Homeಕರ್ನಾಟಕಕೊಡಗು: 2 ದಶಕಗಳ ಬಳಿಕ ಬಿಜೆಪಿಗೆ ಗೇಟ್‌ಪಾಸ್‌; ಕಾಂಗ್ರೆಸ್ ಗೆಲುವಿಗೆ ಕಾರಣವೇನು?

ಕೊಡಗು: 2 ದಶಕಗಳ ಬಳಿಕ ಬಿಜೆಪಿಗೆ ಗೇಟ್‌ಪಾಸ್‌; ಕಾಂಗ್ರೆಸ್ ಗೆಲುವಿಗೆ ಕಾರಣವೇನು?

- Advertisement -
- Advertisement -

ಹಿಂದುತ್ವದ ಪ್ರಯೋಗಶಾಲೆಗಳಲ್ಲಿ ಒಂದಾದ ಕೊಡಗು ಜಿಲ್ಲೆಯಲ್ಲಿ ಚುನಾವಣೆ ಫ್ಯಾಕ್ಟರ್‌ಗಳು ರಾಜ್ಯದ ಇತರ ಕ್ಷೇತ್ರಗಳಿಗಿಂತ ಭಿನ್ನ. ಇಲ್ಲಿ ಜಾತಿಗಿಂತ ಧರ್ಮವನ್ನು ಮುನ್ನೆಲೆಗೆ ತಂದು ರಾಜಕಾರಣ ಮಾಡಿದವರು ಮೇಲುಗೈ ಸಾಧಿಸುತ್ತಾ ಬಂದಿದ್ದರು. ಇಲ್ಲಿನ ವಿರಾಜಪೇಟೆ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆ ಬಿಜೆಪಿಯ ನೆಲೆಯಾಗಿ ಮಾರ್ಪಟ್ಟಿತ್ತು. ಆದರೆ ಈ ಭಾರಿ ಕಾಂಗ್ರೆಸ್ ಪಕ್ಷವು ಪ್ರಬಲ ಅಭ್ಯರ್ಥಿಗಳನ್ನು ಹಾಕಿದ್ದರಿಂದ ಸುಮಾರು ಎರಡು ದಶಕಗಳ ಬಳಿಕ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದೆ. ವಿರಾಜಪೇಟೆ ಮತ್ತು ಮಡಿಕೇರಿ ವಿಧಾನಸಭೆ ಕ್ಷೇತ್ರಗಳೆರಡಲ್ಲೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿಯ ಹಿರಿಯ ರಾಜಕಾರಣಿಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್‌ ಇಬ್ಬರಿಗೂ ಕೊಡಗಿನ ಜನತೆ ಸೋಲುಣಿಸಿದ್ದಾರೆ.

ವಿರಾಜಪೇಟೆಯಲ್ಲಿ ಏನಾಯಿತು?

ವಿರಾಜಪೇಟೆಯಲ್ಲಿ ಕೊಡವ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಅರೆಭಾಷೆ ಗೌಡ ಸಮುದಾಯದ ಪ್ರಾಬಲ್ಯವಿದೆ. ಆದರೆ ಕೊಡವರು ಹೆಚ್ಚಿರುವಲ್ಲಿ ಅರೆಭಾಷೆ ಗೌಡ ಸಮುದಾಯದ ಕೆ.ಜಿ.ಬೋಪಯ್ಯ, ಗೌಡರು ಹೆಚ್ಚಿರುವಲ್ಲಿ ಕೊಡವ ಸಮುದಾಯದ ಅಪ್ಪಚ್ಚು ರಂಜನ್ ಗೆಲ್ಲುತ್ತಾ ಬಂದಿದ್ದು ಕೊಡಗು ಜಿಲ್ಲೆಯ ವಿಶೇಷವಾಗಿತ್ತು. ಆದರೆ ಈ ಭಾರಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಾತಿ ದಾಳವನ್ನು ಉರುಳಿಸಿತ್ತು.

ವಿರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿರುವ ಎ.ಎಸ್.ಪೊನ್ನಣ್ಣ ಅವರು ಹೈಕೋರ್ಟ್ ವಕೀಲರು. ಪ್ರಖರ ವಿಚಾರವಾದಿ, ರಾಜಕಾರಣಿ ದಿವಂಗತ ಎ.ಕೆ.ಸುಬ್ಬಯ್ಯನವರ ಪುತ್ರರಾದ ಪೊನ್ನಣ್ಣ ಅವರು ರಾಜ್ಯ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಜೊತೆಗೆ ಕೊಡವ ಸಮುದಾಯದ ಅಸ್ಮಿತೆಗಾಗಿಯೂ ಹೋರಾಡಿದ್ದಾರೆ. ಕೊಡವರಿಗಿರುವ ಕೋವಿ ಹಕ್ಕಿನ ಪ್ರಶ್ನೆ ಬಂದಾಗ, ಹೈಕೋರ್ಟ್‌ನಲ್ಲಿ ಹೋರಾಡಿ ಸಫಲರಾಗಿದ್ದಾರೆ. ಕ್ಷೇತ್ರದಲ್ಲಿ ಬಹುದೊಡ್ಡ ಮಟ್ಟದಲ್ಲಿ ಬೆಂಬಲಿಗರನ್ನು ಹೊಂದಿದ್ದು, ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ನೆಲೆಸಿದ್ದಾರೆ. ಕಷ್ಟವೆಂದು ಬಂದವರಿಗೆ ತಮ್ಮ ಕೈಯಿಂದ ಹಣಕಾಸಿನ ನೆರವು ನೀಡಿದ್ದಾರೆ. ಇಂತಹ ಪೊನ್ನಣ್ಣ ಅವರನ್ನು ಕೆ.ಜಿ.ಬೋಪಯ್ಯ ಅವರ ವಿರುದ್ಧ ಕಾಂಗ್ರೆಸ್ ಕಣಕ್ಕಿಳಿಸಿತ್ತು.

ರಾಜ್ಯದ ವಿಧಾನಸಭೆಯ ಸ್ಪೀಕರ್‌ ಆಗಿ ಕೆಲಸ ಮಾಡಿರುವ ಬೋಪಯ್ಯನವರು 2008, 2013, 2018ರಲ್ಲಿ ಹ್ಯಾಟ್ರಿಕ್ ಗೆಲುವನ್ನು ಇಲ್ಲಿ ಪಡೆದಿದ್ದರು. 2004ರಲ್ಲಿ ಮಡಿಕೇರಿಯಿಂದ ಬೋಪಯ್ಯ ಆಯ್ಕೆಯಾಗಿದ್ದರು. ಈಗಾಗಲೇ ಇಳಿ ವಯಸ್ಸಿನಲ್ಲಿರುವ ಬೋಪಯ್ಯನವರಿಗೆ ಟಿಕೆಟ್ ನೀಡಬಾರದೆಂಬ ಆಗ್ರಹಗಳು ಬಿಜೆಪಿಯೊಳಗೆ ಕೇಳಿಬಂದಿದ್ದವು. ಆದರೆ ಅಂತಿಮ ಕ್ಷಣದಲ್ಲಿ ಬಿಜೆಪಿ ಬೋಪಯ್ಯನವರಿಗೆಯೇ ಮಣೆ ಹಾಕಿತು. 2013ರ ಚುನಾವಣೆಯಲ್ಲಿ ಕೆ.ಜಿ.ಬೋಪಯ್ಯ 3,414 ಮತಗಳಿಂದಷ್ಟೇ ಗೆಲುವು ಸಾಧಿಸಿದ್ದರು. ಆದರೆ, 2018ರಲ್ಲಿ ಗೆಲುವಿನ ಅಂತರವನ್ನು ಅವರು 13,353ಕ್ಕೆ ಹೆಚ್ಚಿಸಿಕೊಂಡಿದ್ದರು. 2013ರಲ್ಲಿ ಬೋಪಯ್ಯನವರ ವಿರುದ್ಧ ಕಾಂಗ್ರೆಸ್ ಕಣಕ್ಕಿಳಿಸಿದ್ದ ಅಭ್ಯರ್ಥಿ ಬಿ.ಟಿ ಪ್ರದೀಪ್ ಮತ್ತು 2018ರ ಸಿ.ಎಸ್.ಅರುಣ್ ಮಾಚಯ್ಯ ಇಬ್ಬರೂ ಕೊಡವ ಸಮುದಾಯದವರು. ಹೀಗಾಗಿ ಅರೆಗೌಡ v/s ಕೊಡವ ದಾಳವನ್ನು ಕಾಂಗ್ರೆಸ್ ಈ ಬಾರಿಯೂ ಉರುಳಿಸಿತ್ತು. ದಿವಂಗತ ಬಿ.ಟಿ.ಪ್ರದೀಪ್ ಅವರಂತೆಯೇ ಪೊನ್ನಣ್ಣನವರು ಪ್ರಬಲ ಪ್ರತಿಸ್ಪರ್ಧಿಯಾಗಿರುವುದರಿಂದ ಬೋಪಯ್ಯನವರಿಗೆ ಸೋಲು ಉಂಟಾಗಿದೆ.

