Homeಮುಖಪುಟಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಬಿಜೆಪಿ ಕಾರ್ಯಕರ್ತರು ಮತ್ತು ಅವರ ಬಾಡಿಗೆ ಗೂಂಡಾಗಳು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಕಲ್ಲು ತೂರಾಟ ನಡೆಸಿದಾಗ ಗುಂಪು ಚದುರಿಸಲು ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಿಜೆಪಿ ‘ನಬನ್ನಾ ಚಲೋ’ ರ್‍ಯಾಲಿ ಆಯೋಜಿಸಿತ್ತು.

ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದು, ಜನರು ಗುಂಪು ಸೇರುವಂತಿಲ್ಲ ಎಂದು ಸೂಚಿಸಿದ್ದ ರಾಜ್ಯ ಸರ್ಕಾರ ಬಿಜೆಪಿ ಆಯೋಜಿಸಿದ್ದ ‘ನಬನ್ನಾ ಚಲೋ’ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

“ನಾವು ಶಾಂತಿಯುವಾಗಿ ಪ್ರತಿಭಟಿಸುತ್ತಿದ್ದೇವೆ, ಆದರೆ ಮಮತಾ ಜಿ ನಮ್ಮ ಶಾಂತಿಯುತ ಪ್ರದರ್ಶನವನ್ನು ಹಿಂಸಾತ್ಮಕ ಪ್ರತಿಭಟನೆಯನ್ನಾಗಿ ಮಾಡಲು ಪ್ರಯತ್ನಿಸಿದ್ದಾರೆ. ಗೂಂಡಾಗಳು, ಪೊಲೀಸರೊಂದಿಗೆ ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠೀ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ. ಖಿದಿರ್ಪುರ ಕಡೆಯಿಂದ ಕಲ್ಲು ತೂರಾಟ ನಡೆಸಲಾಗುತ್ತಿದೆ. ಪೊಲೀಸರು ಅದನ್ನು ಯಾಕೆ ನೋಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾದ ಮುಖ್ಯಸ್ಥ, ’ ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.

ರ್‍ಯಾಲಿಯಲ್ಲಿ ಬಿಜೆಪಿ ವರ್ತನೆ ಬಗ್ಗೆ ಕಿಡಿಕಾರಿರುವ ಟಿಎಂಸಿ ಮುಖಂಡ ಬರ್ತ್ಯಾ ಬಸು ’ನಿಮ್ಮ ಗೂಂಡಾಗಿರಿಯಿಂದಾಗಿ ಪ್ರತಿ ಬಾರಿ ಎಷ್ಟು ಸಾರ್ವಜನಿಕ ಆಸ್ತಿ ನಾಶವಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಗೆ ಟ್ಯಾಗ್ ಮಾಡಿ ’ನಿಮ್ಮ ಬಾಡಿಗೆ ಗೂಂಡಾಗಳು ಮತ್ತು ಹೊರಗಿನವರು ಮಾಡಿದ ಈ ಹಾನಿಗಳಿಗೆ ಯಾರು ಹಣ ಪಾವತಿಸುತ್ತಾರೆ..?’ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. “ನೈರ್ಮಲ್ಯೀಕರಣದ ಉದ್ದೇಶಕ್ಕಾಗಿ” ಸಚಿವಾಲಯದ ಕಟ್ಟಡದ ಎಲ್ಲಾ ಕಚೇರಿಗಳನ್ನು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ನಿನ್ನೆ ಸಂಜೆಯೇ  ಘೋಷಿಸಿತ್ತು.


ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...