Homeಕರ್ನಾಟಕಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ...

ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ದ ಕೇಳಿ ಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ, ಮೈಸೂರಿನ ನ್ಯಾಯಾಲಯದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯ ನಂತರ ರೈತರು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೆವು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಾನೇ ಸ್ವಯಂ ಅಧ್ಯಕ್ಷ ಎಂದು ಘೋಷಿಸಿ ಗುಂಪು ಕಟ್ಟಿಕೊಂಡು ರೈತ ಚಳವಳಿಯ ಹೆಸರಿನಲ್ಲಿ ದಂಧೆಕೋರತನ ಮಾಡಿದ್ದಾರೆ. ಬಹಳಷ್ಟು ಅನುಮಾನಗಳು, ಚರ್ಚೆಗಳು ಈ ಬಗ್ಗೆ ನಡೆಯುತ್ತಿತ್ತು. ಆದರೆ ಖಾಸಗಿ ಚಾನೆಲ್ ಅದನ್ನು ಸ್ಟಿಂಗ್‌ ಆಪರೇಷನ್‌ ಮಾಡುವ ಮೂಲಕ ಅದನ್ನು ಬಯಲಿಗೆಳೆದಿದೆ. ಜೊತೆಗೆ ಆತನ ಒಟ್ಟು ಕಪಟತನವನ್ನು, ನಕಲಿತನವನ್ನು, ಸಂಘಟನಾ ದ್ರೋಹವನ್ನು ಬಯಲಿಗೆಳೆದಿದೆ” ಎಂದು ನಾಗೇಂದ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಭ್ರಷ್ಟಾಚಾರಿಗಳಾಗುವುದು ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಹೋರಾಟಗಾರರು ಕೂಡಾ ಭ್ರಷ್ಟಾಚಾರಿಗಳಾಗುತ್ತಾರೆ. ಆದರೆ ಹೋರಾಟಗಾರರು ಹೋರಾಟದ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿದರೆ ಅದು ತುಂಬಾ ಅಪಾಯ. ಒಬ್ಬ ರೈತ ಚಳವಳಿಯ ಪ್ರಮುಖ ಕಾರ್ಯಕರ್ತನಾಗಿ ಇದನ್ನು ತೀವ್ರವಾಗಿ ಖಂಡಿಸುತ್ತೇನೆ, ಇದನ್ನು ರೈತ ಸಮೂಹ ಎಂದೆದಿಗೂ ಸಹಿಸಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೋರಾಟಗಾರರಲ್ಲಿ, ಹೋರಾಟಗಾರರು ಮತ್ತು ಮಾರಾಟಗಾರರು ಎಂಬ ಎರಡು ತರದ ಜನರಿರುತ್ತಾರೆ. ಮಾರಾಟಗಾರ ವ್ಯಕ್ತಿಯೆಂದರೆ ಚಂದ್ರಶೇಖರ್‌ ತರದವರು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ವಾಪಾಸು ತೆಗೆಯುತ್ತೇನೆ ಎನ್ನುವ ಆತನಿಗೆ ಅಷ್ಟು ಶಕ್ತಿಯಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಕವಿತಾ ಕುರಗಂಟಿ ಎಂಬ ಪ್ರಾಮಾಣಿಕ ರೈತ ಹೋರಾಟಗಾರ್ತಿ, ಯದುವೀರ್‌, ರಾಕೇಶ್‌ ಟಿಕಾಯತ್‌ ಹೆಸರನ್ನು ತಂದಿದ್ದಾರೆ. ಇವರಿಗೆ ಇಂಗ್ಲಿಷ್‌, ಹಿಂದಿ ಭಾಷೆನೇ ಗೊತ್ತಿಲ್ಲ. ಅವರ ಜೊತೆಗೆ ಹೇಗೆ ಸಂವಾದ ಮಾಡುತ್ತಾರೆ? ಅವರು ತನ್ನ ಸ್ವಂತ ಲಾಭಕ್ಕೋಸ್ಕರ ಯಾರಿಗೆ ಬೇಕಾದರೂ ಮಸಿ ಬಳಿಯುವ ಕೆಲಸ ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

“ಈತ ಅಕ್ರಮವಾಗಿ ಮಾಡಿಕೊಂಡಿರುವ ಆಸ್ತಿಯನ್ನು ಸರ್ಕಾರ ಮುಟ್ಟಗೋಳು ಹಾಕಬೇಕು. ಡೀಲ್‌ಗೆ ಹೋದವರ ಮೇಲೆ ಮತ್ತು ಇವರ ಮೇಲೆ ಕೇಸ್‌ ದಾಖಲಿಸಿ ಎಫ್‌ಐಆರ್‌ ದಾಖಲಿಸಬೇಕು. ಸಿಬಿಐ ಅಥವಾ ನ್ಯಾಯಾಧೀಶರ ಮೂಲಕ ಉನ್ನತ ಮಟ್ಟದ ತನಿಖೆ ನಡೆಯಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ.

ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ. ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ ಎಂದು ಅವರು ಮಾಧ್ಯಮ ಮತ್ತು ಜನತೆಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Nagendra sir..

    Thanks for opposing Kodihalli as we knew before but lack of evidence.
    U did great did keeping him away since 2011.
    Shri Putanaya and prof Nanjundswamy had invested life to raitha sangha as honest,political less,caste less ,strong identity world wide with strong foundation..
    Some leaders and politicians takes advantage of genuine organizations.
    Mr Badagalapura Nagendra is a efficient farmers president for karnataka in absence of great late shri Putanaya.
    Jai kisan

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...