Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...