Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...