Homeಕರ್ನಾಟಕಕೋಲಾರ: ಕಾಂಗ್ರೆಸ್‌ ಮುಖಂಡನ ಹತ್ಯೆ; ಆರೋಪಿಗಳ ಮೇಲೆ ಪೊಲೀಸ್‌ ಫೈರಿಂಗ್‌

ಕೋಲಾರ: ಕಾಂಗ್ರೆಸ್‌ ಮುಖಂಡನ ಹತ್ಯೆ; ಆರೋಪಿಗಳ ಮೇಲೆ ಪೊಲೀಸ್‌ ಫೈರಿಂಗ್‌

- Advertisement -
- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ನಡೆದಿದ್ದು,  ಕೊಲೆ ಆರೋಪಿಗಳ ಪೈಕಿ ಮೂವರ ಕಾಲಿಗೆ ಪೊಲೀಸ್ ಫೈರಿಂಗ್‌ ಮಾಡಿದ್ದಾರೆ.

ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಎಂ.ಶ್ರೀನಿವಾಸ್ ಅವರ ಮೇಲೆ ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಎದೆ, ತಲೆ ಸಹಿತ ದೇಹದ ಹಲವೆಡೆ ಗಂಭೀರ ಗಾಯಗಳಾಗಿತ್ತು. ಅವರನ್ನು ಕೋಲಾರದ ಜಾಲಪ್ಪಾ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಪ್ರತ್ಯಕ್ಷದರ್ಶಿ ಅಮರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಬಾರ್ ಕಾಮಗಾರಿ ವೀಕ್ಷಣೆ ಮುಗಿಸಿ ತೋಟದ ಮನೆಗೆ ಬಂದಿದ್ದೆವು. ಎರಡು ಬೈಕ್ ನಲ್ಲಿ ಆರು ಜನ ತೋಟದ ಮನೆಗೆ ಬಂದು ಅಂಕಲ್ ಚೆನ್ನಾಗಿದ್ದೀರ ಎಂದು ಮಾತನಾಡಿಸಿದರು. ಶೇಕ್ ಹ್ಯಾಂಡ್ ಕೊಡುವ ನೆಪದಲ್ಲಿ ಏಕಾಏಕಿ ತಲವಾರಿನಿಂದ ದಾಳಿ ಮಾಡಿದ್ದಾರೆ ಎಂದು  ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ, ಸಂತೋಷ್‌ ಗೆ ಬಂಧಿಸಲಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್​ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್​ಪೆಕ್ಟರ್​ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ​

ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಮತ್ತು ಆರೋಪಿಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ 6 ಆರೋಪಿಗಳ ಪೈಕಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗೆ ಶೋಧ ಕಾರ್ಯ ಮುಂದುವರಿದಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

0
ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಲ ಪಂಥೀಯ ಎಕ್ಸ್ ಬಳಕೆದಾರ 'ಜಿತೇಂದ್ರ ಪ್ರತಾಪ್ ಸಿಂಗ್' ವಿಡಿಯೋ ಹಂಚಿಕೊಂಡಿದ್ದು, "...