Homeಕರ್ನಾಟಕಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ...

ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ದ ಕೇಳಿ ಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ, ಮೈಸೂರಿನ ನ್ಯಾಯಾಲಯದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯ ನಂತರ ರೈತರು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೆವು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಾನೇ ಸ್ವಯಂ ಅಧ್ಯಕ್ಷ ಎಂದು ಘೋಷಿಸಿ ಗುಂಪು ಕಟ್ಟಿಕೊಂಡು ರೈತ ಚಳವಳಿಯ ಹೆಸರಿನಲ್ಲಿ ದಂಧೆಕೋರತನ ಮಾಡಿದ್ದಾರೆ. ಬಹಳಷ್ಟು ಅನುಮಾನಗಳು, ಚರ್ಚೆಗಳು ಈ ಬಗ್ಗೆ ನಡೆಯುತ್ತಿತ್ತು. ಆದರೆ ಖಾಸಗಿ ಚಾನೆಲ್ ಅದನ್ನು ಸ್ಟಿಂಗ್‌ ಆಪರೇಷನ್‌ ಮಾಡುವ ಮೂಲಕ ಅದನ್ನು ಬಯಲಿಗೆಳೆದಿದೆ. ಜೊತೆಗೆ ಆತನ ಒಟ್ಟು ಕಪಟತನವನ್ನು, ನಕಲಿತನವನ್ನು, ಸಂಘಟನಾ ದ್ರೋಹವನ್ನು ಬಯಲಿಗೆಳೆದಿದೆ” ಎಂದು ನಾಗೇಂದ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಭ್ರಷ್ಟಾಚಾರಿಗಳಾಗುವುದು ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಹೋರಾಟಗಾರರು ಕೂಡಾ ಭ್ರಷ್ಟಾಚಾರಿಗಳಾಗುತ್ತಾರೆ. ಆದರೆ ಹೋರಾಟಗಾರರು ಹೋರಾಟದ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿದರೆ ಅದು ತುಂಬಾ ಅಪಾಯ. ಒಬ್ಬ ರೈತ ಚಳವಳಿಯ ಪ್ರಮುಖ ಕಾರ್ಯಕರ್ತನಾಗಿ ಇದನ್ನು ತೀವ್ರವಾಗಿ ಖಂಡಿಸುತ್ತೇನೆ, ಇದನ್ನು ರೈತ ಸಮೂಹ ಎಂದೆದಿಗೂ ಸಹಿಸಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೋರಾಟಗಾರರಲ್ಲಿ, ಹೋರಾಟಗಾರರು ಮತ್ತು ಮಾರಾಟಗಾರರು ಎಂಬ ಎರಡು ತರದ ಜನರಿರುತ್ತಾರೆ. ಮಾರಾಟಗಾರ ವ್ಯಕ್ತಿಯೆಂದರೆ ಚಂದ್ರಶೇಖರ್‌ ತರದವರು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ವಾಪಾಸು ತೆಗೆಯುತ್ತೇನೆ ಎನ್ನುವ ಆತನಿಗೆ ಅಷ್ಟು ಶಕ್ತಿಯಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಕವಿತಾ ಕುರಗಂಟಿ ಎಂಬ ಪ್ರಾಮಾಣಿಕ ರೈತ ಹೋರಾಟಗಾರ್ತಿ, ಯದುವೀರ್‌, ರಾಕೇಶ್‌ ಟಿಕಾಯತ್‌ ಹೆಸರನ್ನು ತಂದಿದ್ದಾರೆ. ಇವರಿಗೆ ಇಂಗ್ಲಿಷ್‌, ಹಿಂದಿ ಭಾಷೆನೇ ಗೊತ್ತಿಲ್ಲ. ಅವರ ಜೊತೆಗೆ ಹೇಗೆ ಸಂವಾದ ಮಾಡುತ್ತಾರೆ? ಅವರು ತನ್ನ ಸ್ವಂತ ಲಾಭಕ್ಕೋಸ್ಕರ ಯಾರಿಗೆ ಬೇಕಾದರೂ ಮಸಿ ಬಳಿಯುವ ಕೆಲಸ ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

“ಈತ ಅಕ್ರಮವಾಗಿ ಮಾಡಿಕೊಂಡಿರುವ ಆಸ್ತಿಯನ್ನು ಸರ್ಕಾರ ಮುಟ್ಟಗೋಳು ಹಾಕಬೇಕು. ಡೀಲ್‌ಗೆ ಹೋದವರ ಮೇಲೆ ಮತ್ತು ಇವರ ಮೇಲೆ ಕೇಸ್‌ ದಾಖಲಿಸಿ ಎಫ್‌ಐಆರ್‌ ದಾಖಲಿಸಬೇಕು. ಸಿಬಿಐ ಅಥವಾ ನ್ಯಾಯಾಧೀಶರ ಮೂಲಕ ಉನ್ನತ ಮಟ್ಟದ ತನಿಖೆ ನಡೆಯಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ.

ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ. ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ ಎಂದು ಅವರು ಮಾಧ್ಯಮ ಮತ್ತು ಜನತೆಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Nagendra sir..

    Thanks for opposing Kodihalli as we knew before but lack of evidence.
    U did great did keeping him away since 2011.
    Shri Putanaya and prof Nanjundswamy had invested life to raitha sangha as honest,political less,caste less ,strong identity world wide with strong foundation..
    Some leaders and politicians takes advantage of genuine organizations.
    Mr Badagalapura Nagendra is a efficient farmers president for karnataka in absence of great late shri Putanaya.
    Jai kisan

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...