Homeಕರ್ನಾಟಕಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

ಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

- Advertisement -
- Advertisement -

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಸಚಿವ ಕೆ.ಎಚ್. ಮುನಿಯಪ್ಪ ಕುಟುಂಬಕ್ಕೆ ಕೊಡಬಾರದು ಎಂದು ಜಿಲ್ಲೆಯ ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಹಾಗೂ ಮುಖಂಡರು ಪಟ್ಟು ಹಿಡಿದಿದ್ದಾರೆ.

ಒಂದು ವೇಳೆ ಮುನಿಯಪ್ಪ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ನಾವೆಲ್ಲರೂ ರಾಜೀನಾಮೆ ನೀಡುತ್ತೇವೆ ಎಂದು ಬ್ಲಾಕ್‌ಮೇಲ್ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಒಳಜಗಳವನ್ನು ಟೀಕಿಸುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ, ಕೋಲಾರದ ಕಾಂಗ್ರೆಸ್‌ ಮುಖಂಡರ ಬಹಿರಂಗ ಜಗಳ ದೊಡ್ಡ ಹೊಡೆತವಾಗಿದೆ. ಪಕ್ಷದ ಐವರು ಶಾಸಕರು (ವಿಧಾನಸಭೆ ಸದಸ್ಯರು) ಮತ್ತು ಇಬ್ಬರು ಎಂಎಲ್‌ಸಿಗಳು (ವಿಧಾನ ಪರಿಷತ್ ಸದಸ್ಯರು) ತಾವು ಸೂಚಿಸಿದವರಿಗೆ ಟಿಕೆಟ್ ಕೈ ತಪ್ಪಿದ ಕಾರಣ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಈಗಾಗಲೇ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಕೋಲಾರ ಕ್ಷೇತ್ರದಿಂದ ಪಕ್ಷ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂಬುದು ಖಚಿತವಾಗುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್, “ನಾವು (ಮುನಿಯಪ್ಪ) ಕುಟುಂಬದ ಗುಲಾಮರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪಕ್ಷವು ಕುಟುಂಬದೊಳಗೆ ಟಿಕೆಟ್ ಹಂಚುತ್ತದೆ ಎಂದು ಶಾಸಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವುದಾಗಿ ಪಕ್ಷದ ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದಾರೆ. ಪಕ್ಷದ ಹೈಕಮಾಂಡ್ ತಮ್ಮ ಅಭಿಪ್ರಾಯಗಳನ್ನು ಆಲಿಸಿದೆ. ಆದರೆ, ತಮ್ಮ ಬೇಡಿಕೆಗಳಿಗೆ ಕಿವಿಗೊಡಲಿಲ್ಲ ಎಂದು ಆರೋಪಿಸಿದರು.

ಕೋಲಾರ ಲೋಕಸಭಾ ಚುನಾವಣಾ ಟಿಕೆಟ್​ ವಿಚಾರದಲ್ಲಿ ಕಾಂಗ್ರೆಸ್​ ನಾಯಕರ ಜಂಗೀಕುಸ್ತಿ ಚುನಾವಣೆ ಮುಕ್ತಾಯವಾದರೂ ನಿಲ್ಲುವ ಲಕ್ಷಣ ಕಾಣಿಸ್ತಿಲ್ಲ. ಸಚಿವ ಕೆ.ಹೆಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್​ ಖಚಿತವಾಗುತ್ತಿದ್ದಂತೆಯೇ ಕೋಲಾರ ಜಿಲ್ಲೆಯ ಮೂವರು ಶಾಸಕರು ಹಾಗು ಇಬ್ಬರು ಪರಿಷತ್​ ಸದಸ್ಯರು ರಾಜೀನಾಮೆ ಪ್ರಹಸನಕ್ಕೆ ಮುಂದಾಗಿದ್ದಾರೆ.

ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್​ ನಿರ್ಧಾರಕ್ಕೆ ಬಿಡೋಣ, ಹೈಕಮಾಂಡ್​ ಯಾರಿಗೆ ಟಿಕೆಟ್​​ ಕೊಡುತ್ತದೆ ಅವರ ಪರವಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಗೆಲ್ಲಿಸಿಕೊಂಡು ಬರೋಣ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ರಮೇಶ್​ ಕುಮಾರ್​ ಹಾಗು ಕೆ.ಹೆಚ್​ ಮುನಿಯಪ್ಪರನ್ನು ಮುಖಾಮುಖಿ ಕೂರಿಸಿಕೊಂಡು ನಡೆಸಿದ ಸಂಧಾನ ಸಭೆಯಲ್ಲಿ ಒಂದು ಸಾಲಿನ ಅಜೆಂಡಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದರು. ಆದರೆ, ಹೈಕಮಾಂಡ್​ ಆಯ್ಕೆ ಚಿಕ್ಕಪೆದ್ದಣ್ಣ ಅನ್ನೋದು ಖಚಿತ ಆಗುತ್ತಿದ್ದಂತೆ ರಮೇಶ್​ ಕುಮಾರ್​ ಬಣದ ನಾಯಕರು ಹೈಡ್ರಾಮಾ ಶುರು ಮಾಡಿದ್ದಾರೆ. ಕಳೆದ ವಾರ ಎರಡೂ ಬಣದ ನಾಯಕರು ದೆಹಲಿಯ ಖರ್ಗೆ ನಿವಾಸದಲ್ಲಿ ಮಾತುಕತೆ ನಡೆಸಿದ್ದರು.

ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಪರಿಷತ್​ ಸದ್ಯರಾದ ನಸೀರ್ ಅಹ್ಮದ್, ಅನಿಲ್ ಕುಮಾರ್ ಸೇರಿ ಐವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಲೂರು ಶಾಸಕ ಕೆ.ವೈ ನಂಜೇಗೌಡ, “ಇಂದು ಕೋಲಾರ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು, ಇಬ್ಬರು ಎಂಎಲ್‌ಸಿಗಳು ರಾಜಿನಾಮೆ ನೀಡುತ್ತೇವೆ” ಎಂದು ಹೇಳಿದ್ದಾರೆ. ಇಂದು ಮಧ್ಯಾಹ್ನ ಸ್ಪೀಕರ್ ಕಚೇರಿ ಹಾಗು ಸಂಜೆ ವೇಳೆಗೆ ಮಂಗಳೂರಿಗೆ ತೆರಳಿ ಸ್ಪೀಕರ್ ಖಾದರ್​ಗೆ ರಾಜೀನಾಮೆ ಪತ್ರ ನೀಡುತ್ತೇವೆ ಎಂದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ನಾಯಕರ ಕಿತ್ತಾಟದ ಬಗ್ಗೆ ಮಾತನಾಡಿರುವ ಸಚಿವ ಕೆ ಎಚ್ ಮುನಿಯಪ್ಪ, “ಇವತ್ತು ಸಾಯಂಕಾಲ ಟಿಕೆಟ್​ ಯಾರಿಗೆ ಎಂಬುದು ಖಚಿತವಾಗಲಿದೆ. ರಮೇಶ್ ಕುಮಾರ್ ಆದಿಯಾಗಿ ಎಲ್ಲರ ಜೊತೆಗೆ ಚರ್ಚೆ ಮಾಡಿದ್ದೇವೆ. ಕೊತ್ತೂರು ಮಂಜುನಾಥ್, ನಂಜೇಗೌಡ, ಅನಿಲ್ ಕುಮಾರ್ ಸೇರಿ ಎಲ್ಲರ ಜೊತೆಗೂ ಚರ್ಚೆ ಆಗಿದೆ. ನಾನು ಕೋಲಾರದಲ್ಲಿ ಏಳು ಬಾರಿ ಗೆದ್ದಿದ್ದೇನೆ, ಅನುಭವ ಇದೆ. ಅವಕಾಶ ಮಾಡಿಕೊಡಿ ಎಂದು ಎಲ್ಲರಿಗೂ ಮನವಿ ಮಾಡಿದ್ದೇನೆ.ಟಿಕೆಟ್ ಸಿಗಬಹುದು ಎಂಬ ಆಶಾಭಾವನೆ ಇದೆ” ಎಂದರು.

“ಕೋಲಾರ-ಚಿಕ್ಕಬಳ್ಳಾಪುರ ತಡವಾದರೂ ಕೂಡ ಒಗ್ಗಟ್ಟಾಗಿದ್ದೇವೆ” ಎಂದರು. ಕೆಲ ಶಾಸಕರ ರಾಜೀನಾಮೆ ನೀಡುತ್ತೇವೆ ಎಂಬ ಬೆದರಿಕೆ ವಿಚಾರದ ಬಗ್ಗೆ ಮಾತನಾಡಿ, “ಅಭ್ಯರ್ಥಿ ಯಾರಾಗಬೇಕು ಎಂಬುದು ರಮೇಶ್ ಕುಮಾರ್ ಹಾಗೂ ಸಚಿವರ ಉಪಸ್ಥಿತಿಯಲ್ಲೇ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ ಅಂದಿದ್ದೇವೆ. ಇದಕ್ಕೆ ಮುಂದಾಳತ್ವ ರಮೇಶ್ ಕುಮಾರ್” ಎಂದು ಹೇಳುವ ಮೂಲಕ ಟಿಕೆಟ್ ತಮ್ಮ​ ಕುಟುಂಬಕ್ಕೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನಿಗಾಗಿ ಚೆನ್ನೈನಾದ್ಯಂತ ತೀವ್ರ ಶೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...