Homeಕರ್ನಾಟಕಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಅಸಂವಿಧಾನಿಕ ನಡೆಗೆ ಆಕ್ರೋಶ ವ್ಯಕ್ತಪವಾಗಿದೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರೇ, ಶಾಲೆಗಳಲ್ಲಿ ಹಿಜಾಬ್‌ ನಿರ್ಬಂಧ ವಿಧಿಸಿರುವ ನಿಮ್ಮ ಸರ್ಕಾರ, ಬಜರಂಗದಳಕ್ಕೆ ಒಂದು ವಾರ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಪೊನ್ನಂಪೇಟೆಯ ಸಾಯಿ ಶಂಕರ ಶಿಕ್ಷಣ ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಂಡಿದೆ” ಎಂದು ಅಫ್ಸರ್‌ ಪ್ರಶ್ನಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗಿವೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ವರದಿಯಾಗಿದೆ.

ಇದನ್ನೂ ಓದಿರಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ…

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಯೋಗ ಕಲಿಸಿ, ಆತ್ಮಸ್ಥೈರ್ಯ ತುಂಬಿದ್ದೇವೆ” ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳು ಬೇರೆಯೇ ಕಥೆಯನ್ನು ಹೇಳುತ್ತಿವೆ. ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...