Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...