Homeಕರ್ನಾಟಕಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

ಕೊಡಗು: ಹಿರಿಯ ಪತ್ರಕರ್ತ ಮನು ಶೆಣೈ ನಿಧನ; ಸಂತಾಪ

- Advertisement -
- Advertisement -

ಕೊಡಗು: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನದ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್‌.ಮನು ಶೆಣೈ (64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮನು ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಗೆಳೆಯರ ಬಳಗವನ್ನು ಅಗಲಿದ್ದಾರೆ.

ಅಗಲಿಗೆ ಜೀವಕ್ಕೆ ಸಂತಾಪ

“ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ. ಅರವತ್ತಮೂರು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅವರ ಅಗಲಿಕೆಗೆ ಸಂತಾಪ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ” ಎಂದು ಕೊಡಗು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

‘ರಾಜೀಯಾಗದ ಗೆಳೆಯ’

“ಮನು ನನ್ನ ಅತ್ಯಂತ ಆಪ್ತ ಗೆಳೆಯ. ನನ್ನೂರು ವಿರಾಜಪೇಟೆಯವರು. ನಿಷ್ಠುರ ಪ್ರಾಮಾಣಿಕ, ಪತ್ರಕರ್ತ. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿ, 1996ರಲ್ಲಿ ತನ್ನದೇ ಸ್ವಂತ ಪತ್ರಿಕೆ “ಕೊಡಗು ಸಮಾಚಾರ” ಆರಂಭಿಸಿಯೇ ಬಿಟ್ಟರು. ಒಂದು ಪತ್ರಿಕೆ ನಡೆಸೋದು ಎಷ್ಟು ಕಷ್ಟ ಎನ್ನುವುದು ಅದರ ಅನುಭವ ಇರುವವರಿಗೆ ಗೊತ್ತು. ಅನೇಕ ಸಮಸ್ಯೆಗಳ ಮಧ್ಯೆಯೂ ಅದನ್ನು ನಿಲ್ಲಿಸದೆ, ತಾನು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ 25 ವರ್ಷಗಳ ಕಾಲ ನಡೆಸಿದರು. ವಸ್ತು ನಿಷ್ಟ ವರದಿಗಾಗಿ ಅಲೆದಾಡಿ ಇದ್ದುದನ್ನ ಇದ್ದ ಹಾಗೆ ಬರೆಯುವ ಧೈರ್ಯ ಇದ್ದ ಮನು, ಅದರಿಂದ ಅನೇಕರ ಪಾಲಿಗೆ ‘ಶತ್ರು’ ಆಗಿದ್ದರು” ಎಂದು ಪತ್ರಕರ್ತ ಬೋಪಯ್ಯ ಚೋವಂಡ ಸ್ಮರಿಸಿದ್ದಾರೆ.

“ಇದು ಕಂಪ್ರೊಮೈಸ್ ಕಾಲ. ಸ್ವಲ್ಪ ಕಂಪ್ರೊಮೈಸ್‌ ಮಾಡ್ಕೊಂಡರೆ ಎಲ್ಲಾ ಸವಲತ್ತುಗಳು, ಪ್ರಶಸ್ತಿ, ಪುರಸ್ಕಾರಗಳು ಸಿಗುತ್ತವೆ. ಆದ್ರೆ ಮನು ಎಂದೂ ಅದನ್ನು ಮಾಡಲಿಲ್ಲ. ಹಾಗಾಗಿ ಅವನಿಗೆ ಸಿಗಬೇಕಿದ್ದ ಪ್ರಶಸ್ತಿಗಳೂ ಸಿಗಲಿಲ್ಲ. ಮನು ತುಂಬಾ ಕಷ್ಟ ಪಟ್ಟ. ಕಷ್ಟಪಡ್ತಾನೆ ಹೋಗಿ ಬಿಟ್ಟ! ಪ್ರಗತಿಪರ ಚಿಂತಕ, ಫೈರ್ ಬ್ರಾಂಡ್‌ ಎಂದೇ ಖ್ಯಾತರಾದ ಸುಬ್ಬಯ್ಯ ಅವರ ಬಗ್ಗೆ ಎರಡು ಪುಸ್ತಕಗಳನ್ನು ಬರೆದಿದ್ದರು. ಅಲ್ಲದೆ ಸುಬ್ಬಯ್ಯ ಅವರ ಬಗ್ಗೆ ಸಂಪಾದಿಸಿದ ಆರು ಪುಸ್ತಕಗಳನ್ನು ಹೊರತಂದಿದ್ದರು. ಮನು ನಡೆಸುತ್ತಿದ್ದ ಪತ್ರಿಕೆಗೆ ಸುಬ್ಬಯ್ಯನವರು ಸುಮಾರು 150 ವಾರಗಳ ಕಾಲ ಲೇಖನ ಬರೆದಿದ್ದರು” ಎಂದು ನೆನೆದಿದ್ದಾರೆ.

ಎಸ್‌ಡಿಪಿಐ ಕೊಡಗು ಘಟಕ ಸಂತಾಪ ಸೂಚಿಸಿದ್ದು, “ಪ್ರಸ್ತುತ ಕಾಲದಲ್ಲಿ ಹೆಚ್ಚಿನ ಪತ್ರಕರ್ತರು ಫ್ಯಾಸಿಸ್ಟರ ಎಂಜಲು ಕಾಸಿನ ಆಸೆಗೋಸ್ಕರ ಪತ್ರಿಕಾ ಧರ್ಮವನ್ನು ಮೆರೆತು ವರದಿ ಮಾಡುತ್ತಿರುವ ಸಂದರ್ಭದಲ್ಲಿ ಬಿ.ಎನ್.ಮನು ಶೆಣೈ ಯವರು ಯಾವುದೇ ಆಸೆ ಆಮಿಷಗಳಿಗೆ ಬಲಿ ಬೀಳದೆ ತನ್ನ ಬರಹದ ಮೂಲಕ ಫ್ಯಾಸಿಸಂಅನ್ನು ಕಟು ಶಬ್ದದ ಮೂಲಕ ವಿರೋಧಿಸುತ್ತಿದ್ದರು. ಇವರ ನಿಧನವು ಸಮಾಜಕ್ಕೆ ಮತ್ತು ಫ್ಯಾಸಿಸ್ಟ್ ವಿರೋಧಿ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದೆ.

“ಜೀವಪರ ದನಿ, ಪತ್ರಕರ್ತ ಮನು ಶೆಣೈ ಇನ್ನಿಲ್ಲ ಎಂಬ ಸುದ್ದಿ ಕೇಳಿದೆ. ನಿಜಕ್ಕೂ ನೋವಿನ ಸಂಗತಿ” ಎಂದು ಪತ್ರಕರ್ತ ಶಶಿಧರ್‌ ಹೆಮ್ಮಾಡಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...