Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...