Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...