ವಿರಾಜಪೇಟೆಯಲ್ಲಿ ಕೊಡವರು ಹೆಚ್ಚಿರುವ ಕಾರಣ ಇಲ್ಲಿ ಕೊಡವರಿಗೆ ಬಿಜೆಪಿ ಟಿಕೆಟ್ ಕೊಡಬೇಕೆಂದು ಅನೇಕರ ಅಪೇಕ್ಷೆಯಾಗಿತ್ತು. ಆದರೆ ಹಿಂದುತ್ವ ಮುಖ್ಯವಾಗಬೇಕೆಂದು ಬಯಸುವವರು ಕೆ.ಜಿ.ಬೋಪಯ್ಯನವರ ಜೊತೆಯಲ್ಲಿದ್ದರು. ಹಿಂದೂ v/s ಮುಸ್ಲಿಂ ರಾಜಕಾರಣದ ನೆಲದಲ್ಲಿ ಜಾತಿ ಅಸ್ಮಿತೆಯನ್ನು ಬಡಿದೆಬ್ಬಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಸುಮಾರು 35,000 ಮುಸ್ಲಿಂ, ಕೊಡವ ಸಮುದಾಯದ 1,20,000 ಮತದಾರರಿದ್ದಾರೆಂದು ಅಂದಾಜಿಸಲಾಗಿದೆ.

ಮಡಿಕೇರಿಯಲ್ಲಿ ಬಿಜೆಪಿ ಸೋತಿದ್ದೇಕೆ?

ಬಿಜೆಪಿ ಭದ್ರಕೋಟೆ ಎಂದೇ ಗುರುತಿಸಲಾಗುತ್ತಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಅರೆಭಾಷೆ ಗೌಡ ಸಮುದಾಯದ ಅಪ್ಪಚ್ಚು ರಂಜನ್ ಅವರದ್ದೇ ಪಾರಮ್ಯವಿತ್ತು. ಆರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ, ಐದು ಬಾರಿ ಗೆದ್ದಿರುವ ಹಾಲಿ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಈ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಮಂಥರ್‌ ಗೌಡ ಸವಾಲಾಗಿ ಪರಿಣಮಿಸಿದರು. ಅಂತಿಮವಾಗಿ ಮಂಥರ್‌ ಗೆಲುವಿನ ನಗೆಬೀರಿದ್ದಾರೆ.

ಗೌಡ ಸಮುದಾಯದ (ಒಕ್ಕಲಿಗ, ಅರೆಭಾಷೆ ಗೌಡ ಸೇರಿ) 51126 ಮತದಾರರು ಇದ್ದಾರೆ. ಉಳಿದಂತೆ ಲಿಂಗಾಯತ 24219, ಪ.ಪಂಗಡ 3456, ಕುರುಬ 6849, ಮುಸ್ಲಿಂ 23554, ಕ್ರೈಸ್ತ 9464, ಬ್ರಾಹ್ಮಣ 3258, ಕೊಡವ ಹಾಗೂ ಕೊಡವ ಭಾಷಿಕ 24856, ಮಲಯಾಳಿ 15624, ತಮಿಳು 6038, ಬಿಲ್ಲವ 1962, ಬಂಟ್ಸ್ 3264, ವಿಶ್ವಕರ್ಮ 3542, ಮಡಿವಾಳ 1503, ದೇವಾಂಗ ಶೆಟ್ಟಿ 4865, ಸವಿತಾ ಸಮಾಜ 1256, ನಾಯಕ್ 563, ಜೈನರು 253, ಇತರೆ ಸಮುದಾಯಗಳ 1735 ಮತದಾರರು ಇದ್ದಾರೆಂದು ಹಿಂದಿನ ಅಂಕಿ-ಅಂಶಗಳು ಹೇಳುತ್ತವೆ. ಜಾತಿ ಲೆಕ್ಕಾಚಾರಗಳು ಇಲ್ಲಿ ವರ್ಕೌಟ್ ಆಗಲ್ಲ, ಹಿಂದುತ್ವವೇ ಪ್ರಧಾನವಾಗುತ್ತದೆ ಎಂದು ಹೇಳಿದರೂ ಅಷ್ಟು ಸುಲಭವಾಗಿ ಜಾತಿ ಸಮೀಕರಣವನ್ನು ತೆಗೆದು ಹಾಕಲೂ ಆಗಲ್ಲ. ಈ ಬಾರಿಯ ಫಲಿತಾಂಶದ ಮೂಲಕ ಜಾತಿ ಸಮೀಕರಣದ ಮಹತ್ವವನ್ನು ಇಲ್ಲಿ ಕಾಂಗ್ರೆಸ್ ಸಾಬೀತು ಮಾಡಿದೆ.

