Homeಕರ್ನಾಟಕಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ...

ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ದ ಕೇಳಿ ಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ, ಮೈಸೂರಿನ ನ್ಯಾಯಾಲಯದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯ ನಂತರ ರೈತರು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೆವು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಾನೇ ಸ್ವಯಂ ಅಧ್ಯಕ್ಷ ಎಂದು ಘೋಷಿಸಿ ಗುಂಪು ಕಟ್ಟಿಕೊಂಡು ರೈತ ಚಳವಳಿಯ ಹೆಸರಿನಲ್ಲಿ ದಂಧೆಕೋರತನ ಮಾಡಿದ್ದಾರೆ. ಬಹಳಷ್ಟು ಅನುಮಾನಗಳು, ಚರ್ಚೆಗಳು ಈ ಬಗ್ಗೆ ನಡೆಯುತ್ತಿತ್ತು. ಆದರೆ ಖಾಸಗಿ ಚಾನೆಲ್ ಅದನ್ನು ಸ್ಟಿಂಗ್‌ ಆಪರೇಷನ್‌ ಮಾಡುವ ಮೂಲಕ ಅದನ್ನು ಬಯಲಿಗೆಳೆದಿದೆ. ಜೊತೆಗೆ ಆತನ ಒಟ್ಟು ಕಪಟತನವನ್ನು, ನಕಲಿತನವನ್ನು, ಸಂಘಟನಾ ದ್ರೋಹವನ್ನು ಬಯಲಿಗೆಳೆದಿದೆ” ಎಂದು ನಾಗೇಂದ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಭ್ರಷ್ಟಾಚಾರಿಗಳಾಗುವುದು ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಹೋರಾಟಗಾರರು ಕೂಡಾ ಭ್ರಷ್ಟಾಚಾರಿಗಳಾಗುತ್ತಾರೆ. ಆದರೆ ಹೋರಾಟಗಾರರು ಹೋರಾಟದ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿದರೆ ಅದು ತುಂಬಾ ಅಪಾಯ. ಒಬ್ಬ ರೈತ ಚಳವಳಿಯ ಪ್ರಮುಖ ಕಾರ್ಯಕರ್ತನಾಗಿ ಇದನ್ನು ತೀವ್ರವಾಗಿ ಖಂಡಿಸುತ್ತೇನೆ, ಇದನ್ನು ರೈತ ಸಮೂಹ ಎಂದೆದಿಗೂ ಸಹಿಸಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೋರಾಟಗಾರರಲ್ಲಿ, ಹೋರಾಟಗಾರರು ಮತ್ತು ಮಾರಾಟಗಾರರು ಎಂಬ ಎರಡು ತರದ ಜನರಿರುತ್ತಾರೆ. ಮಾರಾಟಗಾರ ವ್ಯಕ್ತಿಯೆಂದರೆ ಚಂದ್ರಶೇಖರ್‌ ತರದವರು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ವಾಪಾಸು ತೆಗೆಯುತ್ತೇನೆ ಎನ್ನುವ ಆತನಿಗೆ ಅಷ್ಟು ಶಕ್ತಿಯಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಕವಿತಾ ಕುರಗಂಟಿ ಎಂಬ ಪ್ರಾಮಾಣಿಕ ರೈತ ಹೋರಾಟಗಾರ್ತಿ, ಯದುವೀರ್‌, ರಾಕೇಶ್‌ ಟಿಕಾಯತ್‌ ಹೆಸರನ್ನು ತಂದಿದ್ದಾರೆ. ಇವರಿಗೆ ಇಂಗ್ಲಿಷ್‌, ಹಿಂದಿ ಭಾಷೆನೇ ಗೊತ್ತಿಲ್ಲ. ಅವರ ಜೊತೆಗೆ ಹೇಗೆ ಸಂವಾದ ಮಾಡುತ್ತಾರೆ? ಅವರು ತನ್ನ ಸ್ವಂತ ಲಾಭಕ್ಕೋಸ್ಕರ ಯಾರಿಗೆ ಬೇಕಾದರೂ ಮಸಿ ಬಳಿಯುವ ಕೆಲಸ ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

“ಈತ ಅಕ್ರಮವಾಗಿ ಮಾಡಿಕೊಂಡಿರುವ ಆಸ್ತಿಯನ್ನು ಸರ್ಕಾರ ಮುಟ್ಟಗೋಳು ಹಾಕಬೇಕು. ಡೀಲ್‌ಗೆ ಹೋದವರ ಮೇಲೆ ಮತ್ತು ಇವರ ಮೇಲೆ ಕೇಸ್‌ ದಾಖಲಿಸಿ ಎಫ್‌ಐಆರ್‌ ದಾಖಲಿಸಬೇಕು. ಸಿಬಿಐ ಅಥವಾ ನ್ಯಾಯಾಧೀಶರ ಮೂಲಕ ಉನ್ನತ ಮಟ್ಟದ ತನಿಖೆ ನಡೆಯಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ.

ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ. ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ ಎಂದು ಅವರು ಮಾಧ್ಯಮ ಮತ್ತು ಜನತೆಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Nagendra sir..

    Thanks for opposing Kodihalli as we knew before but lack of evidence.
    U did great did keeping him away since 2011.
    Shri Putanaya and prof Nanjundswamy had invested life to raitha sangha as honest,political less,caste less ,strong identity world wide with strong foundation..
    Some leaders and politicians takes advantage of genuine organizations.
    Mr Badagalapura Nagendra is a efficient farmers president for karnataka in absence of great late shri Putanaya.
    Jai kisan

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....