Homeಮುಖಪುಟಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

ಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

- Advertisement -
- Advertisement -

ಕೊಡಗಿನ ದುರಂತಕ್ಕೆ ಎಲ್ಲರೂ ಸ್ಪಂದಿಸಿದ್ದಾರೆ. ಕೇರಳದ ದುರಂತದ ಮುಂದುವರಿಕೆಯೋ ಎಂಬಂತೆ ಕೊಡಗಿನ ಭೂಕುಸಿತ ಘಟಿಸಿದೆ. ನೂರಾರು ಜನ ಮನೆ ತೋಟ ಕಳೆದುಕೊಂಡಿದ್ದರೆ, ಸಾವಿರಾರು ಜನ ಪ್ರಕೃತಿಯ ಮುನಿಸಿಗೆ ಹೆದರಿ ಊರು ಬಿಟ್ಟಿದ್ದಾರೆ. ಸಂಪರ್ಕ ರಸ್ತೆಗಳೆನ್ನುವ ರಸ್ತೆಗಳೆಲ್ಲವೂ ಕುಸಿದು ಹೋಗಿವೆ. ಮುಖ್ಯತಃ ಬಯಲು ಸೀಮೆ ಮತ್ತು ಕರಾವಳಿಯನ್ನು ಸಂಪರ್ಕಿಸುವ ಜೀವ ನಾಡಿಯಂತಿರುವ ಮುಖ್ಯ ಹೆದ್ದಾರಿಗಳು ಸಂಪೂರ್ಣ ನಾಶವಾಗಿವೆ. ಒಟ್ಟಾರೆ ನಷ್ಟವನ್ನು ಅಂದಾಜು ಮಾಡಲು ಇನ್ನಷ್ಟು ಸಮಯ ಬೇಕು. ಕೊಡಗಿನ ದುರಂತದ ತುರ್ತು ಪರಿಹಾರಗಳಿಗೆ ಎಲ್ಲರೂ ಸ್ಪಂದಿಸುತ್ತಿರುವುದು ಶ್ಲಾಘನೀಯ. ಅದರಿಂದಾಚೆ, ಈ ವರ್ಷಾಂತ್ಯದ ವರೆಗೆ ಮತ್ತು ದೀರ್ಘಕಾಲೀನ ಪರಿಹಾರಗಳ ಬಗ್ಗೆಯೂ ಯೋಚಿಸಬೇಕಾಗಿದೆ.
ಈ ಭೂಕುಸಿತ ಅರ್ಧಕ್ಕರ್ಧ ಮನುಷ್ಯ ಹಸ್ತಕ್ಷೇಪದಿಂದ ಎಂಬುದು ನಿರ್ವಿವಾದ. ಕೊಡಗಿನ ಸ್ಥಳೀಯ ಸಂಸ್ಕøತಿ ಉಳಿದ ಮಲೆನಾಡಿನ ಹಾಗೆ ಬಯಲು ಸೀಮೆಗಿಂತ ಭಿನ್ನ. ಎಲ್ಲರೂ ತಮ್ಮ ಜಮೀನಿನಲ್ಲಿ ಮನೆ ಕಟ್ಟಿಕೊಳ್ಳುತ್ತಾರೆ. ಅದಕ್ಕೆ ರಸ್ತೆಯನ್ನೂ ಮಾಡಿಕೊಳ್ಳುತ್ತಾರೆ. ಇವೆರಡಕ್ಕೂ ಮನೆ ಹಿಂದಿನ ಗುಡ್ಡವನ್ನು ಬಗೆಯಬೇಕು! ಹಾಗೇ ಸರ್ಕಾರೀ ರಸ್ತೆಗಳು ಅಗಲೀಕರಣಗೊಂಡು ನಿರ್ಮಾಣಗೊಂಡಲ್ಲೆಲ್ಲಾ ರಸ್ತೆಗಳನ್ನು ಭೂಮಿ ನುಂಗಿ ಹಾಕಿದೆ. ಜೆಸಿಬಿಯಂಥಾ ಯಂತ್ರಗಳನ್ನು ಬಳಸಿದ ಕಾರಣ ಭೂಮಿ ಒತ್ತಡಕ್ಕೊಳಗಾಗಿದೆ ಎಂಬ ಅಂಶ ಚರ್ಚಿಸಬೇಕಾದ ಸಂಗತಿ.
