Homeಕರ್ನಾಟಕಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಕೋಗಿಲು ಬಡಾವಣೆ ನಿವಾಸಿಗಳಾದ ಝೈಬಾ ತಬಸ್ಸುಮ್, ರೆಹನಾ ಮತ್ತು ಆರೀಫ್ ಬೇಗಂ ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರ, ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಪೊಲೀಸ್​ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲ್ಲೂಕು ತಹಸೀಲ್ದಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಮನೆಗಳನ್ನು ಕೆಡವುದಕ್ಕೂ ಮುನ್ನ ನೋಟಿಸ್ ನೀಡಿಲ್ಲ. ನಮ್ಮ ಅಹವಾಲು ಆಲಿಸಿಲ್ಲ. ನಿರಾಶ್ರಿತರಾದ ಬಹುತೇಕರು ತಮ್ಮ ಮನೆಗಳಿಗೆ ಸಂಬಂಧಿಸಿದಂತೆ ದಾಖಲೆ ಇಟ್ಟುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸರ್ಕಾರದ ಅಧಿಕಾರಿಗಳು ಸುಪ್ರೀಂ ಕೋರ್ಟ್​ನ ನಿರ್ದೇಶನಗಳನ್ನು ಉಲ್ಲಂಘಿಸಿ ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಇದರಿಂದ ನೂರಾರು ಬಡ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕಗಳು ಮತ್ತು ಹಾಲ್​ ಟಿಕೆಟ್​ಗಳು ನಾಶವಾಗಿದ್ದು, ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಫಕೀರ್​ ಮತ್ತು ವಾಸಿಂ ಕಾಲೊನಿಯ ಎಲ್ಲಾ ನಿರಾಶ್ರಿತರಿಗೆ ಅಲ್ಲಿಂದ 5 ಕಿಲೋ ಮೀಟರ್​ ವ್ಯಾಪ್ತಿಯಲ್ಲಿ ಪುನರ್ವಸತಿ ಅಥವಾ ಪರ್ಯಾಯ ವಸತಿ ಒದಗಿಸಬೇಕು. ಅದಕ್ಕಾಗಿ ಸಮೀಕ್ಷೆ ನಡೆಸಬೇಕು. ಹಲವು ವರ್ಷಗಳ ಕಾಲ ಶ್ರಮಿಸಿ ನಿರ್ಮಿಸಿರುವ ಮನೆಗಳನ್ನು ಕೆಡವಿರುವುದರಿಂದ ಪರಿಹಾರ ಒದಗಿಸಬೇಕು. ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸುಪ್ರೀಂ ಕೋರ್ಟ್​ ಮಾರ್ಗಸೂಚಿ ಉಲ್ಲಂಘಿಸಿ, ಮನೆ ಕೆಡವಿರುವ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, ನಷ್ಟ ಮತ್ತು ಹಾನಿಗೆ ಅವರನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಬೇಕು. ಸಂತ್ರಸ್ತರಾಗಿರುವ ಅಂಗವಿಕಲರು, ಮಹಿಳೆಯರು ಮತ್ತು ವೃದ್ಧರಿಗೆ ಶುದ್ದ ಕುಡಿಯುವ ನೀರು ಮತ್ತು ಪೌಷ್ಠಿಕ ಆಹಾರ ತಕ್ಷಣದಿಂದಲೇ ಪೂರೈಸಬೇಕು. ಪುರುಷರು ಮತ್ತು ಮಹಿಳೆಯರಿಗೆ ತಾತ್ಕಾಲಿಕವಾಗಿ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ನ್ಯಾಪ್ಕಿನ್​ ಸೇರಿದಂತೆ ಅಗತ್ಯ ನೈರ್ಮಲ್ಯ ಸಾಮಗ್ರಿಗಳನ್ನು ಒದಗಿಸಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಭದ್ರತೆ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಮನೆ ಕಳೆದು ಬೀದಿ ಪಾಲಾಗಿರುವವರಿಗೆ ಸಾಂಕ್ರಾಮಿಕ ರೋಗ ತಗುಲುವ ಸಾಧ್ಯತೆಯಿದ್ದು, ಸ್ಥಳದಲ್ಲಿ ತಾತ್ಕಾಲಿಕ ವೈದ್ಯಕೀಯ ಶಿಬಿರ ಪ್ರಾರಂಭಿಸಿ ತಕ್ಷಣ ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು. ತೆರವು ಕಾರ್ಯಚರಣೆ ವೇಳೆ ಮೂಲ ಹಾಲ್​ ಟಿಕೆಟ್​ ನಾಶವಾಗಿದ್ದು, ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಗದಂತಹ ವಿದ್ಯಾರ್ಥಿಗಳಿಗೆ ನಕಲು ಹಾಲ್ ಟಿಕೆಟ್​ ಪ್ರತಿ ಕಲ್ಪಿಸಿ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಬೇಕು. ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶೈಕ್ಷಣಿಕ ಸಾಮಗ್ರಿ (ಪುಸ್ತಕ, ನೋಟ್​ ಬುಕ್​, ಅಧ್ಯಯನ ಸಾಮಗ್ರಿ ಮತ್ತು ಸಮವಸ್ತ್ರ) ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...