Homeಕರ್ನಾಟಕಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

ಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

- Advertisement -
- Advertisement -

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಸಚಿವ ಕೆ.ಎಚ್. ಮುನಿಯಪ್ಪ ಕುಟುಂಬಕ್ಕೆ ಕೊಡಬಾರದು ಎಂದು ಜಿಲ್ಲೆಯ ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಹಾಗೂ ಮುಖಂಡರು ಪಟ್ಟು ಹಿಡಿದಿದ್ದಾರೆ.

ಒಂದು ವೇಳೆ ಮುನಿಯಪ್ಪ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ನಾವೆಲ್ಲರೂ ರಾಜೀನಾಮೆ ನೀಡುತ್ತೇವೆ ಎಂದು ಬ್ಲಾಕ್‌ಮೇಲ್ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಒಳಜಗಳವನ್ನು ಟೀಕಿಸುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ, ಕೋಲಾರದ ಕಾಂಗ್ರೆಸ್‌ ಮುಖಂಡರ ಬಹಿರಂಗ ಜಗಳ ದೊಡ್ಡ ಹೊಡೆತವಾಗಿದೆ. ಪಕ್ಷದ ಐವರು ಶಾಸಕರು (ವಿಧಾನಸಭೆ ಸದಸ್ಯರು) ಮತ್ತು ಇಬ್ಬರು ಎಂಎಲ್‌ಸಿಗಳು (ವಿಧಾನ ಪರಿಷತ್ ಸದಸ್ಯರು) ತಾವು ಸೂಚಿಸಿದವರಿಗೆ ಟಿಕೆಟ್ ಕೈ ತಪ್ಪಿದ ಕಾರಣ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಈಗಾಗಲೇ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಕೋಲಾರ ಕ್ಷೇತ್ರದಿಂದ ಪಕ್ಷ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂಬುದು ಖಚಿತವಾಗುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್, “ನಾವು (ಮುನಿಯಪ್ಪ) ಕುಟುಂಬದ ಗುಲಾಮರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪಕ್ಷವು ಕುಟುಂಬದೊಳಗೆ ಟಿಕೆಟ್ ಹಂಚುತ್ತದೆ ಎಂದು ಶಾಸಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವುದಾಗಿ ಪಕ್ಷದ ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದಾರೆ. ಪಕ್ಷದ ಹೈಕಮಾಂಡ್ ತಮ್ಮ ಅಭಿಪ್ರಾಯಗಳನ್ನು ಆಲಿಸಿದೆ. ಆದರೆ, ತಮ್ಮ ಬೇಡಿಕೆಗಳಿಗೆ ಕಿವಿಗೊಡಲಿಲ್ಲ ಎಂದು ಆರೋಪಿಸಿದರು.

ಕೋಲಾರ ಲೋಕಸಭಾ ಚುನಾವಣಾ ಟಿಕೆಟ್​ ವಿಚಾರದಲ್ಲಿ ಕಾಂಗ್ರೆಸ್​ ನಾಯಕರ ಜಂಗೀಕುಸ್ತಿ ಚುನಾವಣೆ ಮುಕ್ತಾಯವಾದರೂ ನಿಲ್ಲುವ ಲಕ್ಷಣ ಕಾಣಿಸ್ತಿಲ್ಲ. ಸಚಿವ ಕೆ.ಹೆಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್​ ಖಚಿತವಾಗುತ್ತಿದ್ದಂತೆಯೇ ಕೋಲಾರ ಜಿಲ್ಲೆಯ ಮೂವರು ಶಾಸಕರು ಹಾಗು ಇಬ್ಬರು ಪರಿಷತ್​ ಸದಸ್ಯರು ರಾಜೀನಾಮೆ ಪ್ರಹಸನಕ್ಕೆ ಮುಂದಾಗಿದ್ದಾರೆ.

ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್​ ನಿರ್ಧಾರಕ್ಕೆ ಬಿಡೋಣ, ಹೈಕಮಾಂಡ್​ ಯಾರಿಗೆ ಟಿಕೆಟ್​​ ಕೊಡುತ್ತದೆ ಅವರ ಪರವಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಗೆಲ್ಲಿಸಿಕೊಂಡು ಬರೋಣ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ರಮೇಶ್​ ಕುಮಾರ್​ ಹಾಗು ಕೆ.ಹೆಚ್​ ಮುನಿಯಪ್ಪರನ್ನು ಮುಖಾಮುಖಿ ಕೂರಿಸಿಕೊಂಡು ನಡೆಸಿದ ಸಂಧಾನ ಸಭೆಯಲ್ಲಿ ಒಂದು ಸಾಲಿನ ಅಜೆಂಡಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದರು. ಆದರೆ, ಹೈಕಮಾಂಡ್​ ಆಯ್ಕೆ ಚಿಕ್ಕಪೆದ್ದಣ್ಣ ಅನ್ನೋದು ಖಚಿತ ಆಗುತ್ತಿದ್ದಂತೆ ರಮೇಶ್​ ಕುಮಾರ್​ ಬಣದ ನಾಯಕರು ಹೈಡ್ರಾಮಾ ಶುರು ಮಾಡಿದ್ದಾರೆ. ಕಳೆದ ವಾರ ಎರಡೂ ಬಣದ ನಾಯಕರು ದೆಹಲಿಯ ಖರ್ಗೆ ನಿವಾಸದಲ್ಲಿ ಮಾತುಕತೆ ನಡೆಸಿದ್ದರು.

ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಪರಿಷತ್​ ಸದ್ಯರಾದ ನಸೀರ್ ಅಹ್ಮದ್, ಅನಿಲ್ ಕುಮಾರ್ ಸೇರಿ ಐವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಲೂರು ಶಾಸಕ ಕೆ.ವೈ ನಂಜೇಗೌಡ, “ಇಂದು ಕೋಲಾರ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು, ಇಬ್ಬರು ಎಂಎಲ್‌ಸಿಗಳು ರಾಜಿನಾಮೆ ನೀಡುತ್ತೇವೆ” ಎಂದು ಹೇಳಿದ್ದಾರೆ. ಇಂದು ಮಧ್ಯಾಹ್ನ ಸ್ಪೀಕರ್ ಕಚೇರಿ ಹಾಗು ಸಂಜೆ ವೇಳೆಗೆ ಮಂಗಳೂರಿಗೆ ತೆರಳಿ ಸ್ಪೀಕರ್ ಖಾದರ್​ಗೆ ರಾಜೀನಾಮೆ ಪತ್ರ ನೀಡುತ್ತೇವೆ ಎಂದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ನಾಯಕರ ಕಿತ್ತಾಟದ ಬಗ್ಗೆ ಮಾತನಾಡಿರುವ ಸಚಿವ ಕೆ ಎಚ್ ಮುನಿಯಪ್ಪ, “ಇವತ್ತು ಸಾಯಂಕಾಲ ಟಿಕೆಟ್​ ಯಾರಿಗೆ ಎಂಬುದು ಖಚಿತವಾಗಲಿದೆ. ರಮೇಶ್ ಕುಮಾರ್ ಆದಿಯಾಗಿ ಎಲ್ಲರ ಜೊತೆಗೆ ಚರ್ಚೆ ಮಾಡಿದ್ದೇವೆ. ಕೊತ್ತೂರು ಮಂಜುನಾಥ್, ನಂಜೇಗೌಡ, ಅನಿಲ್ ಕುಮಾರ್ ಸೇರಿ ಎಲ್ಲರ ಜೊತೆಗೂ ಚರ್ಚೆ ಆಗಿದೆ. ನಾನು ಕೋಲಾರದಲ್ಲಿ ಏಳು ಬಾರಿ ಗೆದ್ದಿದ್ದೇನೆ, ಅನುಭವ ಇದೆ. ಅವಕಾಶ ಮಾಡಿಕೊಡಿ ಎಂದು ಎಲ್ಲರಿಗೂ ಮನವಿ ಮಾಡಿದ್ದೇನೆ.ಟಿಕೆಟ್ ಸಿಗಬಹುದು ಎಂಬ ಆಶಾಭಾವನೆ ಇದೆ” ಎಂದರು.

“ಕೋಲಾರ-ಚಿಕ್ಕಬಳ್ಳಾಪುರ ತಡವಾದರೂ ಕೂಡ ಒಗ್ಗಟ್ಟಾಗಿದ್ದೇವೆ” ಎಂದರು. ಕೆಲ ಶಾಸಕರ ರಾಜೀನಾಮೆ ನೀಡುತ್ತೇವೆ ಎಂಬ ಬೆದರಿಕೆ ವಿಚಾರದ ಬಗ್ಗೆ ಮಾತನಾಡಿ, “ಅಭ್ಯರ್ಥಿ ಯಾರಾಗಬೇಕು ಎಂಬುದು ರಮೇಶ್ ಕುಮಾರ್ ಹಾಗೂ ಸಚಿವರ ಉಪಸ್ಥಿತಿಯಲ್ಲೇ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ ಅಂದಿದ್ದೇವೆ. ಇದಕ್ಕೆ ಮುಂದಾಳತ್ವ ರಮೇಶ್ ಕುಮಾರ್” ಎಂದು ಹೇಳುವ ಮೂಲಕ ಟಿಕೆಟ್ ತಮ್ಮ​ ಕುಟುಂಬಕ್ಕೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನಿಗಾಗಿ ಚೆನ್ನೈನಾದ್ಯಂತ ತೀವ್ರ ಶೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...