Homeಸಿನಿಮಾಕ್ರೀಡೆಆರ್‌ಸಿಬಿ ನಾಯಕನಾಗಿ ಮುಂದುವರಿಯಲು ಕೊಹ್ಲಿಗೆ ಅರ್ಹತೆಯಿಲ್ಲ: ಗೌತಮ್ ಗಂಭೀರ್!

ಆರ್‌ಸಿಬಿ ನಾಯಕನಾಗಿ ಮುಂದುವರಿಯಲು ಕೊಹ್ಲಿಗೆ ಅರ್ಹತೆಯಿಲ್ಲ: ಗೌತಮ್ ಗಂಭೀರ್!

ವಿಶ್ವ ದಾಖಲೆ ಮಾಡಿರುವ ಮತ್ತು ನೇರ ಮಾತುಗಾರರಾದ ಎಂ.ಎಸ್.ಧೋನಿ ಮತ್ತು ರೋಹಿತ್‌ ಶರ್ಮಾ ಅವರೊಂದಿಗೆ ಒಬ್ಬ ನಾಯಕನಾಗಿ ವಿರಾಟ್‌ ಕೊಹ್ಲಿಯನ್ನು ಹೋಲಿಸಲು ಸಾಧ್ಯವಿಲ್ಲ

- Advertisement -
- Advertisement -

ಈ ಐಪಿಎಲ್ ಪಂದ್ಯದಲ್ಲಿ ಉತ್ತಮ ಸಾಧನೆ ತೋರದ ಕಾರಣಕ್ಕೆ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಈ ಬಾರಿಯ ಐಪಿಎಲ್ ಪ್ಲೇ ಆಫ್‌ನಿಂದ ಹೊರಗುಳಿದಿದೆ.

“ವಿಶ್ವ ದಾಖಲೆ ಮಾಡಿರುವ ಮತ್ತು ನೇರ ಮಾತುಗಾರರಾದ ಎಂ.ಎಸ್.ಧೋನಿ ಮತ್ತು ರೋಹಿತ್‌ ಶರ್ಮಾ ಅವರೊಂದಿಗೆ ಒಬ್ಬ ನಾಯಕನಾಗಿ ವಿರಾಟ್‌ ಕೊಹ್ಲಿಯನ್ನು ಹೋಲಿಸಲು ಸಾಧ್ಯವಿಲ್ಲ. ನೂರಕ್ಕೆ ನೂರರಷ್ಟು ಅವರನ್ನು ಆರ್‌ಸಿಬಿ ನಾಯಕತ್ವದಿಂದ ತೆಗೆದುಹಾಕಬೇಕು. ಏಕೆಂದರೆ ಇದು ಹೊಣೆಗಾರಿಕೆಯ ಸಮಸ್ಯೆಯಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!

“ಟ್ರೋಫಿ ಗೆಲ್ಲದೇ ಪಂದ್ಯಾವಳಿಯಲ್ಲಿ 8 ವರ್ಷಗಳಿಂದ ಇದ್ದಾರೆ. 8 ವರ್ಷಗಳು ನಿಜಕ್ಕೂ ಹೆಚ್ಚಿನ ಸಮಯ. ಕ್ಯಾಪ್ಟನ್‌ಶಿಪ್‌ ಬಗ್ಗೆ ಮರೆತುಬಿಡಿ, 8 ವರ್ಷಗಳಿಂದ ಟ್ರೋಫಿ ಗೆಲ್ಲದೇ ಇನ್ನೂ ನಾಯಕನಾಗಿ ಮುಂದುವರಿಯುತ್ತಿರುವ ಯಾವುದೇ ಬೇರೆ ಆಟಗಾರನನ್ನು ತೋರಿಸಿ. ಹಾಗಾಗಿ ಇದು ಹೊಣೆಗಾರಿಕೆಯಾಗಿರಬೇಕು” ಎಂದು 2012 ಮತ್ತು 2014 ರಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಮುನ್ನಡೆಸಿ 2 ಬಾರಿ ಐಪಿಎಲ್‌ ಪ್ರಶಸ್ತಿ ಗೆದ್ದಿದ್ದ ಗೌತಮ್ ಗಂಭಿರ್ ‘ಟೈಮ್‌ ಔಟ್‘ ಕಾರ್ಯಕ್ರಮದಲ್ಲಿ ಹೇಳಿದರು.

ಗೌತಮ್ ಗಂಭೀರ್ ಹಲವಾರು ವರ್ಷಗಳಿಂದ ಕೊಹ್ಲಿಯ ಐಪಿಎಲ್ ನಾಯಕತ್ವವನ್ನು ತೀವ್ರವಾಗಿ ಟೀಕಿಸುತ್ತಿದ್ದರು. ಆದರೆ ವೈಯಕ್ತಿಕವಾಗಿ ಅವರಿಗೂ-ತಮಗೂ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್…

“ನಾವು ಎಂಎಸ್ ಧೋನಿ ಬಗ್ಗೆ ಮಾತನಾಡುತ್ತೇವೆ, ರೋಹಿತ್ ಶರ್ಮಾ ಬಗ್ಗೆ ಮಾತನಾಡುತ್ತೇವೆ, ವಿರಾಟ್ ಕೊಹ್ಲಿ ಬಗ್ಗೆಯೂ ಮಾತನಾಡುತ್ತೇವೆ. ಇಲ್ಲಿನ ವಿಷಯ ಅದಲ್ಲ. ಧೋನಿ ಮೂರು ಬಾರಿ ಟ್ರೋಫಿ ಗೆದ್ದಿದ್ದಾರೆ. ರೋಹಿತ್ ಶರ್ಮಾ ನಾಲ್ಕು ಬಾರಿ ಗೆದ್ದಿದ್ದಾರೆ. ಈ ಕಾರಣಕ್ಕಾಗಿ ಅವರು ದೀರ್ಘಾವಧಿಯ ನಾಯಕತ್ವ ವಹಿಸಿದ್ದಾರೆ. ಎಂಟು ವರ್ಷಗಳವರೆಗೆ ಈ ಸಾದನೆ ಮಾಡದಿದ್ದರೆ ಅವರನ್ನೂ ನಾಯಕತ್ವದ ಸ್ಥಾನದಿಂದ ತೆಗೆದುಹಾಕಲಾಗುತ್ತಿತ್ತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಾರಿಯ ಐಪಿಎಲ್‌ ಪಂದ್ಯದಲ್ಲಿ ಕೊಹ್ಲಿ ಉತ್ತಮ ಸಾಧನೆಯನ್ನು ತೋರಿಲ್ಲವಾದ್ದರಿಂದ ಹಲವು ಟೀಕೆಗಳನ್ನು ಎದುರಿಸುತ್ತಿದ್ದಾರೆ.


ಇದನ್ನೂ ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...