Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...