ಕಾಫಿ ತೋಟಗಳ ಎಗ್ಗಿಲ್ಲದ ವಿಸ್ತರಣೆ ಇನ್ನೊಂದು ಕಾರಣ. ಈ ವಿಸ್ತರಣೆಯಲ್ಲಿ ಜಮೀನಿನಲ್ಲಿದ್ದ ಕಾಡುಮರಗಳನ್ನು ಬಹುತೇಕ ಟಿಂಬರ್ ಅಂತ ಮಾರಿಯಾಗಿದೆ. ಅಲ್ಲಿ ಉಳಿದಿರುವುದು ಸಿಲ್ವರ್‍ನಂಥಾ ಮೃದು ಮರಗಳು ಮಾತ್ರಾ. ಕೊಡಗಿನ ಮಣ್ಣು ಕೊಂಚ ಮರಳು ಮಿಶ್ರಿತ. ಅದು ಲ್ಯಾಟರೈಟ್ ಕುಲಕ್ಕೆ ಸೇರಿದ್ದಲ್ಲ. ಕೊಡಗಿನ ಅಂಚಿನ ಭಾಗಗಳು ತಾಂತ್ರಿಕವಾಗಿ ಲ್ಯಾಟರೈಟ್ ಆದರೂ ಅದರಲ್ಲಿ ಕ್ಲೇ ಅಂಶ ಯಥೇಚ್ಛ ಇದೆಯಂತೆ. ಈ ಕಾರಣಕ್ಕೇ ಅದು ಬೇಗ ಸಡಿಲವಾಗುತ್ತದೆ. ಮರಗಳು ದೈತ್ಯಾಕಾರವಾಗಿ ಬೆಳೆಯಲೂ ಇದೇ ಕಾರಣ. ಬೇರು ಇಳಿಸುವುದು ಸುಲಭ. ಇವು ಗ್ರಾಮೀಣ ಪರಿಸರದ ಭೂಕುಸಿತದ ಬಗ್ಗೆ.
ಇನ್ನು ಮಡಿಕೇರಿಯಂಥಾ ಪಟ್ಟಣದಲ್ಲಿ ಹೊಸ ಬಡಾವಣೆಗಳ ಮನೆಗಳನ್ನು ಕಟ್ಟುವಾಗ ಜಲ್ಲಿ ಸಿಮೆಂಟ್ ಕಬ್ಬಿಣದ ಮೇಲೆ ವಿಶ್ವಾಸವಿಟ್ಟೇ ಕಟ್ಟಿದ್ದು ಹೊರತು, ಮಣ್ಣಿನ ಗುಣ ಸ್ವಭಾವದ ಬಗ್ಗೆ ಯಾವ ಎಂಜಿನಿಯರೂ ತಲೆ ಕೆಡಿಸಿಕೊಂಡಿಲ್ಲ. ಬೆಂಕಿ ಪೊಟ್ಟಣ ಇಟ್ಟ ಹಾಗೆ ಗುಡ್ಡದ ಇಳಿಜಾರು ಪೂರ್ತಿ ಮನೆಗಳು ಕಟ್ಟಿದ ರೀತಿ ಅಪಾಯವನ್ನು ಮೈಮೇಲೆ ಎಳೆದುಕೊಂಡ ಪರಿಯನ್ನು ಅನಾವರಣಗೊಳಿಸಿದೆ.
ಕುಶಾಲನಗರದಂಥಾ ಊರುಗಳಲ್ಲಿ ನದೀ ಪಾತ್ರದ ಗದ್ದೆಗಳಲ್ಲಿ ಲೇ ಔಟ್ ಮಾಡುವ ಖಯಾಲಿ ಶುರುವಾಗಿದ್ದೇ, ಈ ಬಾರಿ ಅಲ್ಲೆಲ್ಲಾ ನೀರು ನುಗ್ಗಲು ಕಾರಣವಾಗಿದೆ.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮಟ್ಟದ ರಸ್ತೆಗಳನ್ನು ನಿರ್ಮಿಸಿದ ರೀತಿ ಎಷ್ಟು ಅವೈಜ್ಞಾನಿಕ ಎಂಬುದಕ್ಕೆ ಈ ರಸ್ತೆಗಳೆಲ್ಲಾ ಸರ್ವ ನಾಶವಾಗಿರುವುದೇ ಪುರಾವೆ. ಇವನ್ನು ಪೋಸ್ಟ್‍ಮಾರ್ಟಮ್ ಎಂದು ಭಾವಿಸೋಣ.
