ಈ ಬಾರಿಯ ಮಳೆಯಿಂದಾಗಿ ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿ ನೆಲ ಕಚ್ಚುವ ಸಾಧ್ಯತೆ ನಿಚ್ಚಳವಾಗಿದೆ. ತೋಟಗಳೆಲ್ಲಾ ಅಸ್ತವ್ಯಸ್ತ ಆಗಿರುವ ಕಾರಣ ಇದನ್ನೇ ನಂಬಿರುವ ಸಾವಿರಾರು ಕೂಲಿಕಾರ ಕುಟುಂಬಗಳು ಬೀದಿಗೆ ಬೀಳುತ್ತಾರೆ, ಮುಂದಿನ ಮೂರು ನಾಲ್ಕು ತಿಂಗಳು ಕೂಲಿ ಸೃಷ್ಟಿಯಾಗುವ ಸಾಧ್ಯತೆಗಳೇ ಇಲ್ಲ. ಇದರೊಂದಿಗೆ ಆದಿವಾಸಿಗಳು, ದಲಿತ ಕಾರ್ಮಿಕರ ಗುಡಿಸಲುಗಳೆಲ್ಲಾ ಮೂರಾಬಟ್ಟೆ ಆಗಿರುವ ವರದಿಗಳಿವೆ. ಇವೆಲ್ಲಾ ಫೋಟೋಜೆನಿಕ್ ಅಲ್ಲದ ಕಾರಣ ಟಿವಿ ಚಾನೆಲುಗಳ ಕಣ್ಣಿಗೆ ಬಿದ್ದಿಲ್ಲ.
ಊರಿನ ಸಂಪರ್ಕ ರಸ್ತೆಗಳೆಲ್ಲಾ ನಾಶವಾಗಿರುವ ಕಾರಣ ಹೊರಹೋಗಲೂ ವ್ಯವಸ್ಥೆ ಇಲ್ಲ. ಸ್ಥಳೀಯವಾಗಿ ಸಂಪನ್ಮೂಲಗಳೂ ಇಲ್ಲ. ನೆನಪಿಡಿ, ಮಳೆಗಾಲದ ಅರ್ಧ ಮಾತ್ರಾ ಮುಗಿದಿದೆ. ಸುಮಾರಾಗಿ ಕಾವೇರಿ ಸಂಕ್ರಮಣದವರೆಗೂ ಕೊಡಗಲ್ಲಿ ಮಳೆ ಬರುತ್ತಿರುತ್ತದೆ. ಈ ಒಂದೊಂದು ಮಳೆಯೂ ಹಸಿ ಮಣ್ಣನ್ನು ಇನ್ನಷ್ಟು ತೇವಗೊಳಿಸುವ ಶಕ್ತಿ ಹೊಂದಿದೆ.
ಅರ್ಥಾತ್ ಈ ಕುಟುಂಬಗಳಿಗೆ ಮುಂದಿನ ಕನಿಷ್ಠ ಆರು ತಿಂಗಳು ಸಹಾಯ ಹಸ್ತ ಬೇಕು. ಅಷ್ಟೇ ಅಲ್ಲ, ಮನೆ, ರಸ್ತೆ ನಿರ್ಮಿಸುವುದೆಂದರೆ ಏನಿದ್ದರೂ ಸಂಕ್ರಾಂತಿ ಕಳೆಯಬೇಕು. ಅಂದರೆ ಈ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ಬೇಕು. ಮಲೆನಾಡಿನಲ್ಲಿ ಮನೆ ಕಟ್ಟಿಸುವುದೆಂದರೆ ಮನೆಯೊಂದಕ್ಕೆ ಕನಿಷ್ಠ ಐದು ಲಕ್ಷ ಬೇಕು. ಇನ್ನು ಭೂಕುಸಿತ ನಿರೋಧಕ ರೀತಿಯಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಮರುಚಿಂತನೆ ನಡೆಯಬೇಕಾಗಿದೆ. ಇದು ಗ್ರಾಮೀಣ ಪರಿಸರದ ಬಡವರ ಬದುಕು ಕಟ್ಟುವ ಬಗ್ಗೆ. ನಾಶವಾದ ತೋಟಗಳ ಮರು ಸೃಷ್ಟಿಗೆ ರ್ದೀಕಾಲೀನ ಹಣಕಾಸಿನ ನೆರವು ಬೇಕು.
