Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...