Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....