ಇನ್ನೊಂದೆಡೆ ಸಂಪರ್ಕ ರಸ್ತೆಗಳನ್ನು ಸರ್ಕಾರ ಮರು ನಿರ್ಮಿಸಲು ಸಮರೋಪಾದಿಯಲ್ಲಿ ತಯಾರಾಗಬೇಕು. ಮಡಿಕೇರಿ-ಸುಳ್ಯ, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ ; ಬಿಸಿಲೆ- ಸುಬ್ರಮಣ್ಯ ರಸ್ತೆಗಳು ಸಂಪೂರ್ಣ ಪಾತಾಳಕ್ಕಿಳಿದಿವೆ. ಇವನ್ನು ನಿರ್ಮಿಸಲು ವೆಚ್ಚ ಮಾಡಿದ್ದಕ್ಕಿಂತ ಹೆಚ್ಚು ರಿಪೇರಿ ಮಾಡಲು ವೆಚ್ಚ ಮಾಡಬೇಕಿದೆ. ಮತ್ತೆ ಅದೇ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಿಸಿದರೆ ಘೋರ ಭವಿಷ್ಯದ ಅಪಾಯಕ್ಕೆ ಮುನ್ನುಡಿ ಬರೆದ ಹಾಗೆಯೇ ಸೈ. ಅಂದರೆ ಇಡೀ ಪುನರ್ನಿರ್ಮಾಣ ಪರಿಸರ ಸಂವೇದೀ ಸೂಕ್ಷ್ಮಗಳನ್ನು ಒಳಗೊಳ್ಳಬೇಕಾಗಿದೆ.
ಪರಿಹಾರ ಕಾಮಗಾರಿಗಳ ಜವಾಬ್ದಾರಿ ಗಮನಿಸಿದರೆ, ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿ ಹೆಚ್ಚು. ಅನುದಾನವೂ ಇದೇ ರಿತಿಯಲ್ಲಿ ಹರಿದು ಬರಲಿದೆ. ಈ ಇಲಾಖೆಗಳಿಗೆ ಅನುಕಂಪ ಬಿಡಿ, ದಕ್ಷತೆ ಇರುವ ಪುರಾವೆಯೂ ಇಲ್ಲ. ಇದರೊಂದಿಗೇ ಕೊಕ್ಕೆ ಹಾಕುವ ಮೂಲಕ ಕಾಮಗಾರಿಗಳನ್ನು ತ್ರಿಶಂಕು ಸ್ಥಿತಿಯಲ್ಲಿಡುವ ಸಾಮಥ್ರ್ಯ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಗಿವೆ. ಇವೆರಡೂ ಇಲಾಖೆಗಳ ಆದಾಯ ಮೂಲವೇ ಇದು. ಈ ಇಲಾಖೆಗಳಿಗೆ ಇಡೀ ಕೊಡಗು ಜಿಲ್ಲೆಯೇ ಒಂದು ಊಟದ ತಟ್ಟೆಯ ಹಾಗೆ ಕಂಡರೆ ಅಚ್ಚರಿ ಇಲ್ಲ!
ರೈತರ ಸಾಲಮನ್ನಾ ಮಾಡಿ ಈಗಾಗಲೇ ನಿರ್ಧನ ಯೋಗದಲ್ಲಿರುವ ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಕನಿಷ್ಠ 2-3 ಸಾವಿರ ಕೋಟಿ ವಿನಿಯೋಗಿಸಬೇಕಿದೆ. ಕೇಂದ್ರದ ಅನುದಾನ ದೊಡ್ಡ ಮಟ್ಟದಲ್ಲಿ ಬಂದರೆ ಪರಿಸ್ಥಿತಿ ಸುಧಾರಿಸೀತು. ಆದರೆ ಪುನರ್ನಿರ್ಮಾಣ ಏನಿದ್ದರೂ ಜನವರಿಯಿಂದಾಚೆ ಎಂಬ ಸತ್ಯದೊಂದಿಗೆ ಲೋಕಸಭಾ ಚುನಾವಣೆಯ ಭರಾಟೆ ನೆನಪಿಸಿಕೊಂಡರೆ ಪರಿಹಾರ ಎಷ್ಟರ ಮಟ್ಟಿಗೆ ಸಕಾಲದಲ್ಲಿ ಪೂರೈಸೀತು ಎಂಬ ಚಿಂತೆ ನಮ್ಮನ್ನು ಕಾಡಬೇಕು.
ಆದ್ದರಿಂದಲೇ ನಾವು ಈ ಆಡಳಿತ ಯಂತ್ರದ ನಡೆಗಳ ಮೇಲೆ ಕಣ್ಣಿಡಲು ಸನ್ನದ್ಧರಾಗಬೇಕಿದೆ.

 

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...