Homeಕರ್ನಾಟಕಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಅಸಂವಿಧಾನಿಕ ನಡೆಗೆ ಆಕ್ರೋಶ ವ್ಯಕ್ತಪವಾಗಿದೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರೇ, ಶಾಲೆಗಳಲ್ಲಿ ಹಿಜಾಬ್‌ ನಿರ್ಬಂಧ ವಿಧಿಸಿರುವ ನಿಮ್ಮ ಸರ್ಕಾರ, ಬಜರಂಗದಳಕ್ಕೆ ಒಂದು ವಾರ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಪೊನ್ನಂಪೇಟೆಯ ಸಾಯಿ ಶಂಕರ ಶಿಕ್ಷಣ ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಂಡಿದೆ” ಎಂದು ಅಫ್ಸರ್‌ ಪ್ರಶ್ನಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗಿವೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ವರದಿಯಾಗಿದೆ.

ಇದನ್ನೂ ಓದಿರಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ…

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಯೋಗ ಕಲಿಸಿ, ಆತ್ಮಸ್ಥೈರ್ಯ ತುಂಬಿದ್ದೇವೆ” ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳು ಬೇರೆಯೇ ಕಥೆಯನ್ನು ಹೇಳುತ್ತಿವೆ. ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...