ಹಿಂದುತ್ವ ಪ್ರಯೋಗಶಾಲೆಗಳಲ್ಲಿ ಒಂದಾದ ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಂಥರ್‌ ಗೌಡ ಅವರು ಹೊರಗಿನಿಂದ ಬಂದವರು. ಅರಕಲಗೂಡು ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್‌ ಕಾಂಗ್ರೆಸ್ಸಿನಲ್ಲಿ ಗುರುತಿಸಿಕೊಂಡಿದ್ದಾರೆ. ಅಪ್ಪ ಒಂದು ಪಕ್ಷ, ಮಗ ಒಂದು ಪಕ್ಷದಲ್ಲಿದ್ದಾರೆಂಬುದು ನಕರಾತ್ಮಕವಾಗಿ ಕಂಡರೂ ಮಂಥರ್‌ ಮಡಿಕೇರಿಯಲ್ಲಿ ಮ್ಯಾಜಿಕ್ ಮಾಡಬಲ್ಲ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದರು. “ನಾನು ಹೊರಗಿನ ಬಂದವನಲ್ಲ. ನನ್ನ ಪತ್ನಿ ಕೊಡಗಿನವರು. ನಾನು ಹತ್ತಾರು ವರ್ಷಗಳಿಂದ ಇಲ್ಲೇ ನೆಲೆಸಿದ್ದು, ಜನರೊಂದಿಗೆ ಕೆಲಸ ಮಾಡುತ್ತಿದ್ದೇನೆ” ಎಂದು ಮಂಥರ್‌ ಹೇಳಿಕೊಂಡಿದ್ದರು.

ಕಳೆದೆರಡು ವರ್ಷಗಳಿಂದ ಮಡಿಕೇರಿ ಭಾಗದಲ್ಲಿ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಂಥರ್‌ ಪ್ರವರ್ಧಮಾನಕ್ಕೆ ಬಂದರು. ಪಕ್ಷವನ್ನು ಸಂಘಟಿಸುವಲ್ಲಿ ಸಕ್ರಿಯವಾಗಿದ್ದರು. ಇಂತಹ ಮಂಥರ್‌, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಗಳು ನಡೆದಾಗ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಕೇವಲ 102 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಅಪ್ಪಚ್ಚು ರಂಜನ್‌ ಅವರ ಸಹೋದರ ಸುಜಾ ಕುಶಾಲಪ್ಪ ಗೆದ್ದಿದ್ದರು. ಚುನಾವಣೆಯಲ್ಲಿ ಸೋತರೂ ಕ್ಷೇತ್ರದ ಮೇಲೆ ತಮ್ಮ ಪ್ರಾಬಲ್ಯವನ್ನು ಮಂಥರ್‌ ಹೊಂದಿದ್ದರಿಂದ ಎಂಎಲ್‌ಎ ಟಿಕೆಟ್ ಕೂಡ ದೊರಕಿತು.

