Homeಕರ್ನಾಟಕಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಅಸಂವಿಧಾನಿಕ ನಡೆಗೆ ಆಕ್ರೋಶ ವ್ಯಕ್ತಪವಾಗಿದೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರೇ, ಶಾಲೆಗಳಲ್ಲಿ ಹಿಜಾಬ್‌ ನಿರ್ಬಂಧ ವಿಧಿಸಿರುವ ನಿಮ್ಮ ಸರ್ಕಾರ, ಬಜರಂಗದಳಕ್ಕೆ ಒಂದು ವಾರ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಪೊನ್ನಂಪೇಟೆಯ ಸಾಯಿ ಶಂಕರ ಶಿಕ್ಷಣ ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಂಡಿದೆ” ಎಂದು ಅಫ್ಸರ್‌ ಪ್ರಶ್ನಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗಿವೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ವರದಿಯಾಗಿದೆ.

ಇದನ್ನೂ ಓದಿರಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ…

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಯೋಗ ಕಲಿಸಿ, ಆತ್ಮಸ್ಥೈರ್ಯ ತುಂಬಿದ್ದೇವೆ” ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳು ಬೇರೆಯೇ ಕಥೆಯನ್ನು ಹೇಳುತ್ತಿವೆ. ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...