Homeಕರ್ನಾಟಕಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ...

ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ದ ಕೇಳಿ ಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ, ಮೈಸೂರಿನ ನ್ಯಾಯಾಲಯದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯ ನಂತರ ರೈತರು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೆವು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಾನೇ ಸ್ವಯಂ ಅಧ್ಯಕ್ಷ ಎಂದು ಘೋಷಿಸಿ ಗುಂಪು ಕಟ್ಟಿಕೊಂಡು ರೈತ ಚಳವಳಿಯ ಹೆಸರಿನಲ್ಲಿ ದಂಧೆಕೋರತನ ಮಾಡಿದ್ದಾರೆ. ಬಹಳಷ್ಟು ಅನುಮಾನಗಳು, ಚರ್ಚೆಗಳು ಈ ಬಗ್ಗೆ ನಡೆಯುತ್ತಿತ್ತು. ಆದರೆ ಖಾಸಗಿ ಚಾನೆಲ್ ಅದನ್ನು ಸ್ಟಿಂಗ್‌ ಆಪರೇಷನ್‌ ಮಾಡುವ ಮೂಲಕ ಅದನ್ನು ಬಯಲಿಗೆಳೆದಿದೆ. ಜೊತೆಗೆ ಆತನ ಒಟ್ಟು ಕಪಟತನವನ್ನು, ನಕಲಿತನವನ್ನು, ಸಂಘಟನಾ ದ್ರೋಹವನ್ನು ಬಯಲಿಗೆಳೆದಿದೆ” ಎಂದು ನಾಗೇಂದ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಭ್ರಷ್ಟಾಚಾರಿಗಳಾಗುವುದು ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಹೋರಾಟಗಾರರು ಕೂಡಾ ಭ್ರಷ್ಟಾಚಾರಿಗಳಾಗುತ್ತಾರೆ. ಆದರೆ ಹೋರಾಟಗಾರರು ಹೋರಾಟದ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿದರೆ ಅದು ತುಂಬಾ ಅಪಾಯ. ಒಬ್ಬ ರೈತ ಚಳವಳಿಯ ಪ್ರಮುಖ ಕಾರ್ಯಕರ್ತನಾಗಿ ಇದನ್ನು ತೀವ್ರವಾಗಿ ಖಂಡಿಸುತ್ತೇನೆ, ಇದನ್ನು ರೈತ ಸಮೂಹ ಎಂದೆದಿಗೂ ಸಹಿಸಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೋರಾಟಗಾರರಲ್ಲಿ, ಹೋರಾಟಗಾರರು ಮತ್ತು ಮಾರಾಟಗಾರರು ಎಂಬ ಎರಡು ತರದ ಜನರಿರುತ್ತಾರೆ. ಮಾರಾಟಗಾರ ವ್ಯಕ್ತಿಯೆಂದರೆ ಚಂದ್ರಶೇಖರ್‌ ತರದವರು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ವಾಪಾಸು ತೆಗೆಯುತ್ತೇನೆ ಎನ್ನುವ ಆತನಿಗೆ ಅಷ್ಟು ಶಕ್ತಿಯಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಕವಿತಾ ಕುರಗಂಟಿ ಎಂಬ ಪ್ರಾಮಾಣಿಕ ರೈತ ಹೋರಾಟಗಾರ್ತಿ, ಯದುವೀರ್‌, ರಾಕೇಶ್‌ ಟಿಕಾಯತ್‌ ಹೆಸರನ್ನು ತಂದಿದ್ದಾರೆ. ಇವರಿಗೆ ಇಂಗ್ಲಿಷ್‌, ಹಿಂದಿ ಭಾಷೆನೇ ಗೊತ್ತಿಲ್ಲ. ಅವರ ಜೊತೆಗೆ ಹೇಗೆ ಸಂವಾದ ಮಾಡುತ್ತಾರೆ? ಅವರು ತನ್ನ ಸ್ವಂತ ಲಾಭಕ್ಕೋಸ್ಕರ ಯಾರಿಗೆ ಬೇಕಾದರೂ ಮಸಿ ಬಳಿಯುವ ಕೆಲಸ ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

“ಈತ ಅಕ್ರಮವಾಗಿ ಮಾಡಿಕೊಂಡಿರುವ ಆಸ್ತಿಯನ್ನು ಸರ್ಕಾರ ಮುಟ್ಟಗೋಳು ಹಾಕಬೇಕು. ಡೀಲ್‌ಗೆ ಹೋದವರ ಮೇಲೆ ಮತ್ತು ಇವರ ಮೇಲೆ ಕೇಸ್‌ ದಾಖಲಿಸಿ ಎಫ್‌ಐಆರ್‌ ದಾಖಲಿಸಬೇಕು. ಸಿಬಿಐ ಅಥವಾ ನ್ಯಾಯಾಧೀಶರ ಮೂಲಕ ಉನ್ನತ ಮಟ್ಟದ ತನಿಖೆ ನಡೆಯಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ.

ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ. ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ ಎಂದು ಅವರು ಮಾಧ್ಯಮ ಮತ್ತು ಜನತೆಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Nagendra sir..

    Thanks for opposing Kodihalli as we knew before but lack of evidence.
    U did great did keeping him away since 2011.
    Shri Putanaya and prof Nanjundswamy had invested life to raitha sangha as honest,political less,caste less ,strong identity world wide with strong foundation..
    Some leaders and politicians takes advantage of genuine organizations.
    Mr Badagalapura Nagendra is a efficient farmers president for karnataka in absence of great late shri Putanaya.
    Jai kisan

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...