Homeಕರ್ನಾಟಕಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

ಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

- Advertisement -
- Advertisement -

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಸಚಿವ ಕೆ.ಎಚ್. ಮುನಿಯಪ್ಪ ಕುಟುಂಬಕ್ಕೆ ಕೊಡಬಾರದು ಎಂದು ಜಿಲ್ಲೆಯ ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಹಾಗೂ ಮುಖಂಡರು ಪಟ್ಟು ಹಿಡಿದಿದ್ದಾರೆ.

ಒಂದು ವೇಳೆ ಮುನಿಯಪ್ಪ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ನಾವೆಲ್ಲರೂ ರಾಜೀನಾಮೆ ನೀಡುತ್ತೇವೆ ಎಂದು ಬ್ಲಾಕ್‌ಮೇಲ್ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಒಳಜಗಳವನ್ನು ಟೀಕಿಸುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ, ಕೋಲಾರದ ಕಾಂಗ್ರೆಸ್‌ ಮುಖಂಡರ ಬಹಿರಂಗ ಜಗಳ ದೊಡ್ಡ ಹೊಡೆತವಾಗಿದೆ. ಪಕ್ಷದ ಐವರು ಶಾಸಕರು (ವಿಧಾನಸಭೆ ಸದಸ್ಯರು) ಮತ್ತು ಇಬ್ಬರು ಎಂಎಲ್‌ಸಿಗಳು (ವಿಧಾನ ಪರಿಷತ್ ಸದಸ್ಯರು) ತಾವು ಸೂಚಿಸಿದವರಿಗೆ ಟಿಕೆಟ್ ಕೈ ತಪ್ಪಿದ ಕಾರಣ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಈಗಾಗಲೇ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಕೋಲಾರ ಕ್ಷೇತ್ರದಿಂದ ಪಕ್ಷ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂಬುದು ಖಚಿತವಾಗುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್, “ನಾವು (ಮುನಿಯಪ್ಪ) ಕುಟುಂಬದ ಗುಲಾಮರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪಕ್ಷವು ಕುಟುಂಬದೊಳಗೆ ಟಿಕೆಟ್ ಹಂಚುತ್ತದೆ ಎಂದು ಶಾಸಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವುದಾಗಿ ಪಕ್ಷದ ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದಾರೆ. ಪಕ್ಷದ ಹೈಕಮಾಂಡ್ ತಮ್ಮ ಅಭಿಪ್ರಾಯಗಳನ್ನು ಆಲಿಸಿದೆ. ಆದರೆ, ತಮ್ಮ ಬೇಡಿಕೆಗಳಿಗೆ ಕಿವಿಗೊಡಲಿಲ್ಲ ಎಂದು ಆರೋಪಿಸಿದರು.

ಕೋಲಾರ ಲೋಕಸಭಾ ಚುನಾವಣಾ ಟಿಕೆಟ್​ ವಿಚಾರದಲ್ಲಿ ಕಾಂಗ್ರೆಸ್​ ನಾಯಕರ ಜಂಗೀಕುಸ್ತಿ ಚುನಾವಣೆ ಮುಕ್ತಾಯವಾದರೂ ನಿಲ್ಲುವ ಲಕ್ಷಣ ಕಾಣಿಸ್ತಿಲ್ಲ. ಸಚಿವ ಕೆ.ಹೆಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್​ ಖಚಿತವಾಗುತ್ತಿದ್ದಂತೆಯೇ ಕೋಲಾರ ಜಿಲ್ಲೆಯ ಮೂವರು ಶಾಸಕರು ಹಾಗು ಇಬ್ಬರು ಪರಿಷತ್​ ಸದಸ್ಯರು ರಾಜೀನಾಮೆ ಪ್ರಹಸನಕ್ಕೆ ಮುಂದಾಗಿದ್ದಾರೆ.

ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್​ ನಿರ್ಧಾರಕ್ಕೆ ಬಿಡೋಣ, ಹೈಕಮಾಂಡ್​ ಯಾರಿಗೆ ಟಿಕೆಟ್​​ ಕೊಡುತ್ತದೆ ಅವರ ಪರವಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಗೆಲ್ಲಿಸಿಕೊಂಡು ಬರೋಣ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ರಮೇಶ್​ ಕುಮಾರ್​ ಹಾಗು ಕೆ.ಹೆಚ್​ ಮುನಿಯಪ್ಪರನ್ನು ಮುಖಾಮುಖಿ ಕೂರಿಸಿಕೊಂಡು ನಡೆಸಿದ ಸಂಧಾನ ಸಭೆಯಲ್ಲಿ ಒಂದು ಸಾಲಿನ ಅಜೆಂಡಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದರು. ಆದರೆ, ಹೈಕಮಾಂಡ್​ ಆಯ್ಕೆ ಚಿಕ್ಕಪೆದ್ದಣ್ಣ ಅನ್ನೋದು ಖಚಿತ ಆಗುತ್ತಿದ್ದಂತೆ ರಮೇಶ್​ ಕುಮಾರ್​ ಬಣದ ನಾಯಕರು ಹೈಡ್ರಾಮಾ ಶುರು ಮಾಡಿದ್ದಾರೆ. ಕಳೆದ ವಾರ ಎರಡೂ ಬಣದ ನಾಯಕರು ದೆಹಲಿಯ ಖರ್ಗೆ ನಿವಾಸದಲ್ಲಿ ಮಾತುಕತೆ ನಡೆಸಿದ್ದರು.

ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಪರಿಷತ್​ ಸದ್ಯರಾದ ನಸೀರ್ ಅಹ್ಮದ್, ಅನಿಲ್ ಕುಮಾರ್ ಸೇರಿ ಐವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಲೂರು ಶಾಸಕ ಕೆ.ವೈ ನಂಜೇಗೌಡ, “ಇಂದು ಕೋಲಾರ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು, ಇಬ್ಬರು ಎಂಎಲ್‌ಸಿಗಳು ರಾಜಿನಾಮೆ ನೀಡುತ್ತೇವೆ” ಎಂದು ಹೇಳಿದ್ದಾರೆ. ಇಂದು ಮಧ್ಯಾಹ್ನ ಸ್ಪೀಕರ್ ಕಚೇರಿ ಹಾಗು ಸಂಜೆ ವೇಳೆಗೆ ಮಂಗಳೂರಿಗೆ ತೆರಳಿ ಸ್ಪೀಕರ್ ಖಾದರ್​ಗೆ ರಾಜೀನಾಮೆ ಪತ್ರ ನೀಡುತ್ತೇವೆ ಎಂದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ನಾಯಕರ ಕಿತ್ತಾಟದ ಬಗ್ಗೆ ಮಾತನಾಡಿರುವ ಸಚಿವ ಕೆ ಎಚ್ ಮುನಿಯಪ್ಪ, “ಇವತ್ತು ಸಾಯಂಕಾಲ ಟಿಕೆಟ್​ ಯಾರಿಗೆ ಎಂಬುದು ಖಚಿತವಾಗಲಿದೆ. ರಮೇಶ್ ಕುಮಾರ್ ಆದಿಯಾಗಿ ಎಲ್ಲರ ಜೊತೆಗೆ ಚರ್ಚೆ ಮಾಡಿದ್ದೇವೆ. ಕೊತ್ತೂರು ಮಂಜುನಾಥ್, ನಂಜೇಗೌಡ, ಅನಿಲ್ ಕುಮಾರ್ ಸೇರಿ ಎಲ್ಲರ ಜೊತೆಗೂ ಚರ್ಚೆ ಆಗಿದೆ. ನಾನು ಕೋಲಾರದಲ್ಲಿ ಏಳು ಬಾರಿ ಗೆದ್ದಿದ್ದೇನೆ, ಅನುಭವ ಇದೆ. ಅವಕಾಶ ಮಾಡಿಕೊಡಿ ಎಂದು ಎಲ್ಲರಿಗೂ ಮನವಿ ಮಾಡಿದ್ದೇನೆ.ಟಿಕೆಟ್ ಸಿಗಬಹುದು ಎಂಬ ಆಶಾಭಾವನೆ ಇದೆ” ಎಂದರು.

“ಕೋಲಾರ-ಚಿಕ್ಕಬಳ್ಳಾಪುರ ತಡವಾದರೂ ಕೂಡ ಒಗ್ಗಟ್ಟಾಗಿದ್ದೇವೆ” ಎಂದರು. ಕೆಲ ಶಾಸಕರ ರಾಜೀನಾಮೆ ನೀಡುತ್ತೇವೆ ಎಂಬ ಬೆದರಿಕೆ ವಿಚಾರದ ಬಗ್ಗೆ ಮಾತನಾಡಿ, “ಅಭ್ಯರ್ಥಿ ಯಾರಾಗಬೇಕು ಎಂಬುದು ರಮೇಶ್ ಕುಮಾರ್ ಹಾಗೂ ಸಚಿವರ ಉಪಸ್ಥಿತಿಯಲ್ಲೇ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ ಅಂದಿದ್ದೇವೆ. ಇದಕ್ಕೆ ಮುಂದಾಳತ್ವ ರಮೇಶ್ ಕುಮಾರ್” ಎಂದು ಹೇಳುವ ಮೂಲಕ ಟಿಕೆಟ್ ತಮ್ಮ​ ಕುಟುಂಬಕ್ಕೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನಿಗಾಗಿ ಚೆನ್ನೈನಾದ್ಯಂತ ತೀವ್ರ ಶೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...