ಇದನ್ನೂ ಓದಿರಿ: ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ; ಶಿಗ್ಗಾಂವಿ ಹೊರತು ಎಲ್ಲ ಕಡೆಯಲ್ಲೂ ಕಾಂಗ್ರೆಸ್ ಮುನ್ನಡೆ

ಆದರೆ ಅಪ್ಪಚ್ಚು ರಂಜನ್‌ ಕೊಡಗಿನವರೇ ಆಗಿದ್ದು, ತಾನು ಸ್ಥಳೀಯನೆಂಬ ಪ್ಲೇಕಾರ್ಡ್ ಬಳಸುತ್ತಿದ್ದರು. ಅದನ್ನೇ ಪ್ರಬಲ ಅಸ್ತ್ರವಾಗಿ ಉಪಯೋಗಿಸಿ ಕ್ಷೇತ್ರದ ಮತದಾರರನ್ನು ಸೆಳೆಯಲು ಯತ್ನಿಸಿದ್ದರು. ಐದು ಭಾರಿ ಗೆದ್ದು, ಒಂದು ಭಾರಿ ಸೋತಿರುವ ರಂಜನ್ ಏಳನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬ ಆಗ್ರಹ ಬಿಜೆಪಿಯೊಳಗೆ ಕೇಳಿಬಂದಿತ್ತು. ಸಂಘಪರಿವಾರದ ಮುಖಂಡ ಭಾರತೀಶ್‌ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ರಂಜನ್ ಕೊನೆಯ ಕ್ಷಣದಲ್ಲಿ ಟಿಕೆಟ್ ಪಡೆಯುವಲ್ಲಿ ಸಫಲರಾಗಿದ್ದರು. ಭಾರತೀಶ್ ಅವರಿಗೆ ಅಪಾರ ಬೆಂಬಲಿಗರಿದ್ದು, ಆಂತರಿಕವಾಗಿ ಅಸಮಾಧಾನ ಹೊಂದಿದ್ದರು. ಇಷ್ಟು ದೀರ್ಘ ಅವಧಿಯಲ್ಲಿ ಶಾಸಕರಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕ್ಷೇತ್ರ ಅಭಿವೃದ್ಧಿಯಾಗಿಲ್ಲ, ಜನರ ಒಡನಾಡ ಕಡಿಮೆ ಮಾಡಿಕೊಂಡಿದ್ದಾರೆ, ಕಮಿಷನ್ ಪಡೆಯುತ್ತಾರೆಂಬ ಬೇಸರ ಮತದಾರರಲ್ಲಿ ಇತ್ತು.

ಮತ್ತೊಂದೆಡೆ ಯುವಮುಖವಾಗಿ ಹೊಮ್ಮಿದ್ದ ಮಂಥರ್‌, ಯುವಜನರೊಂದಿಗೆ ಗುರುತಿಸಿಕೊಂಡಿದ್ದಾರೆ. ಕ್ರೀಡಾ ಪಂದ್ಯಾವಳಿಗಳಿಗೆ ಧನ ಸಹಾಯ ಮಾಡಿ ಯುವಕರನ್ನು ತಮ್ಮತ್ತ ಸೆಳೆಯುತ್ತಿದ್ದರು. ಹಿಂದುತ್ವ ಪ್ರಬಲವಾಗಿರುವ ಈ ಕ್ಷೇತ್ರದಲ್ಲಿ ಟಿಪ್ಪು ವಿವಾದದಂತಹ ವಿಚಾರಗಳನ್ನು ಕೆದಕುವ ಪ್ರಯತ್ನವನ್ನು ಪ್ರತಿಸ್ಪರ್ಧಿಗಳು ಮಾಡುತ್ತಿದ್ದರು. ಆದರೆ ಇಂಥವುಗಳಿಂದ ಮಂಥರ್‌ ಅಂತರ ಕಾಯ್ದುಕೊಂಡಿದ್ದರು. ವೈದ್ಯಕೀಯ ವೃತ್ತಿಯ ಹಿನ್ನೆಲೆಯವರಾದ ಮಂಥರ್‌, ವಿವಾದಾತ್ಮಕ ವಿಚಾರಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತಟಸ್ಥ ನಿಲುವು ತಾಳುತ್ತಾ ಚಾಣಕ್ಷತೆ ಮೆರೆದಿದ್ದರು. “ಆದರೆ ಅಪ್ಪ ಜೆಡಿಎಸ್‌ನಲ್ಲಿದ್ದು, ನಾನು ಕಾಂಗ್ರೆಸ್ಸಿನಲ್ಲಿಯೇ ಉಳಿಯಲಿದ್ದೇನೆ” ಎಂಬ ಮಾತುಗಳನ್ನು ಮಂಥರ್‌ ಆಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...