ಮುಂದಿನ ಸರಣಿ ಸಮಸ್ಯೆಗಳೇನು ಎಂಬುದನ್ನು ಗಮನಿಸೋಣ. ಈ ಬಾರಿಯ ಮಳೆಯಿಂದಾಗಿ ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿ ನೆಲ ಕಚ್ಚುವ ಸಾಧ್ಯತೆ ನಿಚ್ಚಳವಾಗಿದೆ. ತೋಟಗಳೆಲ್ಲಾ ಅಸ್ತವ್ಯಸ್ತ ಆಗಿರುವ ಕಾರಣ ಇದನ್ನೇ ನಂಬಿರುವ ಸಾವಿರಾರು ಕೂಲಿಕಾರ ಕುಟುಂಬಗಳು ಬೀದಿಗೆ ಬೀಳುತ್ತಾರೆ, ಮುಂದಿನ ಮೂರು ನಾಲ್ಕು ತಿಂಗಳು ಕೂಲಿ ಸೃಷ್ಟಿಯಾಗುವ ಸಾಧ್ಯತೆಗಳೇ ಇಲ್ಲ. ಇದರೊಂದಿಗೆ ಆದಿವಾಸಿಗಳು, ದಲಿತ ಕಾರ್ಮಿಕರ ಗುಡಿಸಲುಗಳೆಲ್ಲಾ ಮೂರಾಬಟ್ಟೆ ಆಗಿರುವ ವರದಿಗಳಿವೆ. ಇವೆಲ್ಲಾ ಫೋಟೋಜೆನಿಕ್ ಅಲ್ಲದ ಕಾರಣ ಟಿವಿ ಚಾನೆಲುಗಳ ಕಣ್ಣಿಗೆ ಬಿದ್ದಿಲ್ಲ.
ಊರಿನ ಸಂಪರ್ಕ ರಸ್ತೆಗಳೆಲ್ಲಾ ನಾಶವಾಗಿರುವ ಕಾರಣ ಹೊರಹೋಗಲೂ ವ್ಯವಸ್ಥೆ ಇಲ್ಲ. ಸ್ಥಳೀಯವಾಗಿ ಸಂಪನ್ಮೂಲಗಳೂ ಇಲ್ಲ. ನೆನಪಿಡಿ, ಮಳೆಗಾಲದ ಅರ್ಧ ಮಾತ್ರಾ ಮುಗಿದಿದೆ. ಸುಮಾರಾಗಿ ಕಾವೇರಿ ಸಂಕ್ರಮಣದವರೆಗೂ ಕೊಡಗಲ್ಲಿ ಮಳೆ ಬರುತ್ತಿರುತ್ತದೆ. ಈ ಒಂದೊಂದು ಮಳೆಯೂ ಹಸಿ ಮಣ್ಣನ್ನು ಇನ್ನಷ್ಟು ತೇವಗೊಳಿಸುವ ಶಕ್ತಿ ಹೊಂದಿದೆ.
ಅರ್ಥಾತ್ ಈ ಕುಟುಂಬಗಳಿಗೆ ಮುಂದಿನ ಕನಿಷ್ಠ ಆರು ತಿಂಗಳು ಸಹಾಯ ಹಸ್ತ ಬೇಕು. ಅಷ್ಟೇ ಅಲ್ಲ, ಮನೆ, ರಸ್ತೆ ನಿರ್ಮಿಸುವುದೆಂದರೆ ಏನಿದ್ದರೂ ಸಂಕ್ರಾಂತಿ ಕಳೆಯಬೇಕು. ಅಂದರೆ ಈ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ಬೇಕು. ಮಲೆನಾಡಿನಲ್ಲಿ ಮನೆ ಕಟ್ಟಿಸುವುದೆಂದರೆ ಮನೆಯೊಂದಕ್ಕೆ ಕನಿಷ್ಠ ಐದು ಲಕ್ಷ ಬೇಕು. ಇನ್ನು ಭೂಕುಸಿತ ನಿರೋಧಕ ರೀತಿಯಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಮರುಚಿಂತನೆ ನಡೆಯಬೇಕಾಗಿದೆ. ಇದು ಗ್ರಾಮೀಣ ಪರಿಸರದ ಬಡವರ ಬದುಕು ಕಟ್ಟುವ ಬಗ್ಗೆ. ನಾಶವಾದ ತೋಟಗಳ ಮರು ಸೃಷ್ಟಿಗೆ ರ್ದೀಕಾಲೀನ ಹಣಕಾಸಿನ ನೆರವು ಬೇಕು.
