Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...