Homeಕರ್ನಾಟಕಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ...

ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ದ ಕೇಳಿ ಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ, ಮೈಸೂರಿನ ನ್ಯಾಯಾಲಯದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯ ನಂತರ ರೈತರು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೆವು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಾನೇ ಸ್ವಯಂ ಅಧ್ಯಕ್ಷ ಎಂದು ಘೋಷಿಸಿ ಗುಂಪು ಕಟ್ಟಿಕೊಂಡು ರೈತ ಚಳವಳಿಯ ಹೆಸರಿನಲ್ಲಿ ದಂಧೆಕೋರತನ ಮಾಡಿದ್ದಾರೆ. ಬಹಳಷ್ಟು ಅನುಮಾನಗಳು, ಚರ್ಚೆಗಳು ಈ ಬಗ್ಗೆ ನಡೆಯುತ್ತಿತ್ತು. ಆದರೆ ಖಾಸಗಿ ಚಾನೆಲ್ ಅದನ್ನು ಸ್ಟಿಂಗ್‌ ಆಪರೇಷನ್‌ ಮಾಡುವ ಮೂಲಕ ಅದನ್ನು ಬಯಲಿಗೆಳೆದಿದೆ. ಜೊತೆಗೆ ಆತನ ಒಟ್ಟು ಕಪಟತನವನ್ನು, ನಕಲಿತನವನ್ನು, ಸಂಘಟನಾ ದ್ರೋಹವನ್ನು ಬಯಲಿಗೆಳೆದಿದೆ” ಎಂದು ನಾಗೇಂದ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಭ್ರಷ್ಟಾಚಾರಿಗಳಾಗುವುದು ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಹೋರಾಟಗಾರರು ಕೂಡಾ ಭ್ರಷ್ಟಾಚಾರಿಗಳಾಗುತ್ತಾರೆ. ಆದರೆ ಹೋರಾಟಗಾರರು ಹೋರಾಟದ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿದರೆ ಅದು ತುಂಬಾ ಅಪಾಯ. ಒಬ್ಬ ರೈತ ಚಳವಳಿಯ ಪ್ರಮುಖ ಕಾರ್ಯಕರ್ತನಾಗಿ ಇದನ್ನು ತೀವ್ರವಾಗಿ ಖಂಡಿಸುತ್ತೇನೆ, ಇದನ್ನು ರೈತ ಸಮೂಹ ಎಂದೆದಿಗೂ ಸಹಿಸಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೋರಾಟಗಾರರಲ್ಲಿ, ಹೋರಾಟಗಾರರು ಮತ್ತು ಮಾರಾಟಗಾರರು ಎಂಬ ಎರಡು ತರದ ಜನರಿರುತ್ತಾರೆ. ಮಾರಾಟಗಾರ ವ್ಯಕ್ತಿಯೆಂದರೆ ಚಂದ್ರಶೇಖರ್‌ ತರದವರು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ವಾಪಾಸು ತೆಗೆಯುತ್ತೇನೆ ಎನ್ನುವ ಆತನಿಗೆ ಅಷ್ಟು ಶಕ್ತಿಯಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಕವಿತಾ ಕುರಗಂಟಿ ಎಂಬ ಪ್ರಾಮಾಣಿಕ ರೈತ ಹೋರಾಟಗಾರ್ತಿ, ಯದುವೀರ್‌, ರಾಕೇಶ್‌ ಟಿಕಾಯತ್‌ ಹೆಸರನ್ನು ತಂದಿದ್ದಾರೆ. ಇವರಿಗೆ ಇಂಗ್ಲಿಷ್‌, ಹಿಂದಿ ಭಾಷೆನೇ ಗೊತ್ತಿಲ್ಲ. ಅವರ ಜೊತೆಗೆ ಹೇಗೆ ಸಂವಾದ ಮಾಡುತ್ತಾರೆ? ಅವರು ತನ್ನ ಸ್ವಂತ ಲಾಭಕ್ಕೋಸ್ಕರ ಯಾರಿಗೆ ಬೇಕಾದರೂ ಮಸಿ ಬಳಿಯುವ ಕೆಲಸ ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

“ಈತ ಅಕ್ರಮವಾಗಿ ಮಾಡಿಕೊಂಡಿರುವ ಆಸ್ತಿಯನ್ನು ಸರ್ಕಾರ ಮುಟ್ಟಗೋಳು ಹಾಕಬೇಕು. ಡೀಲ್‌ಗೆ ಹೋದವರ ಮೇಲೆ ಮತ್ತು ಇವರ ಮೇಲೆ ಕೇಸ್‌ ದಾಖಲಿಸಿ ಎಫ್‌ಐಆರ್‌ ದಾಖಲಿಸಬೇಕು. ಸಿಬಿಐ ಅಥವಾ ನ್ಯಾಯಾಧೀಶರ ಮೂಲಕ ಉನ್ನತ ಮಟ್ಟದ ತನಿಖೆ ನಡೆಯಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ.

ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ. ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ ಎಂದು ಅವರು ಮಾಧ್ಯಮ ಮತ್ತು ಜನತೆಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Nagendra sir..

    Thanks for opposing Kodihalli as we knew before but lack of evidence.
    U did great did keeping him away since 2011.
    Shri Putanaya and prof Nanjundswamy had invested life to raitha sangha as honest,political less,caste less ,strong identity world wide with strong foundation..
    Some leaders and politicians takes advantage of genuine organizations.
    Mr Badagalapura Nagendra is a efficient farmers president for karnataka in absence of great late shri Putanaya.
    Jai kisan

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...