Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...