ಇನ್ನೊಂದೆಡೆ ಸಂಪರ್ಕ ರಸ್ತೆಗಳನ್ನು ಸರ್ಕಾರ ಮರು ನಿರ್ಮಿಸಲು ಸಮರೋಪಾದಿಯಲ್ಲಿ ತಯಾರಾಗಬೇಕು. ಮಡಿಕೇರಿ-ಸುಳ್ಯ, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ ; ಬಿಸಿಲೆ- ಸುಬ್ರಮಣ್ಯ ರಸ್ತೆಗಳು ಸಂಪೂರ್ಣ ಪಾತಾಳಕ್ಕಿಳಿದಿವೆ. ಇವನ್ನು ನಿರ್ಮಿಸಲು ವೆಚ್ಚ ಮಾಡಿದ್ದಕ್ಕಿಂತ ಹೆಚ್ಚು ರಿಪೇರಿ ಮಾಡಲು ವೆಚ್ಚ ಮಾಡಬೇಕಿದೆ. ಮತ್ತೆ ಅದೇ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಿಸಿದರೆ ಘೋರ ಭವಿಷ್ಯದ ಅಪಾಯಕ್ಕೆ ಮುನ್ನುಡಿ ಬರೆದ ಹಾಗೆಯೇ ಸೈ. ಅಂದರೆ ಇಡೀ ಪುನರ್ನಿರ್ಮಾಣ ಪರಿಸರ ಸಂವೇದೀ ಸೂಕ್ಷ್ಮಗಳನ್ನು ಒಳಗೊಳ್ಳಬೇಕಾಗಿದೆ.
ಪರಿಹಾರ ಕಾಮಗಾರಿಗಳ ಜವಾಬ್ದಾರಿ ಗಮನಿಸಿದರೆ, ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿ ಹೆಚ್ಚು. ಅನುದಾನವೂ ಇದೇ ರಿತಿಯಲ್ಲಿ ಹರಿದು ಬರಲಿದೆ. ಈ ಇಲಾಖೆಗಳಿಗೆ ಅನುಕಂಪ ಬಿಡಿ, ದಕ್ಷತೆ ಇರುವ ಪುರಾವೆಯೂ ಇಲ್ಲ. ಇದರೊಂದಿಗೇ ಕೊಕ್ಕೆ ಹಾಕುವ ಮೂಲಕ ಕಾಮಗಾರಿಗಳನ್ನು ತ್ರಿಶಂಕು ಸ್ಥಿತಿಯಲ್ಲಿಡುವ ಸಾಮಥ್ರ್ಯ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಗಿವೆ. ಇವೆರಡೂ ಇಲಾಖೆಗಳ ಆದಾಯ ಮೂಲವೇ ಇದು. ಈ ಇಲಾಖೆಗಳಿಗೆ ಇಡೀ ಕೊಡಗು ಜಿಲ್ಲೆಯೇ ಒಂದು ಊಟದ ತಟ್ಟೆಯ ಹಾಗೆ ಕಂಡರೆ ಅಚ್ಚರಿ ಇಲ್ಲ!
ರೈತರ ಸಾಲಮನ್ನಾ ಮಾಡಿ ಈಗಾಗಲೇ ನಿರ್ಧನ ಯೋಗದಲ್ಲಿರುವ ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಕನಿಷ್ಠ 2-3 ಸಾವಿರ ಕೋಟಿ ವಿನಿಯೋಗಿಸಬೇಕಿದೆ. ಕೇಂದ್ರದ ಅನುದಾನ ದೊಡ್ಡ ಮಟ್ಟದಲ್ಲಿ ಬಂದರೆ ಪರಿಸ್ಥಿತಿ ಸುಧಾರಿಸೀತು. ಆದರೆ ಪುನರ್ನಿರ್ಮಾಣ ಏನಿದ್ದರೂ ಜನವರಿಯಿಂದಾಚೆ ಎಂಬ ಸತ್ಯದೊಂದಿಗೆ ಲೋಕಸಭಾ ಚುನಾವಣೆಯ ಭರಾಟೆ ನೆನಪಿಸಿಕೊಂಡರೆ ಪರಿಹಾರ ಎಷ್ಟರ ಮಟ್ಟಿಗೆ ಸಕಾಲದಲ್ಲಿ ಪೂರೈಸೀತು ಎಂಬ ಚಿಂತೆ ನಮ್ಮನ್ನು ಕಾಡಬೇಕು.
ಆದ್ದರಿಂದಲೇ ನಾವು ಈ ಆಡಳಿತ ಯಂತ್ರದ ನಡೆಗಳ ಮೇಲೆ ಕಣ್ಣಿಡಲು ಸನ್ನದ್ಧರಾಗಬೇಕಿದೆ.

 

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...