Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....